<p><strong>ಮುಳಬಾಗಿಲು: </strong>ಮುಳಬಾಗಿಲು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾಗಿ ಗೊಲ್ಲಹಳ್ಳಿ ವೆಂಕಟೇಶ್ ಮತ್ತು ಉಪಾಧ್ಯಕ್ಷರಾಗಿ ರೆಡ್ಡಪ್ಪರೆಡ್ಡಿ ಬುಧವಾರ ಅವಿರೋಧವಾಗಿ ಆಯ್ಕೆಯಾದರು.</p>.<p>ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಅವರಿಬ್ಬರೇ ನಾಮಪತ್ರ ಸಲ್ಲಿಸಿದ ಕಾರಣ ಚುನಾವಣಾಧಿಕಾರಿ ಕೆ.ಎನ್.ರಾಜಶೇಖರ್ ಅರವ ಆಯ್ಕೆಯನ್ನು ಘೋಷಿಸಿದರು.</p>.<p>ಒಟ್ಟು 13 ಚುನಾಯಿತ ಪ್ರತಿನಿಧಿಗಳಿದ್ದು, ಮೂರು ಮಂದಿ ನಾಮಕರಣ ಗೊಂಡಿದ್ದಾರೆ. ಅವರಲ್ಲಿ ಜೆಡಿಎಸ್ 4, ಕೊತ್ತೂರು ಮಂಜುನಾಥ್ ಬೆಂಬಲಿತ 9 ನಿರ್ದೇಶಕರಿದ್ದಾರೆ. ಅಧ್ಯಕ್ಷರಾಗಿ ಆಯ್ಕೆಯಾದ ವೆಂಕಟೇಶ್ ಅವರು ಮುಂಚೆ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡು ನಂತರ ಕೊತ್ತೂರು ಮಂಜುನಾಥ್ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ.</p>.<p>ಎಪಿಎಂಸಿ ಪ್ರಾರಂಭವಾಗಿ ಐವತ್ತು ವರ್ಷಗಳಾದರೂ ಇದುವರೆವಿಗೂ ಪರಿಶಿಷ್ಟ ಜಾತಿಗೆ ಸೇರಿದವರು ಅಧ್ಯಕ್ಷರಾಗಿರಲಿಲ್ಲ. ಆದ್ದರಿಂದ ತಮ್ಮನ್ನು ಅಧ್ಯಕ್ಷರನ್ನಾಗಿಸಿ ಸಾಮಾಜಿಕ ನ್ಯಾಯ ದೊರಕಿಸಿಕೊಡಬೇಕು ಎಂದು ವೆಂಕಟೇಶ್ ಕಳೆದ 20 ತಿಂಗಳ ಹಿಂದೆಯೇ ಅವಕಾಶಕ್ಕೆ ಪ್ರಯತ್ನಿಸಿದ್ದರು. ಕೊನೆ ಗಳಿಗೆಯಲ್ಲಿ ಸ್ಥಾನ ತಪ್ಪಿಹೋಗಿತ್ತು.</p>.<p>ಶತಾಯ ಗತಾಯ ಈ ಬಾರಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಲೇಬೇಕೆಂದು ಪ್ರಯತ್ನಿಸಿದ ವೆಂಕಟೇಶ್ ಅವರಿಗೆ ಹಿಂದೆ ತಮ್ಮ ಜತೆಗಿದ್ದ ಜೆಡಿಎಸ್ ಸದಸ್ಯರ ಬೆಂಬಲ ಪಡೆದುಕೊಂಡರು. ಇದರೊಂದಿಗೆ ಕೊತ್ತೂರು ಮಂಜುನಾಥ್ ಹಾಗೂ ಸಚಿವ ಎಚ್.