ಕೋಲಾರ: ಡಿಸಿಎಫ್ ವಿ.ಏಡುಕೊಂಡಲು ನೇತೃತ್ವದಲ್ಲಿ ಬೆಳ್ಳಂಬೆಳಿಗ್ಗೆ ಶ್ರೀನಿವಾಸಪುರ ತಾಲ್ಲೂಕಿನ ಹೊಗಳಗೆರೆ ಸುತ್ತಮುತ್ತ 120 ಎಕರೆಗಳಷ್ಟು ಅರಣ್ಯ ಒತ್ತುವರಿ ತೆರವುಗೊಳಿಸಲಾಗಿದೆ.
ಪೊಲೀಸರ ರಕ್ಷಣೆಯೊಂದಿಗೆ ಅರಣ್ಯ ಇಲಾಖೆಯ ನೂರಾರು ಸಿಬ್ಬಂದಿ 20 ಜೆಸಿಬಿ ಬಳಸಿ ಮುಂಜಾನೆ 3 ಗಂಟೆಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.
ಸುಮಾರು 3 ಸಾವಿರ ಎಕರೆ ಅರಣ್ಯ ಪ್ರದೇಶ ಒತ್ತುವರಿ ಆರೋಪವಿದೆ. 15 ವರ್ಷಗಳ ನಂತರ ದೊಡ್ಡ ಕಾರ್ಯಾಚರಣೆ ನಡೆಸಲಾಗುತ್ತಿದೆ.