<p><strong>ಕೋಲಾರ: </strong>ತೋಟಗಾರಿಕೆ ಮಹಾವಿದ್ಯಾಲಯದ ಅಧಿಕಾರಿಗಳು ತಾಲ್ಲೂಕಿನ ಷಾಪೂರ ಗ್ರಾಮದ ಕೃಷಿ ಜಮೀನುಗಳಿಗೆ ದಾರಿ ಬಿಡದೆ ಬೇಲಿ ನಿರ್ಮಿಸುತ್ತಿದ್ದಾರೆ ಎಂದು ಆರೋಪಿಸಿ ರೈತರು ನಮ್ಮ ರೈತ ಸಂಘದ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ಮಾಡಿದರು.</p>.<p>‘ಸರ್ಕಾರ ಷಾಪೂರದ ಸಮೀಪ ಸರ್ಕಾರಿ ಜಮೀನನ್ನು ತೋಟಗಾರಿಕೆ ಮಹಾವಿದ್ಯಾಲಯ ಕಾಲೇಜಿಗೆ ಮಂಜೂರು ಮಾಡಿದೆ. ಆ ಜಮೀನಿಗೆ ಹೊಂದಿಕೊಂಡಂತೆ ಅಕ್ಕಪಕ್ಕದಲ್ಲಿ ರೈತರ ಜಮೀನುಗಳಿವೆ. ಅಧಿಕಾರಿಗಳು ಕಾಲೇಜಿಗೆ ಮಂಜೂರಾಗಿರುವ ಜಮೀನಿನ ಸುತ್ತ ಬೇಲಿ ನಿರ್ಮಿಸುತ್ತಿರುವುದರಿಂದ ತಮ್ಮ ಜಮೀನಿಗೆ ಹೋಗಲು ಸ್ಥಳಾವಕಾಶ ಇಲ್ಲವಾಗಿದೆ’ ಎಂದು ಪ್ರತಿಭಟನಾನಿರತ ರೈತರು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಷಾಪೂರ ಗ್ರಾಮದ ರೈತರು ಹಿಂದಿನಿಂದಲೂ ತಮ್ಮ ಜಮೀನುಗಳಿಗೆ ಸರ್ಕಾರಿ ಜಮೀನಿನಲ್ಲಿರುವ ರಸ್ತೆ ಮೂಲಕ ಹೋಗುತ್ತಿದ್ದರು. ಇದೀಗ ಅಧಿಕಾರಿಗಳು ಆ ರಸ್ತೆಯನ್ನು ಮುಚ್ಚಿ ರೈತರ ವಾಹನಗಳು ಹೋಗದಂತೆ ಮಾಡುತ್ತಿದ್ದಾರೆ. ಇದರಿಂದ ಕೃಷಿ ಚಟುವಟಿಕೆಗಳಿಗೆ ಅಡ್ಡಿಯಾಗುತ್ತಿದೆ’ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ್ಗೌಡ ದೂರಿದರು.</p>.<p>‘ರೈತರ ಅನುಕೂಲಕ್ಕಾಗಿ ರಸ್ತೆಗೆ ಜಾಗ ಬಿಡುವಂತೆ ಮನವಿ ಮಾಡಿದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಅಧಿಕಾರಿಗಳಿಗೆ ರೈತರ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ. ಜಿಲ್ಲಾಡಳಿತ, ಉಪ ವಿಭಾಗಾಧಿಕಾರಿ, ತಹಶೀಲ್ದಾರ್ ಸಹ ಈ ಬಗ್ಗೆ ಗಮನ ಹರಿಸುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p><strong>ವಿರೋಧವಿಲ್ಲ:</strong> ‘ತೋಟಗಾರಿಕೆ ಮಹಾವಿದ್ಯಾಲಯದ ಕಾಲೇಜಿಗೆ ಜಮೀನು ಮಂಜೂರು ಮಾಡಿರುವುದಕ್ಕೆ ವಿರೋಧವಿಲ್ಲ. ಆದರೆ, ರೈತರಿಗೆ ಅನುಕೂಲವಾಗುವಂತೆ ದಾರಿ ಬಿಡಬೇಕು. ಈ ಭಾಗದಲ್ಲಿ ಕೋಳಿ ಫಾರಂಗಳಿವೆ ಮತ್ತು ರೈತರು ಬೆಳೆ ಬೆಳೆಯುತ್ತಾರೆ. ಕೃಷಿ ಸಲಕರಣೆ ಸಾಗಣೆ ವಾಹನಗಳ ಓಡಾಟಕ್ಕೆ ಇರುವ ರಸ್ತೆ ಬಂದ್ ಮಾಡಿದರೆ ರೈತರು ಯಾವ ರಸ್ತೆಯಲ್ಲಿ ಓಡಾಡಬೇಕು?’ ಎಂದು ರೈತ ಮಣಿ ಪ್ರಶ್ನಿಸಿದರು.</p>.<p>‘ಕಾಲೇಜಿಗೆ ಮಂಜೂರಾಗಿರುವ ಜಮೀನಿನಲ್ಲಿ ರೈತರ ಜಮೀನುಗಳ ಕಡೆಗೆ ರಸ್ತೆ ಬಿಟ್ಟುಕೊಟ್ಟರೆ ಅನುಕೂಲವಾಗುತ್ತದೆ. ಕಾಲಮಿತಿಯೊಳಗೆ ಈ ಕೆಲಸ ಮಾಡದಿದ್ದರೆ ಜಿಲ್ಲಾಡಳಿತ ಭವನದ ಎದುರು ಹೋರಾಟ ಮಾಡುತ್ತೇವೆ’ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.</p>.<p><strong>ವರದಿ ಸಲ್ಲಿಸುತ್ತೇವೆ: </strong>ಪ್ರತಿಭಟನಾನಿರತರ ಅಹವಾಲು ಆಲಿಸಿದ ತಹಶೀಲ್ದಾರ್ ವಿಲಿಯಂ, ‘ತೋಟಗಾರಿಕೆ ಮಹಾವಿದ್ಯಾಲಯಕ್ಕೆ ಷಾಪೂರ ಗ್ರಾಮದ ಸರ್ವೆ ನಂಬರ್ 102/1ರಲ್ಲಿ 80 ಎಕರೆ ಜಮೀನು ಮಂಜೂರಾಗಿದೆ. ಈ ಜಾಗ ಪರಿಶೀಲಿಸಿ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸುತ್ತೇವೆ ಮತ್ತು ರೈತರ ಬೇಡಿಕೆ ಬಗ್ಗೆ ಮಾಹಿತಿ ನೀಡುತ್ತೇವೆ. ಬಳಿಕ ಜಿಲ್ಲಾಧಿಕಾರಿ ಆದೇಶದಂತೆ ಕ್ರಮ ವಹಿಸುತ್ತೇವೆ’ ಎಂದು ಭರವಸೆ ನೀಡಿದರು.</p>.<p>ಗ್ರಾ.