ನಾಗೇಶ್ ಅವರನ್ನು ಮನವೊಲಿಸಿ ಕೊನೆಗೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.</p>.<p>ಬದ್ಧ ವೈರಿಗಳಾಗಿದ್ದ ಕೊತ್ತೂರು ಮಂಜುನಾಥ್ ಹಾಗೂ ನಾಗೇಶ್ ಎಪಿಎಂಸಿ ಚುನಾವಣೆಯಲ್ಲಿ ವೆಂಕಟೇಶ್ ಅವರನ್ನು ಅಧ್ಯಕ್ಷರನ್ನಾಗಿ ಮಾಡಲು ಒಂದಾಗಿದ್ದಾರೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ನಡೆದಿದೆ.</p>.<p>ಆಯ್ಕೆಯಾದ ನಂತರ ಮಾತನಾಡಿದ ಗೊಲ್ಲಹಳ್ಳಿ ವೆಂಕಟೇಶ್, ಪ್ರಥಮ ಬಾರಿಗೆ ಪರಿಶಿಷ್ಟ ಜಾತಿಗೆ ಸೇರಿದವರು ಅಧ್ಯಕ್ಷರಾಗಿರುವುದು ಸಾಮಾಜಿಕ ನ್ಯಾಯಕ್ಕೆ ಸಿಕ್ಕ ವಿಜಯವಾಗಿದೆ ಎಂದು ಹೇಳಿದರು.</p>.<p>ಮಾಜಿ ಅಧ್ಯಕ್ಷ ಸಿ.ರಘುಪತಿ, ಸದಸ್ಯರಾದ ಆವಣಿಬಾಬು, ನಂಗಲಿ ವಿಶ್ವನಾಥರೆಡ್ಡಿ, ಜಯರಾಮರೆಡ್ಡಿ, ಎಪಿಎಂಸಿ ಕಾರ್ಯದರ್ಶಿ ಎನ್.ಕಿರಣ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಿಲು: </strong>ಮುಳಬಾಗಿಲು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷರಾಗಿ ಗೊಲ್ಲಹಳ್ಳಿ ವೆಂಕಟೇಶ್ ಮತ್ತು ಉಪಾಧ್ಯಕ್ಷರಾಗಿ ರೆಡ್ಡಪ್ಪರೆಡ್ಡಿ ಬುಧವಾರ ಅವಿರೋಧವಾಗಿ ಆಯ್ಕೆಯಾದರು.</p>.<p>ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಅವರಿಬ್ಬರೇ ನಾಮಪತ್ರ ಸಲ್ಲಿಸಿದ ಕಾರಣ ಚುನಾವಣಾಧಿಕಾರಿ ಕೆ.ಎನ್.ರಾಜಶೇಖರ್ ಅರವ ಆಯ್ಕೆಯನ್ನು ಘೋಷಿಸಿದರು.</p>.<p>ಒಟ್ಟು 13 ಚುನಾಯಿತ ಪ್ರತಿನಿಧಿಗಳಿದ್ದು, ಮೂರು ಮಂದಿ ನಾಮಕರಣ ಗೊಂಡಿದ್ದಾರೆ. ಅವರಲ್ಲಿ ಜೆಡಿಎಸ್ 4, ಕೊತ್ತೂರು ಮಂಜುನಾಥ್ ಬೆಂಬಲಿತ 9 ನಿರ್ದೇಶಕರಿದ್ದಾರೆ. ಅಧ್ಯಕ್ಷರಾಗಿ ಆಯ್ಕೆಯಾದ ವೆಂಕಟೇಶ್ ಅವರು ಮುಂಚೆ ಜೆಡಿಎಸ್ ಪಕ್ಷದಲ್ಲಿ ಗುರುತಿಸಿಕೊಂಡು ನಂತರ ಕೊತ್ತೂರು ಮಂಜುನಾಥ್ ಗುಂಪಿನಲ್ಲಿ ಗುರುತಿಸಿಕೊಂಡಿದ್ದಾರೆ.