<p><strong>ಕೋಲಾರ:</strong> ‘ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆಯನ್ನು ಕೋವಿಡ್ ಮಾರ್ಗಸೂಚಿಯಂತೆ ನಡೆಸಬೇಕು. ಇಲ್ಲವಾದರೆ ಸೋಂಕು ಹೆಚ್ಚಳವಾಗುವ ಸಾಧ್ಯತೆಯಿದೆ’ ಎಂದು ಸಂಸದ ಎಸ್.ಮುನಿಸ್ವಾಮಿ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ರಹಮತ್ನಗರ ಹಿಂದೂ ರುದ್ರಭೂಮಿಯಲ್ಲಿನ ಅನಿಲ ಚಿತಾಗಾರವನ್ನು ಶುಕ್ರವಾರ ಪರಿಶೀಲಿಸಿ ಮಾತನಾಡಿ, ‘ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ ಹೆಚ್ಚಳವಾಗಿದ್ದು, ಮೃತರ ಅಂತ್ಯಕ್ರಿಯೆಗೆ ಜಾಗದ ಸಮಸ್ಯೆ ಎದುರಾಗಿದೆ. ಹೀಗಾಗಿ ಅನಿಲ ಚಿತಾಗಾರ ಕಾರ್ಯಾರಂಭ ಮಾಡಿಸಲು ನಿರ್ಧರಿಸಲಾಗಿದೆ’ ಎಂದು ತಿಳಿಸಿದರು.</p>.<p>‘ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆಯನ್ನು ಎಲ್ಲೆಂದರಲ್ಲಿ ನಡೆಸುತ್ತಿರುವುದರಿಂದ ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುತ್ತಿದೆ. ಅಂತ್ಯಕ್ರಿಯೆಯಲ್ಲಿ ಭಾಗಿಯಾಗುವವರು ಸುರಕ್ಷತಾ ಕ್ರಮ ಪಾಲಿಸುತ್ತಿಲ್ಲ. ಹೀಗಾಗಿ ಅವರಿಗೆ ಅರಿವಿಲ್ಲದೆ ಸೋಂಕು ಬರುತ್ತಿದೆ. ಆದ ಕಾರಣ ಅಂತ್ಯಕ್ರಿಯೆಯನ್ನು ನಿಯಮಬದ್ಧವಾಗಿ ನಡೆಸಬೇಕು’ ಎಂದು ಸೂಚಿಸಿದರು.</p>.<p>‘ಅನಿಲ ಚಿತಾಗಾರದಲ್ಲಿ 2 ಶವಗಳನ್ನು ಪ್ರಾಯೋಗಿಕವಾಗಿ ಸುಡಲಾಗಿದೆ. ನಗರಸಭೆ ಈ ಚಿತಾಗಾರದ ನಿರ್ವಹಣೆ ಮಾಡಲಿದ್ದು, ಪ್ರತಿ ಅಂತ್ಯಸಂಸ್ಕಾರಕ್ಕೆ ₹ 3,500 ದರ ನಿಗದಿಪಡಿಸಿದೆ. ಒಂದು ಶವ ದಹಿಸಲು ಒಂದು ಗ್ಯಾಸ್ ಸಿಲಿಂಡರ್ ಬೇಕಾಗುತ್ತದೆ. ಆರ್ಥಿಕ ಸ್ಥಿತಿವಂತರು ಅಂತ್ಯಕ್ರಿಯೆಗೆ ನಿಗದಿತ ಶುಲ್ಕ ಪಾವತಿಸಬೇಕು. ಬಡವರಿಗೆ ಶುಲ್ಕ ಪಾವತಿಸಲು ಸಾಧ್ಯವಾಗದಿದ್ದರೆ ನಗರಸಭೆಯಿಂದ ಅಥವಾ ಜನಪ್ರತಿನಿಧಿಗಳು ಶುಲ್ಕ ಭರಿಸುತ್ತಾರೆ’ ಎಂದು ಹೇಳಿದರು.</p>.