<p><strong>ಕೋಲಾರ:</strong> ಜಿಲ್ಲಾ ಪಂಚಾಯಿತಿ ಕಟ್ಟಡ ದುರಸ್ತಿ ಕಾಮಗಾರಿಯನ್ನು ತುಂಡು ಗುತ್ತಿಗೆ ನೀಡಿ ಅಕ್ರಮ ನಡೆಸಿರುವ ಆರೋಪ ಕೇಳಿಬಂದಿದ್ದು, ಲಕ್ಷಾಂತರ ರೂಪಾಯಿ ಸರ್ಕಾರದ ಅನುದಾನ ದುರ್ಬಳಕೆಯಾಗಿದೆ.</p>.<p>ರಾಜ್ಯ ಸರ್ಕಾರವು ಪ್ರತಿ ಹಣಕಾಸು ವರ್ಷದಲ್ಲಿ ಜಿ.ಪಂ ಕಟ್ಟಡ ದುರಸ್ತಿಗೆ ಅನುದಾನ ನೀಡುತ್ತದೆ. ಅದೇ ರೀತಿ ಈ ಬಾರಿಯೂ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ರಾಜ್ ಅಭಿವೃದ್ಧಿ ಇಲಾಖೆಯಿಂದ ಅನುದಾನ ಬಿಡುಗಡೆ ಮಾಡಲಾಗಿತ್ತು.</p>.<p>ಈ ಅನುದಾನವನ್ನು ಜಿ.ಪಂ ಆವರಣದಲ್ಲಿನ ಕಾಮಗಾರಿಗಳಿಗೆ ಮಾತ್ರ ಬಳಸಬೇಕೆಂಬ ನಿಯಮವಿದೆ. ಅನುದಾನ ಬಳಕೆ ಮಾಡದಿದ್ದರೆ ಸರ್ಕಾರಕ್ಕೆ ವಾಪಸ್ ಹೋಗುತ್ತದೆ. ಈ ಒಂದು ಕಾರಣಕ್ಕಾಗಿ ಜಿ.ಪಂ ಚುನಾಯಿತ ಮಂಡಳಿಯು ಹಾಗೂ ಅಧಿಕಾರಿಗಳು ಹಿಂದಿನ ವರ್ಷಗಳಲ್ಲಿ ಜಿ.ಪಂ ಕಟ್ಟಡದಲ್ಲಿ ಮಾಡಿದ್ದ ದುರಸ್ತಿ ಕಾಮಗಾರಿಗಳನ್ನೇ ಇದೀಗ ಮತ್ತೊಮ್ಮೆ ಮಾಡಿಸಿದ್ದಾರೆ.</p>.<p>ಪ್ರಸಕ್ತ ಹಣಕಾಸು ವರ್ಷದಲ್ಲಿ ಕಟ್ಟಡ ದುರಸ್ತಿಗೆ ಬಿಡುಗಡೆಯಾಗಿದ್ದ ₹ 85 ಲಕ್ಷ ಅನುದಾನಕ್ಕೆ ಟೆಂಡರ್ ಕರೆಯದೆ ಒಂದೇ ಕಟ್ಟಡದಲ್ಲಿ 35 ಕಾಮಗಾರಿಗಳಾಗಿ ವಿಂಗಡಿಸಿ ತುಂಡು ಗುತ್ತಿಗೆ ನೀಡಲಾಗಿದೆ. ಕರ್ನಾಟಕ ಸಾರ್ವಜನಿಕ ಖರೀದಿಗಳಲ್ಲಿ ಪಾರದರ್ಶಕತೆ (ಕೆಟಿಟಿಪಿ) ಕಾಯ್ದೆ ಪ್ರಕಾರ ₹ 2.50 ಲಕ್ಷಕ್ಕಿಂತ ಹೆಚ್ಚಿನ ಮೊತ್ತದ ಕಾಮಗಾರಿಗಳನ್ನು ಟೆಂಡರ್ ಮೂಲಕವೇ ನೀಡಬೇಕು.</p>.<p>ಹೀಗಾಗಿ ಟೆಂಡರ್ ಪ್ರಕ್ರಿಯೆ ತಪ್ಪಿಸಲು ಪ್ರತಿ ಕಾಮಗಾರಿ ವೆಚ್ಚವನ್ನು ₹ 2.50 ಲಕ್ಷವೆಂದು ತೋರಿಸಿ ಟೆಂಡರ್ ಕರೆಯದೆ ದುರಸ್ತಿ ಕಾಮಗಾರಿ ನಡೆಸಲಾಗಿದೆ. ಜಿ.ಪಂನ ಕೆಲ ಪ್ರಭಾವಿ ಸದಸ್ಯರು ತಮ್ಮ ಪರಮಾಪ್ತ ಗುತ್ತಿಗೆದಾರರಿಂದ ಕಾಮಗಾರಿ ಮಾಡಿಸಿದ್ದಾರೆ. ಈ ಬಗ್ಗೆ ಜಿ.