ಪಂ ಉಪಾಧ್ಯಕ್ಷ ಸಂಪತ್ಕುಮಾರ್, ಸಂಘದ ಸದಸ್ಯರಾದ ವಿಶ್ವಾನಾಥ್, ಮಂಜುನಾಥ್, ಮುನೇಗೌಡ, ಗೋಪಾಲ್, ಸೋಮಣ್ಣ, ನಂಜುಂಡ, ಶಿವಪ್ಪ, ರಾಮಕೃಷ್ಣೇಗೌಡ, ಗಣೇಶ್, ಆನಂದ್ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>ತೋಟಗಾರಿಕೆ ಮಹಾವಿದ್ಯಾಲಯದ ಅಧಿಕಾರಿಗಳು ತಾಲ್ಲೂಕಿನ ಷಾಪೂರ ಗ್ರಾಮದ ಕೃಷಿ ಜಮೀನುಗಳಿಗೆ ದಾರಿ ಬಿಡದೆ ಬೇಲಿ ನಿರ್ಮಿಸುತ್ತಿದ್ದಾರೆ ಎಂದು ಆರೋಪಿಸಿ ರೈತರು ನಮ್ಮ ರೈತ ಸಂಘದ ನೇತೃತ್ವದಲ್ಲಿ ಸೋಮವಾರ ಪ್ರತಿಭಟನೆ ಮಾಡಿದರು.</p>.<p>‘ಸರ್ಕಾರ ಷಾಪೂರದ ಸಮೀಪ ಸರ್ಕಾರಿ ಜಮೀನನ್ನು ತೋಟಗಾರಿಕೆ ಮಹಾವಿದ್ಯಾಲಯ ಕಾಲೇಜಿಗೆ ಮಂಜೂರು ಮಾಡಿದೆ. ಆ ಜಮೀನಿಗೆ ಹೊಂದಿಕೊಂಡಂತೆ ಅಕ್ಕಪಕ್ಕದಲ್ಲಿ ರೈತರ ಜಮೀನುಗಳಿವೆ. ಅಧಿಕಾರಿಗಳು ಕಾಲೇಜಿಗೆ ಮಂಜೂರಾಗಿರುವ ಜಮೀನಿನ ಸುತ್ತ ಬೇಲಿ ನಿರ್ಮಿಸುತ್ತಿರುವುದರಿಂದ ತಮ್ಮ ಜಮೀನಿಗೆ ಹೋಗಲು ಸ್ಥಳಾವಕಾಶ ಇಲ್ಲವಾಗಿದೆ’ ಎಂದು ಪ್ರತಿಭಟನಾನಿರತ ರೈತರು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಷಾಪೂರ ಗ್ರಾಮದ ರೈತರು ಹಿಂದಿನಿಂದಲೂ ತಮ್ಮ ಜಮೀನುಗಳಿಗೆ ಸರ್ಕಾರಿ ಜಮೀನಿನಲ್ಲಿರುವ ರಸ್ತೆ ಮೂಲಕ ಹೋಗುತ್ತಿದ್ದರು. ಇದೀಗ ಅಧಿಕಾರಿಗಳು ಆ ರಸ್ತೆಯನ್ನು ಮುಚ್ಚಿ ರೈತರ ವಾಹನಗಳು ಹೋಗದಂತೆ ಮಾಡುತ್ತಿದ್ದಾರೆ. ಇದರಿಂದ ಕೃಷಿ ಚಟುವಟಿಕೆಗಳಿಗೆ ಅಡ್ಡಿಯಾಗುತ್ತಿದೆ’ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಗಣೇಶ್ಗೌಡ ದೂರಿದರು.</p>.<p>‘ರೈತರ ಅನುಕೂಲಕ್ಕಾಗಿ ರಸ್ತೆಗೆ ಜಾಗ ಬಿಡುವಂತೆ ಮನವಿ ಮಾಡಿದರೂ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಅಧಿಕಾರಿಗಳಿಗೆ ರೈತರ ಬಗ್ಗೆ ಕಿಂಚಿತ್ತೂ ಕಾಳಜಿಯಿಲ್ಲ. ಜಿಲ್ಲಾಡಳಿತ, ಉಪ ವಿಭಾಗಾಧಿಕಾರಿ, ತಹಶೀಲ್ದಾರ್ ಸಹ ಈ ಬಗ್ಗೆ ಗಮನ ಹರಿಸುತ್ತಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p><strong>ವಿರೋಧವಿಲ್ಲ:</strong> ‘ತೋಟಗಾರಿಕೆ ಮಹಾವಿದ್ಯಾಲಯದ ಕಾಲೇಜಿಗೆ ಜಮೀನು ಮಂಜೂರು ಮಾಡಿರುವುದಕ್ಕೆ ವಿರೋಧವಿಲ್ಲ. ಆದರೆ, ರೈತರಿಗೆ ಅನುಕೂಲವಾಗುವಂತೆ ದಾರಿ ಬಿಡಬೇಕು. ಈ ಭಾಗದಲ್ಲಿ ಕೋಳಿ ಫಾರಂಗಳಿವೆ ಮತ್ತು ರೈತರು ಬೆಳೆ ಬೆಳೆಯುತ್ತಾರೆ. ಕೃಷಿ ಸಲಕರಣೆ ಸಾಗಣೆ ವಾಹನಗಳ ಓಡಾಟಕ್ಕೆ ಇರುವ ರಸ್ತೆ ಬಂದ್ ಮಾಡಿದರೆ ರೈತರು ಯಾವ ರಸ್ತೆಯಲ್ಲಿ ಓಡಾಡಬೇಕು?’ ಎಂದು ರೈತ ಮಣಿ ಪ್ರಶ್ನಿಸಿದರು.</p>.<p>‘ಕಾಲೇಜಿಗೆ ಮಂಜೂರಾಗಿರುವ ಜಮೀನಿನಲ್ಲಿ ರೈತರ ಜಮೀನುಗಳ ಕಡೆಗೆ ರಸ್ತೆ ಬಿಟ್ಟುಕೊಟ್ಟರೆ ಅನುಕೂಲವಾಗುತ್ತದೆ. ಕಾಲಮಿತಿಯೊಳಗೆ ಈ ಕೆಲಸ ಮಾಡದಿದ್ದರೆ ಜಿಲ್ಲಾಡಳಿತ ಭವನದ ಎದುರು ಹೋರಾಟ ಮಾಡುತ್ತೇವೆ’ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.</p>.<p><strong>ವರದಿ ಸಲ್ಲಿಸುತ್ತೇವೆ: </strong>ಪ್ರತಿಭಟನಾನಿರತರ ಅಹವಾಲು ಆಲಿಸಿದ ತಹಶೀಲ್ದಾರ್ ವಿಲಿಯಂ, ‘ತೋಟಗಾರಿಕೆ ಮಹಾವಿದ್ಯಾಲಯಕ್ಕೆ ಷಾಪೂರ ಗ್ರಾಮದ ಸರ್ವೆ ನಂಬರ್ 102/1ರಲ್ಲಿ 80 ಎಕರೆ ಜಮೀನು ಮಂಜೂರಾಗಿದೆ. ಈ ಜಾಗ ಪರಿಶೀಲಿಸಿ ಜಿಲ್ಲಾಧಿಕಾರಿಗೆ ವರದಿ ಸಲ್ಲಿಸುತ್ತೇವೆ ಮತ್ತು ರೈತರ ಬೇಡಿಕೆ ಬಗ್ಗೆ ಮಾಹಿತಿ ನೀಡುತ್ತೇವೆ. ಬಳಿಕ ಜಿಲ್ಲಾಧಿಕಾರಿ ಆದೇಶದಂತೆ ಕ್ರಮ ವಹಿಸುತ್ತೇವೆ’ ಎಂದು ಭರವಸೆ ನೀಡಿದರು.</p>.<p>ಗ್ರಾ.ಪಂ ಉಪಾಧ್ಯಕ್ಷ ಸಂಪತ್ಕುಮಾರ್, ಸಂಘದ ಸದಸ್ಯರಾದ ವಿಶ್ವಾನಾಥ್, ಮಂಜುನಾಥ್, ಮುನೇಗೌಡ, ಗೋಪಾಲ್, ಸೋಮಣ್ಣ, ನಂಜುಂಡ, ಶಿವಪ್ಪ, ರಾಮಕೃಷ್ಣೇಗೌಡ, ಗಣೇಶ್, ಆನಂದ್ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>