<p>ಶಕ್ತಿಮೀರಿ ಪ್ರಯತ್ನ: ‘ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ನಿಯಂತ್ರಣಕ್ಕೆ ಜಿಲ್ಲಾಡಳಿತ, ಆರೋಗ್ಯ ಮತ್ತು ಪೊಲೀಸ್ ಇಲಾಖೆ ಶಕ್ತಿಮೀರಿ ಪ್ರಯತ್ನ ಮಾಡುತ್ತಿವೆ. ಜನಪ್ರತಿನಿಧಿಗಳು ಸಹ ಅಗತ್ಯ ಸಹಕಾರ ನೀಡುತ್ತಿದ್ದಾರೆ. ಆದರೂ ಸೋಂಕು ನಿಯಂತ್ರಣಕ್ಕೆ ಬಾರದ ಕಾರಣ ಜಿಲ್ಲೆಯ 3 ದಿನಗಳ ಕಾಲ ಸಂಪೂರ್ಣ ಲಾಕ್ಡೌನ್ ಜಾರಿ ಮಾಡಲಾಗಿದೆ. ಜನರು ಮನೆಗಳಲ್ಲೇ ಇದ್ದು, ಲಾಕ್ಡೌನ್ಗೆ ಸಹಕರಿಸಬೇಕು’ ಎಂದು ಮನವಿ ಮಾಡಿದರು.</p>.<p>‘ಹಿಂದೂ ರುದ್ರಭೂಮಿ ಆವರಣವನ್ನು ಸ್ವಚ್ಛ ಮಾಡಿಸಿ ಮತ್ತು ಆವರಣದಲ್ಲಿ ಸಸಿಗಳನ್ನು ನೆಡಿಸಿ. ಶವಸಂಸ್ಕಾರಕ್ಕೆ ಬರುವವರಿಗೆ ನೀರಿನ ವ್ಯವಸ್ಥೆ ಮಾಡಿ’ ಎಂದು ನಗರಸಭೆ ಆಯುಕ್ತರಿಗೆ ಸೂಚಿಸಿದರು. ಬಳಿಕ ಆಯುಕ್ತರು ಸ್ಥಳಕ್ಕೆ ಜೆಸಿಬಿ ವಾಹನಗಳನ್ನು ಕರೆಸಿ ಇಡೀ ಆವರಣವನ್ನು ಸ್ವಚ್ಛ ಮಾಡಿಸಿದರು.</p>.<p>ನಗರಸಭೆ ಸದಸ್ಯ ಎಸ್.ಆರ್.ಮುರಳಿಗೌಡ, ಆಯುಕ್ತ ಆರ್.ಶ್ರೀಕಾಂತ್, ಜಿಲ್ಲಾ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ನಾರಾಯಣಗೌಡ, ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ಜಾಮೀಲ್ ಪಾಷಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆಯನ್ನು ಕೋವಿಡ್ ಮಾರ್ಗಸೂಚಿಯಂತೆ ನಡೆಸಬೇಕು. ಇಲ್ಲವಾದರೆ ಸೋಂಕು ಹೆಚ್ಚಳವಾಗುವ ಸಾಧ್ಯತೆಯಿದೆ’ ಎಂದು ಸಂಸದ ಎಸ್.ಮುನಿಸ್ವಾಮಿ ಅಭಿಪ್ರಾಯಪಟ್ಟರು.</p>.<p>ಇಲ್ಲಿನ ರಹಮತ್ನಗರ ಹಿಂದೂ ರುದ್ರಭೂಮಿಯಲ್ಲಿನ ಅನಿಲ ಚಿತಾಗಾರವನ್ನು ಶುಕ್ರವಾರ ಪರಿಶೀಲಿಸಿ ಮಾತನಾಡಿ, ‘ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ ಹೆಚ್ಚಳವಾಗಿದ್ದು, ಮೃತರ ಅಂತ್ಯಕ್ರಿಯೆಗೆ ಜಾಗದ ಸಮಸ್ಯೆ ಎದುರಾಗಿದೆ. ಹೀಗಾಗಿ ಅನಿಲ ಚಿತಾಗಾರ ಕಾರ್ಯಾರಂಭ ಮಾಡಿಸಲು ನಿರ್ಧರಿಸಲಾಗಿದೆ’ ಎಂದು ತಿಳಿಸಿದರು.</p>.<p>‘ಕೊರೊನಾ ಸೋಂಕಿನಿಂದ ಮೃತಪಟ್ಟವರ ಅಂತ್ಯಕ್ರಿಯೆಯನ್ನು ಎಲ್ಲೆಂದರಲ್ಲಿ ನಡೆಸುತ್ತಿರುವುದರಿಂದ ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುತ್ತಿದೆ. ಅಂತ್ಯಕ್ರಿಯೆಯಲ್ಲಿ ಭಾಗಿಯಾಗುವವರು ಸುರಕ್ಷತಾ ಕ್ರಮ ಪಾಲಿಸುತ್ತಿಲ್ಲ. ಹೀಗಾಗಿ ಅವರಿಗೆ ಅರಿವಿಲ್ಲದೆ ಸೋಂಕು ಬರುತ್ತಿದೆ. ಆದ ಕಾರಣ ಅಂತ್ಯಕ್ರಿಯೆಯನ್ನು ನಿಯಮಬದ್ಧವಾಗಿ ನಡೆಸಬೇಕು’ ಎಂದು ಸೂಚಿಸಿದರು.