<p><strong>ಶ್ರೀನಿವಾಸಪುರ:</strong> ಸರ್ಕಾರ ಮೀನು ಪೋಷಕರ ಹಿತದೃಷ್ಟಿಯಿಂದ ಬಯಲು ಸೀಮೆಯಲ್ಲಿನ ಕೆರೆಗಳಲ್ಲಿ ತುಂಬಿರುವ ಹೂಳು ತೆಗೆದು ನೀರು ನಿಲ್ಲುವಂತೆ ಮಾಡಬೇಕು ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ನರೇಶ್ ಹೇಳಿದರು.</p>.<p>ಪಟ್ಟಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಮೀನು ಪೋಷಕರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.</p>.<p>ತಾಲ್ಲೂಕಿನಲ್ಲಿ ಮೀನು ಮರಿ ಉತ್ಪಾದನಾ ಕೇಂದ್ರವನ್ನು ಸ್ಥಾಪಿಸಬೇಕು. ಮೀನುಗಾರರು ತಮ್ಮ ಕಸುಬು ಕೈಗೊಳ್ಳಲು ಅಗತ್ಯವಾದ ಎಲ್ಲ ನೆರವನ್ನೂ ನೀಡಬೇಕು ಎಂದರು.</p>.<p>ತಾಲ್ಲೂಕಿನ ಉತ್ತರ ಭಾಗದಲ್ಲಿ ಆಳವಾದ ಚಿಕ್ಕ ಕೆರೆಗಳಿವೆ. ಅವುಗಳಲ್ಲಿ ಮಳೆ ನೀರು ನಿಲ್ಲುವಂತೆ ಮಾಡಿದರೆ ಮೀನು ಸಾಕಾಣಿಕೆ ಮಾಡಲು ಸಾಧ್ಯವಾಗುತ್ತದೆ. ಹೂಳು ತುಂಬಿದ ಕೆರೆಗಳಿಂದಾಗಿ ಮೀನು ಕೃಷಿ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ನಾಟಿ ಮೀನು ತನ್ನ ಅಸ್ಥಿತ್ವ ಕಳೆದುಕೊಂಡಿದೆ. ಈ ಪರಿಸ್ಥಿತಿ ಬದಲಾಗಬೇಕು. ಮೀನು ಪಾಲಕರು ಸರ್ಕಾರದ ಸೌಲಭ್ಯ ಸದುಪಯೋಗ ಪಡಿಸಿಕೊಂಡು ಮೀನುಗಾರಿಕೆ ಕೈಗೊಳ್ಳಬೇಕು ಎಂದು ಹೇಳಿದರು.</p>.<p>ಮೀನು ಪೋಷಕರಾದ ವೆಂಕಟರವಣಪ್ಪ, ವೆಂಕಟರಮಣಪ್ಪ ಅವರನ್ನು ಸನ್ಮಾನಿಸಲಾಯಿತು. ಮುನಯ್ಯ, ನಂಜುಂಡಪ್ಪ, ಪ್ರಭಾಕರಗೌಡ, ಅಯ್ಯಪ್ಪ, ಶಿವಶಂಕರ್, ವಿಶ್ವನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀನಿವಾಸಪುರ:</strong> ಸರ್ಕಾರ ಮೀನು ಪೋಷಕರ ಹಿತದೃಷ್ಟಿಯಿಂದ ಬಯಲು ಸೀಮೆಯಲ್ಲಿನ ಕೆರೆಗಳಲ್ಲಿ ತುಂಬಿರುವ ಹೂಳು ತೆಗೆದು ನೀರು ನಿಲ್ಲುವಂತೆ ಮಾಡಬೇಕು ಎಂದು ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ನರೇಶ್ ಹೇಳಿದರು.</p>.<p>ಪಟ್ಟಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಮೀನು ಪೋಷಕರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.</p>.<p>ತಾಲ್ಲೂಕಿನಲ್ಲಿ ಮೀನು ಮರಿ ಉತ್ಪಾದನಾ ಕೇಂದ್ರವನ್ನು ಸ್ಥಾಪಿಸಬೇಕು. ಮೀನುಗಾರರು ತಮ್ಮ ಕಸುಬು ಕೈಗೊಳ್ಳಲು ಅಗತ್ಯವಾದ ಎಲ್ಲ ನೆರವನ್ನೂ ನೀಡಬೇಕು ಎಂದರು.</p>.<p>ತಾಲ್ಲೂಕಿನ ಉತ್ತರ ಭಾಗದಲ್ಲಿ ಆಳವಾದ ಚಿಕ್ಕ ಕೆರೆಗಳಿವೆ. ಅವುಗಳಲ್ಲಿ ಮಳೆ ನೀರು ನಿಲ್ಲುವಂತೆ ಮಾಡಿದರೆ ಮೀನು ಸಾಕಾಣಿಕೆ ಮಾಡಲು ಸಾಧ್ಯವಾಗುತ್ತದೆ. ಹೂಳು ತುಂಬಿದ ಕೆರೆಗಳಿಂದಾಗಿ ಮೀನು ಕೃಷಿ ಕೈಗೊಳ್ಳಲು ಸಾಧ್ಯವಾಗುತ್ತಿಲ್ಲ. ನಾಟಿ ಮೀನು ತನ್ನ ಅಸ್ಥಿತ್ವ ಕಳೆದುಕೊಂಡಿದೆ. ಈ ಪರಿಸ್ಥಿತಿ ಬದಲಾಗಬೇಕು. ಮೀನು ಪಾಲಕರು ಸರ್ಕಾರದ ಸೌಲಭ್ಯ ಸದುಪಯೋಗ ಪಡಿಸಿಕೊಂಡು ಮೀನುಗಾರಿಕೆ ಕೈಗೊಳ್ಳಬೇಕು ಎಂದು ಹೇಳಿದರು.</p>.<p>ಮೀನು ಪೋಷಕರಾದ ವೆಂಕಟರವಣಪ್ಪ, ವೆಂಕಟರಮಣಪ್ಪ ಅವರನ್ನು ಸನ್ಮಾನಿಸಲಾಯಿತು. ಮುನಯ್ಯ, ನಂಜುಂಡಪ್ಪ, ಪ್ರಭಾಕರಗೌಡ, ಅಯ್ಯಪ್ಪ, ಶಿವಶಂಕರ್, ವಿಶ್ವನಾಥ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>