ಗ್ರಾಮದ ಶ್ರೀನಾಥ್ ಎಂಬುವರಿಗೆ ಸೇರಿದ ತೋಟದ ಮನೆ ಇದಾಗಿದ್ದು, ಪ್ರತಿ ಚೀಲದಲ್ಲಿ 4 ಕೆ.ಜಿ ಅಕ್ಕಿ, 1 ಕೆ.ಜಿ ಬೆಲ್ಲ, 900 ಗ್ರಾಂ ತೊಗರಿಬೇಳೆ, 900 ಗ್ರಾಂ ಕಡಲೆಬೇಳೆ, 1 ಕೆ.ಜಿ ಮೈದಾ ಹಿಟ್ಟು ತುಂಬಿಡಲಾಗಿತ್ತು. ಇಂಥ 3,066 ಚೀಲಗಳನ್ನು ವಶಕ್ಕೆ ಪಡೆದಿದ್ದಾರೆ. ಇದಲ್ಲದೆ, 212 ಕ್ವಿಂಟಲ್ ತೊಗರಿಬೇಳೆ, 95.60 ಕ್ವಿಂಟಲ್ ಬೆಲ್ಲ, 151 ಕ್ವಿಂಟಲ್ ಮೈದಾ, 252 ಕ್ವಿಂಟಲ್ ಅಕ್ಕಿ ಚೀಲಗಳನ್ನು ಮನೆ, ಶೆಡ್ ಹಾಗೂ ಅಂಗಳದಲ್ಲಿ ಅಕ್ರಮವಾಗಿ ದಾಸ್ತಾನು ಇಡಲಾಗಿತ್ತು.