</p>.<p>ಎಪಿಎಂಸಿ ಪ್ರಾರಂಭವಾಗಿ ಐವತ್ತು ವರ್ಷಗಳಾದರೂ ಇದುವರೆವಿಗೂ ಪರಿಶಿಷ್ಟ ಜಾತಿಗೆ ಸೇರಿದವರು ಅಧ್ಯಕ್ಷರಾಗಿರಲಿಲ್ಲ. ಆದ್ದರಿಂದ ತಮ್ಮನ್ನು ಅಧ್ಯಕ್ಷರನ್ನಾಗಿಸಿ ಸಾಮಾಜಿಕ ನ್ಯಾಯ ದೊರಕಿಸಿಕೊಡಬೇಕು ಎಂದು ವೆಂಕಟೇಶ್ ಕಳೆದ 20 ತಿಂಗಳ ಹಿಂದೆಯೇ ಅವಕಾಶಕ್ಕೆ ಪ್ರಯತ್ನಿಸಿದ್ದರು. ಕೊನೆ ಗಳಿಗೆಯಲ್ಲಿ ಸ್ಥಾನ ತಪ್ಪಿಹೋಗಿತ್ತು.</p>.<p>ಶತಾಯ ಗತಾಯ ಈ ಬಾರಿ ಅಧ್ಯಕ್ಷ ಸ್ಥಾನಕ್ಕೆ ಆಯ್ಕೆಯಾಗಲೇಬೇಕೆಂದು ಪ್ರಯತ್ನಿಸಿದ ವೆಂಕಟೇಶ್ ಅವರಿಗೆ ಹಿಂದೆ ತಮ್ಮ ಜತೆಗಿದ್ದ ಜೆಡಿಎಸ್ ಸದಸ್ಯರ ಬೆಂಬಲ ಪಡೆದುಕೊಂಡರು. ಇದರೊಂದಿಗೆ ಕೊತ್ತೂರು ಮಂಜುನಾಥ್ ಹಾಗೂ ಸಚಿವ ಎಚ್.ನಾಗೇಶ್ ಅವರನ್ನು ಮನವೊಲಿಸಿ ಕೊನೆಗೂ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.</p>.<p>ಬದ್ಧ ವೈರಿಗಳಾಗಿದ್ದ ಕೊತ್ತೂರು ಮಂಜುನಾಥ್ ಹಾಗೂ ನಾಗೇಶ್ ಎಪಿಎಂಸಿ ಚುನಾವಣೆಯಲ್ಲಿ ವೆಂಕಟೇಶ್ ಅವರನ್ನು ಅಧ್ಯಕ್ಷರನ್ನಾಗಿ ಮಾಡಲು ಒಂದಾಗಿದ್ದಾರೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ನಡೆದಿದೆ.</p>.<p>ಆಯ್ಕೆಯಾದ ನಂತರ ಮಾತನಾಡಿದ ಗೊಲ್ಲಹಳ್ಳಿ ವೆಂಕಟೇಶ್, ಪ್ರಥಮ ಬಾರಿಗೆ ಪರಿಶಿಷ್ಟ ಜಾತಿಗೆ ಸೇರಿದವರು ಅಧ್ಯಕ್ಷರಾಗಿರುವುದು ಸಾಮಾಜಿಕ ನ್ಯಾಯಕ್ಕೆ ಸಿಕ್ಕ ವಿಜಯವಾಗಿದೆ ಎಂದು ಹೇಳಿದರು.</p>.<p>ಮಾಜಿ ಅಧ್ಯಕ್ಷ ಸಿ.ರಘುಪತಿ, ಸದಸ್ಯರಾದ ಆವಣಿಬಾಬು, ನಂಗಲಿ ವಿಶ್ವನಾಥರೆಡ್ಡಿ, ಜಯರಾಮರೆಡ್ಡಿ, ಎಪಿಎಂಸಿ ಕಾರ್ಯದರ್ಶಿ ಎನ್.ಕಿರಣ್ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>