<p><strong>ಕೋಲಾರ:</strong> ‘ಹಬ್ಬಗಳು ಬಾಂಧವ್ಯ ಬೆಸೆಯುವ ಸಾಂಸ್ಕೃತಿಕ ಹಾಗೂ ಧಾರ್ಮಿಕ ಆಚರಣೆಗಳಾಗಿದ್ದು, ಗೌರಿ ಗಣೇಶ ಹಬ್ಬವು ಸರ್ವರಿಗೂ ಶುಭ ಉಂಟು ಮಾಡಲಿ. ಜಿಲ್ಲೆಯಲ್ಲಿ ಉತ್ತಮ ಮಳೆ, ಬೆಳೆಯಾಗಿ ರೈತರ ಬದುಕು ಹಸನಾಗಲಿ’ ಎಂದು ಚಂದನವನ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಚಂದನ್ಗೌಡ ಆಶಿಸಿದರು.</p>.<p>ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಚಂದನವನ ಚಾರಿಟಬಲ್ ಟ್ರಸ್ಟ್ ವತಿಯಿಂದ ತಾಲ್ಲೂಕಿನ ಅಮ್ಮನಲ್ಲೂರು ಮತ್ತು ಕ್ಯಾಲನೂರು ಗ್ರಾಮದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಗರ್ಭಿಣಿಯರಿಗೆ ಮಡಿಲು ತುಂಬುವ ಹಾಗೂ ಯುವಕರಿಗೆ ಗಣೇಶ ಮೂರ್ತಿ ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ನಾನು ಆತ್ಮತೃಪ್ತಿಗಾಗಿ ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದೇನೆ. ಅರ್ಹರಿಗೆ ಅವಶ್ಯಕತೆಗಳನ್ನು ಅಗತ್ಯ ಸಂದರ್ಭದಲ್ಲಿ ಒದಗಿಸಿದಾಗ ಪಡೆದವರಿಗೂ ಹಾಗೂ ನೀಡಿದವರಿಗೂ ಆತ್ಮತೃಪ್ತಿ ಬರುತ್ತದೆ. ರಾಜಕೀಯ ಲಾಭಕ್ಕಾಗಿ ಸಮಾಜ ಸೇವೆ ಮಾಡುತ್ತಿಲ್ಲ’ ಎಂದು ಹೇಳಿದರು.</p>.<p>‘ಕೋವಿಡ್ ಸಂಕಷ್ಟದಿಂದ ಬಡ ಜನರು, ಜನಸಾಮಾನ್ಯರು ಬದುಕು ಬೀದಿ ಪಾಲಾಗಿದೆ. ಈ ಸಂಕಷ್ಟ ದೂರ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ. ಜನರು ಕೋವಿಡ್ ಸುರಕ್ಷತಾ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಮತ್ತು ತಪ್ಪದೇ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು. ಈ ವಿಚಾರದಲ್ಲಿ ನಿರ್ಲಕ್ಷ್ಯ ಬೇಡ. ವದಂತಿಗೆ ಕಿವಿಗೊಡದೆ ಲಸಿಕೆ ಹಾಕಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಗರ್ಭಿಣಿಯರಿಗೆ ಬಾಗಿನ ಅರ್ಪಿಸಲಾಯಿತು. ಕೊರೊನಾ ವಾರಿಯರ್ಸ್ಗಳಿಗೆ ಸೀರೆ ಮತ್ತು ಗ್ರಾಮಗಳ ಯುವಕ ಸಂಘಗಳಿಗೆ ಗಣೇಶ ಮೂರ್ತಿಗಳನ್ನು ವಿತರಿಸಲಾಯಿತು. ಬೆಳಮಾರನಹಳ್ಳಿ ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರಗೌಡ, ಕ್ಯಾಲನೂರು ಗ್ರಾ.ಪಂ ಉಪಾಧ್ಯಕ್ಷ ಅನಿಲ್, ಸದಸ್ಯರಾದ ಚಿಕ್ಕಪ್ಪಯ್ಯ, ಎ.ಟಿ.ರಾಮಪ್ಪ, ನಾಗೇಶ್, ವೈದ್ಯರಾದ ಡಾ.