</p>.<p>‘ಅನಿಲ ಚಿತಾಗಾರದಲ್ಲಿ 2 ಶವಗಳನ್ನು ಪ್ರಾಯೋಗಿಕವಾಗಿ ಸುಡಲಾಗಿದೆ. ನಗರಸಭೆ ಈ ಚಿತಾಗಾರದ ನಿರ್ವಹಣೆ ಮಾಡಲಿದ್ದು, ಪ್ರತಿ ಅಂತ್ಯಸಂಸ್ಕಾರಕ್ಕೆ ₹ 3,500 ದರ ನಿಗದಿಪಡಿಸಿದೆ. ಒಂದು ಶವ ದಹಿಸಲು ಒಂದು ಗ್ಯಾಸ್ ಸಿಲಿಂಡರ್ ಬೇಕಾಗುತ್ತದೆ. ಆರ್ಥಿಕ ಸ್ಥಿತಿವಂತರು ಅಂತ್ಯಕ್ರಿಯೆಗೆ ನಿಗದಿತ ಶುಲ್ಕ ಪಾವತಿಸಬೇಕು. ಬಡವರಿಗೆ ಶುಲ್ಕ ಪಾವತಿಸಲು ಸಾಧ್ಯವಾಗದಿದ್ದರೆ ನಗರಸಭೆಯಿಂದ ಅಥವಾ ಜನಪ್ರತಿನಿಧಿಗಳು ಶುಲ್ಕ ಭರಿಸುತ್ತಾರೆ’ ಎಂದು ಹೇಳಿದರು.</p>.<p>ಶಕ್ತಿಮೀರಿ ಪ್ರಯತ್ನ: ‘ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ನಿಯಂತ್ರಣಕ್ಕೆ ಜಿಲ್ಲಾಡಳಿತ, ಆರೋಗ್ಯ ಮತ್ತು ಪೊಲೀಸ್ ಇಲಾಖೆ ಶಕ್ತಿಮೀರಿ ಪ್ರಯತ್ನ ಮಾಡುತ್ತಿವೆ. ಜನಪ್ರತಿನಿಧಿಗಳು ಸಹ ಅಗತ್ಯ ಸಹಕಾರ ನೀಡುತ್ತಿದ್ದಾರೆ. ಆದರೂ ಸೋಂಕು ನಿಯಂತ್ರಣಕ್ಕೆ ಬಾರದ ಕಾರಣ ಜಿಲ್ಲೆಯ 3 ದಿನಗಳ ಕಾಲ ಸಂಪೂರ್ಣ ಲಾಕ್ಡೌನ್ ಜಾರಿ ಮಾಡಲಾಗಿದೆ. ಜನರು ಮನೆಗಳಲ್ಲೇ ಇದ್ದು, ಲಾಕ್ಡೌನ್ಗೆ ಸಹಕರಿಸಬೇಕು’ ಎಂದು ಮನವಿ ಮಾಡಿದರು.</p>.<p>‘ಹಿಂದೂ ರುದ್ರಭೂಮಿ ಆವರಣವನ್ನು ಸ್ವಚ್ಛ ಮಾಡಿಸಿ ಮತ್ತು ಆವರಣದಲ್ಲಿ ಸಸಿಗಳನ್ನು ನೆಡಿಸಿ. ಶವಸಂಸ್ಕಾರಕ್ಕೆ ಬರುವವರಿಗೆ ನೀರಿನ ವ್ಯವಸ್ಥೆ ಮಾಡಿ’ ಎಂದು ನಗರಸಭೆ ಆಯುಕ್ತರಿಗೆ ಸೂಚಿಸಿದರು. ಬಳಿಕ ಆಯುಕ್ತರು ಸ್ಥಳಕ್ಕೆ ಜೆಸಿಬಿ ವಾಹನಗಳನ್ನು ಕರೆಸಿ ಇಡೀ ಆವರಣವನ್ನು ಸ್ವಚ್ಛ ಮಾಡಿಸಿದರು.</p>.<p>ನಗರಸಭೆ ಸದಸ್ಯ ಎಸ್.ಆರ್.ಮುರಳಿಗೌಡ, ಆಯುಕ್ತ ಆರ್.ಶ್ರೀಕಾಂತ್, ಜಿಲ್ಲಾ ನಿರ್ಮಿತಿ ಕೇಂದ್ರದ ಯೋಜನಾ ನಿರ್ದೇಶಕ ನಾರಾಯಣಗೌಡ, ಜಿಲ್ಲಾ ವಕ್ಫ್ ಬೋರ್ಡ್ ಅಧ್ಯಕ್ಷ ಜಾಮೀಲ್ ಪಾಷಾ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>