ಪಂನ ಕೆಲ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದು, ಅಕ್ರಮದ ಆರೋಪ ಮಾಡಿದ್ದಾರೆ.</p>.<p>ಹೊರಗೆ ಬಳಕೆ: ಜಿ.ಪಂ ಕಟ್ಟಡ ದುರಸ್ತಿ ಅನುದಾನವನ್ನು ಶಾಲೆ, ಅಂಗನವಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ದುರಸ್ತಿಗೆ ಬಳಸುವಂತೆ ಹಲವು ಸದಸ್ಯರು ಸಭೆಯಲ್ಲಿ ಮನವಿ ಮಾಡಿದ್ದರು. ಆದರೆ, ಅಧಿಕಾರಿಗಳು ಈ ಅನುದಾನವನ್ನು ಜಿ.ಪಂ ಆವರಣದ ಹೊರಗಿನ ಕಾಮಗಾರಿಗಳಿಗೆ ಖರ್ಚು ಮಾಡುವಂತಿಲ್ಲ ಎಂದು ಸಬೂಬು ಹೇಳಿ ಅನುದಾನ ನೀಡಲು ನಿರಾಕರಿಸಿದ್ದರು.</p>.<p>ಆದರೆ, ಅಧಿಕಾರಿಗಲೇ ಇದೀಗ ಸರ್ಕಾರದ ನಿಯಮ ಗಾಳಿಗೆ ತೂರಿ ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮತ್ತು ಮುಖ್ಯ ಕಾರ್ಯ ನಿರ್ವಾಹಕ ಎಂಜಿನಿಯರ್ರ ವಸತಿ ಗೃಹದ ದುರಸ್ತಿ ಕಾಮಗಾರಿಗೆ ಅನುದಾನ ಬಳಸಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಜಿಲ್ಲಾ ಪಂಚಾಯಿತಿ ಕಟ್ಟಡ ದುರಸ್ತಿ ಕಾಮಗಾರಿಯನ್ನು ತುಂಡು ಗುತ್ತಿಗೆ ನೀಡಿ ಅಕ್ರಮ ನಡೆಸಿರುವ ಆರೋಪ ಕೇಳಿಬಂದಿದ್ದು, ಲಕ್ಷಾಂತರ ರೂಪಾಯಿ ಸರ್ಕಾರದ ಅನುದಾನ ದುರ್ಬಳಕೆಯಾಗಿದೆ.</p>.<p>ರಾಜ್ಯ ಸರ್ಕಾರವು ಪ್ರತಿ ಹಣಕಾಸು ವರ್ಷದಲ್ಲಿ ಜಿ.ಪಂ ಕಟ್ಟಡ ದುರಸ್ತಿಗೆ ಅನುದಾನ ನೀಡುತ್ತದೆ. ಅದೇ ರೀತಿ ಈ ಬಾರಿಯೂ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ರಾಜ್ ಅಭಿವೃದ್ಧಿ ಇಲಾಖೆಯಿಂದ ಅನುದಾನ ಬಿಡುಗಡೆ ಮಾಡಲಾಗಿತ್ತು.</p>.<p>ಈ ಅನುದಾನವನ್ನು ಜಿ.ಪಂ ಆವರಣದಲ್ಲಿನ ಕಾಮಗಾರಿಗಳಿಗೆ ಮಾತ್ರ ಬಳಸಬೇಕೆಂಬ ನಿಯಮವಿದೆ. ಅನುದಾನ ಬಳಕೆ ಮಾಡದಿದ್ದರೆ ಸರ್ಕಾರಕ್ಕೆ ವಾಪಸ್ ಹೋಗುತ್ತದೆ. ಈ ಒಂದು ಕಾರಣಕ್ಕಾಗಿ ಜಿ.ಪಂ ಚುನಾಯಿತ ಮಂಡಳಿಯು ಹಾಗೂ ಅಧಿಕಾರಿಗಳು ಹಿಂದಿನ ವರ್ಷಗಳಲ್ಲಿ ಜಿ.