<p><strong>ಕೋಲಾರ:</strong> ‘ಗುಣಮಟ್ಟದ ಹಾಲು ಉತ್ಪಾದನೆಗೆ ಉತ್ತಮ ಆಹಾರದ ಜತೆಗೆ ರಾಸುಗಳ ಆರೋಗ್ಯ ರಕ್ಷಣೆಗೂ ಹೆಚ್ಚಿನ ಒತ್ತು ಕೊಡಬೇಕು’ ಎಂದು ಪಶು ವೈದ್ಯ ಡಾ.ಎಸ್.ವಿ.ಶ್ರೀನಿವಾಸಗೌಡ ಸಲಹೆ ನೀಡಿದರು.</p>.<p>ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ, ಚಿಟ್ನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಸಹಯೋಗದಲ್ಲಿ ತಾಲ್ಲೂಕಿನ ಚಿಟ್ನಹಳ್ಳಿ ಗ್ರಾಮದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಂದು ರೋಗ ಲಸಿಕೆ ಶಿಬಿರದಲ್ಲಿ ಮಾತನಾಡಿದರು.</p>.<p>‘ಹೈನೋದ್ಯಮ ಕೋಲಾರ ಜಿಲ್ಲೆಯ ಜೀವನಾಡಿ. ಇಲ್ಲಿನ ರೈತರು ಹಸುಗಳನ್ನು ಸಾಕಿ ಬದುಕು ಕಟ್ಟಿಕೊಂಡಿದ್ದಾರೆ. ಸಂಕಷ್ಟದಲ್ಲೂ ಆರ್ಥಿಕವಾಗಿ ಶಕ್ತಿ ತುಂಬಿ ರೈತರ ಕೈಹಿಡಿದಿರುವ ಹೈನುಗಾರಿಕೆಯನ್ನು ಉಳಿಸಿ ಬೆಳೆಸುವ ಅಗತ್ಯವಿದೆ’ ಎಂದು ತಿಳಿಸಿದರು.</p>.<p>‘ರಾಸುಗಳಿಗೆ ಗುಣಮಟ್ಟದ ಮೇವು, ಪಶು ಆಹಾರ ಕೊಡಬೇಕು. ಜತೆಗೆ ಕಾಲಕಾಲಕ್ಕೆ ಲಸಿಕೆ ಹಾಕಿಸಬೇಕು. ಕಾಯಿಲೆ ಬಂದ ನಂತರ ತೊಂದರೆ ಅನುಭವಿಸುವ ಬದಲಿಗೆ ಮೊದಲೇ ಲಸಿಕೆ ಹಾಕಿಸುವುದು ಒಳ್ಳೆಯದು. ಗುಣಮಟ್ಟದ ಹಾಲು ಉತ್ಪಾದಿಸಿದರೆ ಆರ್ಥಿಕವಾಗಿ ಸಬಲರಾಗಬಹುದು’ ಎಂದು ಹೇಳಿದರು.</p>.<p>ಹಸುಗಳ ಸಾಕಣೆ, ಆರೋಗ್ಯ ರಕ್ಷಣೆಗೆ ಕೈಗೊಳ್ಳಬೇಕಾದ ಕ್ರಮಗಳು, ಹಾಲು ಕರೆಯುವ ಮುನ್ನ ವಹಿಸಬೇಕಾದ ಮುನ್ನಚ್ಚರಿಕೆ, ಸ್ವಚ್ಛತೆ ಕಾಪಾಡುವ ಬಗ್ಗೆ ರೈತರಿಗೆ ಅರಿವು ಮೂಡಿಸಲಾಯಿತು. 40ಕ್ಕೂ ಹೆಚ್ಚು ರಾಸುಗಳಿಗೆ ಲಸಿಕೆ ಹಾಕಲಾಯಿತು.</p>.<p>ಹಿರಿಯ ಪಶು ವೈದ್ಯಕೀಯ ಪರೀಕ್ಷಕರಾದ ಮಹಮ್ಮದ್, ನಾಗರಾಜ್, ಚಿಟ್ನಹಳ್ಳಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಸಿ.ಎಂ.ಶ್ರೀನಿವಾಸಗೌಡ, ಕಾರ್ಯದರ್ಶಿ ಸಿ.ಎಂ.ರಮೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ಗುಣಮಟ್ಟದ ಹಾಲು ಉತ್ಪಾದನೆಗೆ ಉತ್ತಮ ಆಹಾರದ ಜತೆಗೆ ರಾಸುಗಳ ಆರೋಗ್ಯ ರಕ್ಷಣೆಗೂ ಹೆಚ್ಚಿನ ಒತ್ತು ಕೊಡಬೇಕು’ ಎಂದು ಪಶು ವೈದ್ಯ ಡಾ.ಎಸ್.ವಿ.ಶ್ರೀನಿವಾಸಗೌಡ ಸಲಹೆ ನೀಡಿದರು.</p>.<p>ಪಶುಪಾಲನಾ ಮತ್ತು ಪಶು ವೈದ್ಯ ಸೇವಾ ಇಲಾಖೆ, ಚಿಟ್ನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘದ ಸಹಯೋಗದಲ್ಲಿ ತಾಲ್ಲೂಕಿನ ಚಿಟ್ನಹಳ್ಳಿ ಗ್ರಾಮದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಕಂದು ರೋಗ ಲಸಿಕೆ ಶಿಬಿರದಲ್ಲಿ ಮಾತನಾಡಿದರು.</p>.<p>‘ಹೈನೋದ್ಯಮ ಕೋಲಾರ ಜಿಲ್ಲೆಯ ಜೀವನಾಡಿ. ಇಲ್ಲಿನ ರೈತರು ಹಸುಗಳನ್ನು ಸಾಕಿ ಬದುಕು ಕಟ್ಟಿಕೊಂಡಿದ್ದಾರೆ. ಸಂಕಷ್ಟದಲ್ಲೂ ಆರ್ಥಿಕವಾಗಿ ಶಕ್ತಿ ತುಂಬಿ ರೈತರ ಕೈಹಿಡಿದಿರುವ ಹೈನುಗಾರಿಕೆಯನ್ನು ಉಳಿಸಿ ಬೆಳೆಸುವ ಅಗತ್ಯವಿದೆ’ ಎಂದು ತಿಳಿಸಿದರು.</p>.<p>‘ರಾಸುಗಳಿಗೆ ಗುಣಮಟ್ಟದ ಮೇವು, ಪಶು ಆಹಾರ ಕೊಡಬೇಕು. ಜತೆಗೆ ಕಾಲಕಾಲಕ್ಕೆ ಲಸಿಕೆ ಹಾಕಿಸಬೇಕು. ಕಾಯಿಲೆ ಬಂದ ನಂತರ ತೊಂದರೆ ಅನುಭವಿಸುವ ಬದಲಿಗೆ ಮೊದಲೇ ಲಸಿಕೆ ಹಾಕಿಸುವುದು ಒಳ್ಳೆಯದು. ಗುಣಮಟ್ಟದ ಹಾಲು ಉತ್ಪಾದಿಸಿದರೆ ಆರ್ಥಿಕವಾಗಿ ಸಬಲರಾಗಬಹುದು’ ಎಂದು ಹೇಳಿದರು.</p>.<p>ಹಸುಗಳ ಸಾಕಣೆ, ಆರೋಗ್ಯ ರಕ್ಷಣೆಗೆ ಕೈಗೊಳ್ಳಬೇಕಾದ ಕ್ರಮಗಳು, ಹಾಲು ಕರೆಯುವ ಮುನ್ನ ವಹಿಸಬೇಕಾದ ಮುನ್ನಚ್ಚರಿಕೆ, ಸ್ವಚ್ಛತೆ ಕಾಪಾಡುವ ಬಗ್ಗೆ ರೈತರಿಗೆ ಅರಿವು ಮೂಡಿಸಲಾಯಿತು. 40ಕ್ಕೂ ಹೆಚ್ಚು ರಾಸುಗಳಿಗೆ ಲಸಿಕೆ ಹಾಕಲಾಯಿತು.</p>.<p>ಹಿರಿಯ ಪಶು ವೈದ್ಯಕೀಯ ಪರೀಕ್ಷಕರಾದ ಮಹಮ್ಮದ್, ನಾಗರಾಜ್, ಚಿಟ್ನಹಳ್ಳಿ ಹಾಲು ಉತ್ಪಾದಕರ ಸಂಘದ ಅಧ್ಯಕ್ಷ ಸಿ.ಎಂ.ಶ್ರೀನಿವಾಸಗೌಡ, ಕಾರ್ಯದರ್ಶಿ ಸಿ.ಎಂ.ರಮೇಶ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>