ವಿನಯ್, ಡಾ.ಅಲ್ತಾಫ್ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ಹಬ್ಬಗಳು ಬಾಂಧವ್ಯ ಬೆಸೆಯುವ ಸಾಂಸ್ಕೃತಿಕ ಹಾಗೂ ಧಾರ್ಮಿಕ ಆಚರಣೆಗಳಾಗಿದ್ದು, ಗೌರಿ ಗಣೇಶ ಹಬ್ಬವು ಸರ್ವರಿಗೂ ಶುಭ ಉಂಟು ಮಾಡಲಿ. ಜಿಲ್ಲೆಯಲ್ಲಿ ಉತ್ತಮ ಮಳೆ, ಬೆಳೆಯಾಗಿ ರೈತರ ಬದುಕು ಹಸನಾಗಲಿ’ ಎಂದು ಚಂದನವನ ಚಾರಿಟಬಲ್ ಟ್ರಸ್ಟ್ ಅಧ್ಯಕ್ಷ ಚಂದನ್ಗೌಡ ಆಶಿಸಿದರು.</p>.<p>ಗೌರಿ ಗಣೇಶ ಹಬ್ಬದ ಹಿನ್ನೆಲೆಯಲ್ಲಿ ಚಂದನವನ ಚಾರಿಟಬಲ್ ಟ್ರಸ್ಟ್ ವತಿಯಿಂದ ತಾಲ್ಲೂಕಿನ ಅಮ್ಮನಲ್ಲೂರು ಮತ್ತು ಕ್ಯಾಲನೂರು ಗ್ರಾಮದಲ್ಲಿ ಗುರುವಾರ ಹಮ್ಮಿಕೊಂಡಿದ್ದ ಗರ್ಭಿಣಿಯರಿಗೆ ಮಡಿಲು ತುಂಬುವ ಹಾಗೂ ಯುವಕರಿಗೆ ಗಣೇಶ ಮೂರ್ತಿ ವಿತರಿಸುವ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>‘ನಾನು ಆತ್ಮತೃಪ್ತಿಗಾಗಿ ಸಮಾಜ ಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದೇನೆ. ಅರ್ಹರಿಗೆ ಅವಶ್ಯಕತೆಗಳನ್ನು ಅಗತ್ಯ ಸಂದರ್ಭದಲ್ಲಿ ಒದಗಿಸಿದಾಗ ಪಡೆದವರಿಗೂ ಹಾಗೂ ನೀಡಿದವರಿಗೂ ಆತ್ಮತೃಪ್ತಿ ಬರುತ್ತದೆ. ರಾಜಕೀಯ ಲಾಭಕ್ಕಾಗಿ ಸಮಾಜ ಸೇವೆ ಮಾಡುತ್ತಿಲ್ಲ’ ಎಂದು ಹೇಳಿದರು.</p>.<p>‘ಕೋವಿಡ್ ಸಂಕಷ್ಟದಿಂದ ಬಡ ಜನರು, ಜನಸಾಮಾನ್ಯರು ಬದುಕು ಬೀದಿ ಪಾಲಾಗಿದೆ. ಈ ಸಂಕಷ್ಟ ದೂರ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ. ಜನರು ಕೋವಿಡ್ ಸುರಕ್ಷತಾ ಮಾರ್ಗಸೂಚಿಯನ್ನು ಕಡ್ಡಾಯವಾಗಿ ಪಾಲಿಸಬೇಕು ಮತ್ತು ತಪ್ಪದೇ ಕೋವಿಡ್ ಲಸಿಕೆ ಹಾಕಿಸಿಕೊಳ್ಳಬೇಕು. ಈ ವಿಚಾರದಲ್ಲಿ ನಿರ್ಲಕ್ಷ್ಯ ಬೇಡ. ವದಂತಿಗೆ ಕಿವಿಗೊಡದೆ ಲಸಿಕೆ ಹಾಕಿಸಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಗರ್ಭಿಣಿಯರಿಗೆ ಬಾಗಿನ ಅರ್ಪಿಸಲಾಯಿತು. ಕೊರೊನಾ ವಾರಿಯರ್ಸ್ಗಳಿಗೆ ಸೀರೆ ಮತ್ತು ಗ್ರಾಮಗಳ ಯುವಕ ಸಂಘಗಳಿಗೆ ಗಣೇಶ ಮೂರ್ತಿಗಳನ್ನು ವಿತರಿಸಲಾಯಿತು. ಬೆಳಮಾರನಹಳ್ಳಿ ಗ್ರಾ.ಪಂ ಅಧ್ಯಕ್ಷ ಚಂದ್ರಶೇಖರಗೌಡ, ಕ್ಯಾಲನೂರು ಗ್ರಾ.ಪಂ ಉಪಾಧ್ಯಕ್ಷ ಅನಿಲ್, ಸದಸ್ಯರಾದ ಚಿಕ್ಕಪ್ಪಯ್ಯ, ಎ.ಟಿ.ರಾಮಪ್ಪ, ನಾಗೇಶ್, ವೈದ್ಯರಾದ ಡಾ.ವಿನಯ್, ಡಾ.ಅಲ್ತಾಫ್ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>