‘ಜಮೀನಿನ ಮೇಲ್ಭಾಗದಲ್ಲಿ ಹಾದು ಹೋಗಿದ್ದ ವಿದ್ಯುತ್ ತಂತಿಗಳು ತುಂಬಾ ಹಳೆಯವಾಗಿದ್ದವು. ಹೀಗಾಗಿ ವಿದ್ಯುತ್ ಬದಲಿಸುವಂತೆ ಬೆಸ್ಕಾಂ ಸಿಬ್ಬಂದಿಗೆ ಹಲವು ಬಾರಿ ಮನವಿ ಮಾಡಿದ್ದೆವು. ಆದರೆ, ಸಿಬ್ಬಂದಿ ಮನವಿಗೆ ಸ್ಪಂದಿಸಿರಲಿಲ್ಲ. ಬೆಸ್ಕಾಂ ಸಿಬ್ಬಂದಿ ನಿರ್ಲಕ್ಷ್ಯವೇ ಅಗ್ನಿ ಅವಘಡಕ್ಕೆ ಕಾರಣ’ ಎಂದು ಮುನಿಯಪ್ಪ ಆರೋಪಿಸಿದರು.