<p>ಕೋಲಾರ: ‘ದೇಶ ಹಾಗೂ ರಾಜ್ಯದಲ್ಲಿ ಆನ್ಲೈನ್ ಬೆಟ್ಟಿಂಗ್ ದಂಧೆ ವ್ಯಾಪಕವಾಗಿ ನಡೆಯುತ್ತಿದ್ದು, ಈ ಬಗ್ಗೆ ಯುವಕ ಯುವತಿಯರಿಗೆ ಜಾಗೃತಿ ಮೂಡಿಸುವ ಉದ್ದೇಶಕ್ಕೆ ಜೂಜು ಮುಕ್ತ ಕರ್ನಾಟಕ ಜನಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ’ ಎಂದು ಕರ್ನಾಟಕ ರಕ್ಷಣಾ ವೇದಿಕೆ ಸಮರ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ವಿ.ಎನ್.ಪ್ರದೀಪ್ ತಿಳಿಸಿದರು.</p>.<p>ಇಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಜೂಜಾಟಕ್ಕೆ ಕಡಿವಾಣ ಹಾಕಬೇಕಾದ ಸರ್ಕಾರಗಳೇ ಜೂಜಾಟಕ್ಕೆ ಅನುಮತಿ ನೀಡಿ ಯುವಕ ಯುವತಿಯರನ್ನು ತಪ್ಪು ದಾರಿಗೆ ಎಳೆಯುತ್ತಿವೆ’ ಎಂದು ದೂರಿದರು.</p>.<p>‘ಆಕರ್ಷಕ ಜಾಹೀರಾತು ನೀಡಿ ಆಟ ಆಡಿ ಹಣ ಗೆಲ್ಲಿ ಎಂದು ಖ್ಯಾತನಾಮರ ಮೂಲಕ ಹೇಳಿಸುವ ಐಪಿಎಲ್ ಆಯೋಜಕರು ಪರೋಕ್ಷವಾಗಿ ಜೂಜಾಟಕ್ಕೆ ಪ್ರೋತ್ಸಾಹ ನೀಡುತ್ತಿದ್ದಾರೆ. ಯುವಕ ಯುವತಿಯರು ಈ ಜಾಹೀರಾತುಗಳಿಂದ ಪ್ರೇರಿತರಾಗಿ ಅಡ್ಡ ದಾರಿ ಹಿಡಿದು ಜೂಜಿನಲ್ಲಿ ಹಣ ಕಳೆದುಕೊಂಡು ಹತಾಶೆಯಿಂದ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ’ ಎಂದು ಹೇಳಿದರು.</p>.<p>‘ಜೂಜಾಟದ ಅಪಾಯದ ಬಗ್ಗೆ ಜನ ಜಾಗೃತಿ ಮೂಡಿಸಬೇಕು. ಸಾಮಾಜಿಕ ಜವಾಬ್ದಾರಿ ಹೊಂದಿರುವ ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು, ವಿಚಾರವಂತರು ಈ ಬಗ್ಗೆ ಧ್ವನಿ ಎತ್ತಬೇಕು’ ಎಂದು ಮನವಿ ಮಾಡಿದರು.</p>.<p>ಸಂಘಟನೆಯ ತಾಲ್ಲೂಕು ಘಟಕದ ಉಪಾಧ್ಯಕ್ಷ ಕೃಷ್ಣ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ‘ದೇಶ ಹಾಗೂ ರಾಜ್ಯದಲ್ಲಿ ಆನ್ಲೈನ್ ಬೆಟ್ಟಿಂಗ್ ದಂಧೆ ವ್ಯಾಪಕವಾಗಿ ನಡೆಯುತ್ತಿದ್ದು, ಈ ಬಗ್ಗೆ ಯುವಕ ಯುವತಿಯರಿಗೆ ಜಾಗೃತಿ ಮೂಡಿಸುವ ಉದ್ದೇಶಕ್ಕೆ ಜೂಜು ಮುಕ್ತ ಕರ್ನಾಟಕ ಜನಜಾಗೃತಿ ಅಭಿಯಾನ ಹಮ್ಮಿಕೊಳ್ಳಲಾಗಿದೆ’ ಎಂದು ಕರ್ನಾಟಕ ರಕ್ಷಣಾ ವೇದಿಕೆ ಸಮರ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ವಿ.ಎನ್.ಪ್ರದೀಪ್ ತಿಳಿಸಿದರು.</p>.<p>ಇಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಜೂಜಾಟಕ್ಕೆ ಕಡಿವಾಣ ಹಾಕಬೇಕಾದ ಸರ್ಕಾರಗಳೇ ಜೂಜಾಟಕ್ಕೆ ಅನುಮತಿ ನೀಡಿ ಯುವಕ ಯುವತಿಯರನ್ನು ತಪ್ಪು ದಾರಿಗೆ ಎಳೆಯುತ್ತಿವೆ’ ಎಂದು ದೂರಿದರು.</p>.<p>‘ಆಕರ್ಷಕ ಜಾಹೀರಾತು ನೀಡಿ ಆಟ ಆಡಿ ಹಣ ಗೆಲ್ಲಿ ಎಂದು ಖ್ಯಾತನಾಮರ ಮೂಲಕ ಹೇಳಿಸುವ ಐಪಿಎಲ್ ಆಯೋಜಕರು ಪರೋಕ್ಷವಾಗಿ ಜೂಜಾಟಕ್ಕೆ ಪ್ರೋತ್ಸಾಹ ನೀಡುತ್ತಿದ್ದಾರೆ. ಯುವಕ ಯುವತಿಯರು ಈ ಜಾಹೀರಾತುಗಳಿಂದ ಪ್ರೇರಿತರಾಗಿ ಅಡ್ಡ ದಾರಿ ಹಿಡಿದು ಜೂಜಿನಲ್ಲಿ ಹಣ ಕಳೆದುಕೊಂಡು ಹತಾಶೆಯಿಂದ ಆತ್ಮಹತ್ಯೆಗೆ ಶರಣಾಗುತ್ತಿದ್ದಾರೆ’ ಎಂದು ಹೇಳಿದರು.</p>.<p>‘ಜೂಜಾಟದ ಅಪಾಯದ ಬಗ್ಗೆ ಜನ ಜಾಗೃತಿ ಮೂಡಿಸಬೇಕು. ಸಾಮಾಜಿಕ ಜವಾಬ್ದಾರಿ ಹೊಂದಿರುವ ಜನಪ್ರತಿನಿಧಿಗಳು, ಸಂಘ ಸಂಸ್ಥೆಗಳು, ವಿಚಾರವಂತರು ಈ ಬಗ್ಗೆ ಧ್ವನಿ ಎತ್ತಬೇಕು’ ಎಂದು ಮನವಿ ಮಾಡಿದರು.</p>.<p>ಸಂಘಟನೆಯ ತಾಲ್ಲೂಕು ಘಟಕದ ಉಪಾಧ್ಯಕ್ಷ ಕೃಷ್ಣ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>