<p><strong>ಮುಳಬಾಗಿಲು:</strong> ಗೂಕುಂಟೆ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆಯು ಶುಕ್ರವಾರ ಮುಂಜಾನೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿತು. ಸರ್ವೆ ನಂಬರ್ 33ರಲ್ಲಿ 66 ಎಕರೆ ಅರಣ್ಯ ಭೂಮಿ ಒತ್ತುವರಿ ಬಗ್ಗೆ ದೂರು ಸಲ್ಲಿಕೆಯಾಗಿತ್ತು. </p>.<p>ಕಾರ್ಯಾಚರಣೆ ಸಮಯದಲ್ಲಿ ಕುನಿಬಂಡೆ ಗ್ರಾಮದ ರೈತರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ರೈತರು ತಮ್ಮ ಬಳಿ ಭೂಮಿ ದಾಖಲೆ, ಸಾಗುವಳಿ ಚೀಟಿ ಮತ್ತು ಕಂದಾಯ ಪಾವತಿ ರಸೀದಿಗಳಿವೆ ಎಂದು ತಿಳಿಸಿದರು. ನ್ಯಾಯಾಲಯದಲ್ಲಿ ಈ ವಿಷಯಕ್ಕೆ ಸಂಬಂಧಿಸಿದ ಪ್ರಕರಣ ಇದೆ. ಯಾವುದೇ ಮುನ್ಸೂಚನೆ ನೀಡದೆ ತೆರವು ಕಾರ್ಯಾಚರಣೆ ನಡೆಸುವುದು ಸರಿಯಲ್ಲ ಎಂದು ವಿರೋಧ ವ್ಯಕ್ತಪಡಿಸಿದರು.</p>.<p>ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಸರೀನಾ ಸಿಕ್ಕಲಿಗರ್, ಈ ಜಾಗ ಅರಣ್ಯ ಭೂಮಿಗೆ ಸೇರಿದೆ. ಒತ್ತುವರಿ ತೆರವು ಮಾಡಲು ನ್ಯಾಯಾಲಯದಿಂದ ಅನುಮತಿ ಸಿಕ್ಕಿದೆ. ರೈತರ ಮನವಿ ಗಮನದಲ್ಲಿಟ್ಟುಕೊಂಡು ಅವರ ಬೆಳೆಗೆ ಹಾನಿ ಮಾಡದೆ ಕಟಾವು ಮಾಡಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಿಲು:</strong> ಗೂಕುಂಟೆ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆಯು ಶುಕ್ರವಾರ ಮುಂಜಾನೆ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿತು. ಸರ್ವೆ ನಂಬರ್ 33ರಲ್ಲಿ 66 ಎಕರೆ ಅರಣ್ಯ ಭೂಮಿ ಒತ್ತುವರಿ ಬಗ್ಗೆ ದೂರು ಸಲ್ಲಿಕೆಯಾಗಿತ್ತು. </p>.<p>ಕಾರ್ಯಾಚರಣೆ ಸಮಯದಲ್ಲಿ ಕುನಿಬಂಡೆ ಗ್ರಾಮದ ರೈತರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ರೈತರು ತಮ್ಮ ಬಳಿ ಭೂಮಿ ದಾಖಲೆ, ಸಾಗುವಳಿ ಚೀಟಿ ಮತ್ತು ಕಂದಾಯ ಪಾವತಿ ರಸೀದಿಗಳಿವೆ ಎಂದು ತಿಳಿಸಿದರು. ನ್ಯಾಯಾಲಯದಲ್ಲಿ ಈ ವಿಷಯಕ್ಕೆ ಸಂಬಂಧಿಸಿದ ಪ್ರಕರಣ ಇದೆ. ಯಾವುದೇ ಮುನ್ಸೂಚನೆ ನೀಡದೆ ತೆರವು ಕಾರ್ಯಾಚರಣೆ ನಡೆಸುವುದು ಸರಿಯಲ್ಲ ಎಂದು ವಿರೋಧ ವ್ಯಕ್ತಪಡಿಸಿದರು.</p>.<p>ಜಿಲ್ಲಾ ಅರಣ್ಯ ಸಂರಕ್ಷಣಾಧಿಕಾರಿ ಸರೀನಾ ಸಿಕ್ಕಲಿಗರ್, ಈ ಜಾಗ ಅರಣ್ಯ ಭೂಮಿಗೆ ಸೇರಿದೆ. ಒತ್ತುವರಿ ತೆರವು ಮಾಡಲು ನ್ಯಾಯಾಲಯದಿಂದ ಅನುಮತಿ ಸಿಕ್ಕಿದೆ. ರೈತರ ಮನವಿ ಗಮನದಲ್ಲಿಟ್ಟುಕೊಂಡು ಅವರ ಬೆಳೆಗೆ ಹಾನಿ ಮಾಡದೆ ಕಟಾವು ಮಾಡಲು ಅವಕಾಶ ನೀಡಲಾಗಿದೆ ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>