<p><strong>ಕೋಲಾರ:</strong> ಶ್ರೀನಿವಾಸಪುರ ತಾಲ್ಲೂಕಿನ ಜಿನಗಲಕುಂಟೆ ಅರಣ್ಯ ವಲಯದ ಹೊಸಹುಡ್ಯ ಗ್ರಾಮದ ಸರ್ವೆ ನಂಬರ್ 1 ಮತ್ತು 2ರ ಅರಣ್ಯ ಜಮೀನಿನ ಜಂಟಿ ಸಮೀಕ್ಷೆ ವರದಿ ಸಲ್ಲಿಕೆ ನಂತರ ಮುಂದಿನ ಕ್ರಮಕ್ಕಾಗಿ ಮೇಲ್ಮನವಿ ಪ್ರಾಧಿಕಾರದಿಂದ ಮೇಲ್ಮನವಿ ವಿಚಾರಣೆಯನ್ನು ಜ.27ರಂದು ಸಂಜೆ 4 ಗಂಟೆಗೆ ನಿಗದಿ ಮಾಡಲಾಗಿದೆ.</p>.<p>ವಿಚಾರಣೆಗೆ ಹಾಜರಾಗುವಂತೆ ವಿಧಾನಸಭೆ ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಹಾಗೂ ಶ್ರೀನಿವಾಸಪುರ ವಲಯದ ಅರಣ್ಯಾಧಿಕಾರಿಗೆ ಬೆಂಗಳೂರು ವಲಯದ ಅರಣ್ಯ ಸಂರಕ್ಷಣಾಧಿಕಾರಿಯು (ಪ್ರಾದೇಶಿಕ) ನೋಟಿಸ್ ನೀಡಿದ್ದಾರೆ.</p>.<p>ಅರಣ್ಯ ಒತ್ತುವರಿ ತೆರವು ವಿಚಾರದಲ್ಲಿ ಅರಣ್ಯ ಸಂರಕ್ಷಣಾಧಿಕಾರಿಯು 64 ಎ ಪ್ರೋಸೀಡಿಂಗ್ಸ್ ಅಡಿಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.</p>.<p>ಹೈಕೋರ್ಟ್ ಸೂಚನೆ ಮೇರೆಗೆ ರಮೇಶ್ ಕುಮಾರ್ ಉಪಸ್ಥಿತಿಯಲ್ಲೇ 2025ರ ಜ.15 ಹಾಗೂ 16ರಂದು ಜಂಟಿ ಸಮಿಕ್ಷೆ ನಡೆದಿತ್ತು. ಸರ್ವೆಗೆ ಪ್ರತಿವಾದಿಯಾಗಿದ್ದ ಅವರೂ ಸಹಕರಿಸಿದ್ದರು. ನಂತರ ವರದಿ ಸಲ್ಲಿಕೆ ಮಾಡಲಾಗಿತ್ತು.</p>.<p>‘ನಾನು ಜಮೀನು ಖರೀದಿ ಮಾಡಿದ್ದೇನೆಯೇ ಹೊರತು ಒತ್ತುವರಿದಾರ ಅಲ್ಲ’ ಎಂಬುದಾಗಿ ರಮೇಶ್ ಕುಮಾರ್ ಹಲವಾರು ವೇದಿಕೆಗಳಲ್ಲಿ ಹೇಳುತ್ತಾ ಬಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಶ್ರೀನಿವಾಸಪುರ ತಾಲ್ಲೂಕಿನ ಜಿನಗಲಕುಂಟೆ ಅರಣ್ಯ ವಲಯದ ಹೊಸಹುಡ್ಯ ಗ್ರಾಮದ ಸರ್ವೆ ನಂಬರ್ 1 ಮತ್ತು 2ರ ಅರಣ್ಯ ಜಮೀನಿನ ಜಂಟಿ ಸಮೀಕ್ಷೆ ವರದಿ ಸಲ್ಲಿಕೆ ನಂತರ ಮುಂದಿನ ಕ್ರಮಕ್ಕಾಗಿ ಮೇಲ್ಮನವಿ ಪ್ರಾಧಿಕಾರದಿಂದ ಮೇಲ್ಮನವಿ ವಿಚಾರಣೆಯನ್ನು ಜ.27ರಂದು ಸಂಜೆ 4 ಗಂಟೆಗೆ ನಿಗದಿ ಮಾಡಲಾಗಿದೆ.</p>.<p>ವಿಚಾರಣೆಗೆ ಹಾಜರಾಗುವಂತೆ ವಿಧಾನಸಭೆ ಮಾಜಿ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಹಾಗೂ ಶ್ರೀನಿವಾಸಪುರ ವಲಯದ ಅರಣ್ಯಾಧಿಕಾರಿಗೆ ಬೆಂಗಳೂರು ವಲಯದ ಅರಣ್ಯ ಸಂರಕ್ಷಣಾಧಿಕಾರಿಯು (ಪ್ರಾದೇಶಿಕ) ನೋಟಿಸ್ ನೀಡಿದ್ದಾರೆ.</p>.<p>ಅರಣ್ಯ ಒತ್ತುವರಿ ತೆರವು ವಿಚಾರದಲ್ಲಿ ಅರಣ್ಯ ಸಂರಕ್ಷಣಾಧಿಕಾರಿಯು 64 ಎ ಪ್ರೋಸೀಡಿಂಗ್ಸ್ ಅಡಿಯಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.</p>.<p>ಹೈಕೋರ್ಟ್ ಸೂಚನೆ ಮೇರೆಗೆ ರಮೇಶ್ ಕುಮಾರ್ ಉಪಸ್ಥಿತಿಯಲ್ಲೇ 2025ರ ಜ.15 ಹಾಗೂ 16ರಂದು ಜಂಟಿ ಸಮಿಕ್ಷೆ ನಡೆದಿತ್ತು. ಸರ್ವೆಗೆ ಪ್ರತಿವಾದಿಯಾಗಿದ್ದ ಅವರೂ ಸಹಕರಿಸಿದ್ದರು. ನಂತರ ವರದಿ ಸಲ್ಲಿಕೆ ಮಾಡಲಾಗಿತ್ತು.</p>.<p>‘ನಾನು ಜಮೀನು ಖರೀದಿ ಮಾಡಿದ್ದೇನೆಯೇ ಹೊರತು ಒತ್ತುವರಿದಾರ ಅಲ್ಲ’ ಎಂಬುದಾಗಿ ರಮೇಶ್ ಕುಮಾರ್ ಹಲವಾರು ವೇದಿಕೆಗಳಲ್ಲಿ ಹೇಳುತ್ತಾ ಬಂದಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>