ಪಂ ಕಟ್ಟಡದಲ್ಲಿ ಮಾಡಿದ್ದ ದುರಸ್ತಿ ಕಾಮಗಾರಿಗಳನ್ನೇ ಇದೀಗ ಮತ್ತೊಮ್ಮೆ ಮಾಡಿಸಿದ್ದಾರೆ.</p>.<p>ಪ್ರಸಕ್ತ ಹಣಕಾಸು ವರ್ಷದಲ್ಲಿ ಕಟ್ಟಡ ದುರಸ್ತಿಗೆ ಬಿಡುಗಡೆಯಾಗಿದ್ದ ₹ 85 ಲಕ್ಷ ಅನುದಾನಕ್ಕೆ ಟೆಂಡರ್ ಕರೆಯದೆ ಒಂದೇ ಕಟ್ಟಡದಲ್ಲಿ 35 ಕಾಮಗಾರಿಗಳಾಗಿ ವಿಂಗಡಿಸಿ ತುಂಡು ಗುತ್ತಿಗೆ ನೀಡಲಾಗಿದೆ. ಕರ್ನಾಟಕ ಸಾರ್ವಜನಿಕ ಖರೀದಿಗಳಲ್ಲಿ ಪಾರದರ್ಶಕತೆ (ಕೆಟಿಟಿಪಿ) ಕಾಯ್ದೆ ಪ್ರಕಾರ ₹ 2.50 ಲಕ್ಷಕ್ಕಿಂತ ಹೆಚ್ಚಿನ ಮೊತ್ತದ ಕಾಮಗಾರಿಗಳನ್ನು ಟೆಂಡರ್ ಮೂಲಕವೇ ನೀಡಬೇಕು.</p>.<p>ಹೀಗಾಗಿ ಟೆಂಡರ್ ಪ್ರಕ್ರಿಯೆ ತಪ್ಪಿಸಲು ಪ್ರತಿ ಕಾಮಗಾರಿ ವೆಚ್ಚವನ್ನು ₹ 2.50 ಲಕ್ಷವೆಂದು ತೋರಿಸಿ ಟೆಂಡರ್ ಕರೆಯದೆ ದುರಸ್ತಿ ಕಾಮಗಾರಿ ನಡೆಸಲಾಗಿದೆ. ಜಿ.ಪಂನ ಕೆಲ ಪ್ರಭಾವಿ ಸದಸ್ಯರು ತಮ್ಮ ಪರಮಾಪ್ತ ಗುತ್ತಿಗೆದಾರರಿಂದ ಕಾಮಗಾರಿ ಮಾಡಿಸಿದ್ದಾರೆ. ಈ ಬಗ್ಗೆ ಜಿ.ಪಂನ ಕೆಲ ಸದಸ್ಯರು ಅಸಮಾಧಾನ ವ್ಯಕ್ತಪಡಿಸಿದ್ದು, ಅಕ್ರಮದ ಆರೋಪ ಮಾಡಿದ್ದಾರೆ.</p>.<p>ಹೊರಗೆ ಬಳಕೆ: ಜಿ.ಪಂ ಕಟ್ಟಡ ದುರಸ್ತಿ ಅನುದಾನವನ್ನು ಶಾಲೆ, ಅಂಗನವಾಡಿ, ಪ್ರಾಥಮಿಕ ಆರೋಗ್ಯ ಕೇಂದ್ರಗಳ ದುರಸ್ತಿಗೆ ಬಳಸುವಂತೆ ಹಲವು ಸದಸ್ಯರು ಸಭೆಯಲ್ಲಿ ಮನವಿ ಮಾಡಿದ್ದರು. ಆದರೆ, ಅಧಿಕಾರಿಗಳು ಈ ಅನುದಾನವನ್ನು ಜಿ.ಪಂ ಆವರಣದ ಹೊರಗಿನ ಕಾಮಗಾರಿಗಳಿಗೆ ಖರ್ಚು ಮಾಡುವಂತಿಲ್ಲ ಎಂದು ಸಬೂಬು ಹೇಳಿ ಅನುದಾನ ನೀಡಲು ನಿರಾಕರಿಸಿದ್ದರು.</p>.<p>ಆದರೆ, ಅಧಿಕಾರಿಗಲೇ ಇದೀಗ ಸರ್ಕಾರದ ನಿಯಮ ಗಾಳಿಗೆ ತೂರಿ ಜಿ.ಪಂ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮತ್ತು ಮುಖ್ಯ ಕಾರ್ಯ ನಿರ್ವಾಹಕ ಎಂಜಿನಿಯರ್ರ ವಸತಿ ಗೃಹದ ದುರಸ್ತಿ ಕಾಮಗಾರಿಗೆ ಅನುದಾನ ಬಳಸಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>