<p><strong>ಕೋಲಾರ</strong>: ತಾಲ್ಲೂಕಿನ ಪಾರ್ಶ್ವಗಾನಹಳ್ಳಿಯ ರೈತರೊಬ್ಬರ ಜಮೀನಿನಲ್ಲಿ ಗುರುವಾರ ವಿದ್ಯುತ್ ತಂತಿ ತುಂಡಾಗಿ ಬಿದ್ದು ಸಂಭವಿಸಿದ ಅಗ್ನಿ ಅನಾಹುತದಲ್ಲಿ ಸುಮಾರು ₹ 5 ಲಕ್ಷ ರೂಪಾಯಿ ಮೌಲ್ಯದ ರಾಗಿ ಬೆಳೆ ಸುಟ್ಟು ಭಸ್ಮವಾಗಿದೆ.</p>.<p>ಗ್ರಾಮದ ರೈತ ಮುನಿಯಪ್ಪ ಅವರ ಜಮೀನಿನ ಮೇಲ್ಭಾಗದಲ್ಲಿ ಹಾದು ಹೋಗಿರುವ ವಿದ್ಯುತ್ ತಂತಿ ತುಂಡಾಗಿ ಕೆಳಗೆ ಬಿದ್ದು ಈ ಅನಾಹುತ ಸಂಭವಿಸಿದೆ. ತುಂಡಾಗಿ ಬಿದ್ದ ವಿದ್ಯುತ್ ತಂತಿ ನೆಲಕ್ಕೆ ತಾಗಿ ಶಾರ್ಟ್ ಸರ್ಕಿಟ್ ಸಂಭವಿಸಿ ರಾಗಿ ಕಂತೆಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬರುವಷ್ಟರಲ್ಲಿ ರಾಗಿ ಕಂತೆಗಳು ಸಂಪೂರ್ಣ ಸುಟ್ಟು ಹೋಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ಜಮೀನಿನ ಮೇಲ್ಭಾಗದಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿಗಳು ತುಂಬಾ ಹಳೆಯವಾಗಿದ್ದವು. ಹೀಗಾಗಿ ವಿದ್ಯುತ್ ಬದಲಿಸುವಂತೆ ಬೆಸ್ಕಾಂ ಸಿಬ್ಬಂದಿಗೆ ಹಲವು ಬಾರಿ ಮನವಿ ಮಾಡಿದ್ದೆವು. ಆದರೆ, ಸಿಬ್ಬಂದಿ ಮನವಿಗೆ ಸ್ಪಂದಿಸಿರಲಿಲ್ಲ. ಬೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯವೇ ಅಗ್ನಿ ಅವಘಡಕ್ಕೆ ಕಾರಣ’ ಎಂದು ಮುನಿಯಪ್ಪ ಆರೋಪಿಸಿದರು.</p>.<p>ಘಟನೆ ಸಂಬಂಧ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ತಾಲ್ಲೂಕಿನ ಪಾರ್ಶ್ವಗಾನಹಳ್ಳಿಯ ರೈತರೊಬ್ಬರ ಜಮೀನಿನಲ್ಲಿ ಗುರುವಾರ ವಿದ್ಯುತ್ ತಂತಿ ತುಂಡಾಗಿ ಬಿದ್ದು ಸಂಭವಿಸಿದ ಅಗ್ನಿ ಅನಾಹುತದಲ್ಲಿ ಸುಮಾರು ₹ 5 ಲಕ್ಷ ರೂಪಾಯಿ ಮೌಲ್ಯದ ರಾಗಿ ಬೆಳೆ ಸುಟ್ಟು ಭಸ್ಮವಾಗಿದೆ.</p>.<p>ಗ್ರಾಮದ ರೈತ ಮುನಿಯಪ್ಪ ಅವರ ಜಮೀನಿನ ಮೇಲ್ಭಾಗದಲ್ಲಿ ಹಾದು ಹೋಗಿರುವ ವಿದ್ಯುತ್ ತಂತಿ ತುಂಡಾಗಿ ಕೆಳಗೆ ಬಿದ್ದು ಈ ಅನಾಹುತ ಸಂಭವಿಸಿದೆ. ತುಂಡಾಗಿ ಬಿದ್ದ ವಿದ್ಯುತ್ ತಂತಿ ನೆಲಕ್ಕೆ ತಾಗಿ ಶಾರ್ಟ್ ಸರ್ಕಿಟ್ ಸಂಭವಿಸಿ ರಾಗಿ ಕಂತೆಗಳಿಗೆ ಬೆಂಕಿ ಹೊತ್ತಿಕೊಂಡಿದೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬರುವಷ್ಟರಲ್ಲಿ ರಾಗಿ ಕಂತೆಗಳು ಸಂಪೂರ್ಣ ಸುಟ್ಟು ಹೋಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.</p>.<p>‘ಜಮೀನಿನ ಮೇಲ್ಭಾಗದಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿಗಳು ತುಂಬಾ ಹಳೆಯವಾಗಿದ್ದವು. ಹೀಗಾಗಿ ವಿದ್ಯುತ್ ಬದಲಿಸುವಂತೆ ಬೆಸ್ಕಾಂ ಸಿಬ್ಬಂದಿಗೆ ಹಲವು ಬಾರಿ ಮನವಿ ಮಾಡಿದ್ದೆವು. ಆದರೆ, ಸಿಬ್ಬಂದಿ ಮನವಿಗೆ ಸ್ಪಂದಿಸಿರಲಿಲ್ಲ. ಬೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯವೇ ಅಗ್ನಿ ಅವಘಡಕ್ಕೆ ಕಾರಣ’ ಎಂದು ಮುನಿಯಪ್ಪ ಆರೋಪಿಸಿದರು.</p>.<p>ಘಟನೆ ಸಂಬಂಧ ಕೋಲಾರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>