<p><strong>ಕೋಲಾರ:</strong> ‘ಮುಜರಾಯಿ ಇಲಾಖೆಯು ನಿರ್ಮಿಸಿರುವ ಅನಿಲ ಚಿತಾಗಾರವನ್ನು ನಗರಸಭೆಯ ಸ್ವಾಧೀನಕ್ಕೆ ಪಡೆದು ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಲು ನಿರ್ಧರಿಸಲಾಗಿದೆ’ ಎಂದು ನಗರಸಭೆ ಆಯುಕ್ತ ಶ್ರೀಕಾಂತ್ ತಿಳಿಸಿದರು.</p>.<p>ನಗರದ ರಹಮತ್ನಗರ ಬಳಿಯ ಹಿಂದೂ ರುದ್ರಭೂಮಿಯಲ್ಲಿರುವ ಅನಿಲ ಚಿತಾಗಾರಕ್ಕೆ ನಗರಸಭಾ ಸದಸ್ಯರೊಂದಿಗೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿ, ‘ಜಿಲ್ಲಾ ನಿರ್ಮಿತಿ ಕೇಂದ್ರವು ಸುಮಾರು ₹ 1.10 ವೆಚ್ಚದಲ್ಲಿ ಈ ಚಿತಾಗಾರ ನಿರ್ಮಿಸಿದೆ’ ಎಂದು ಹೇಳಿದರು.</p>.<p>‘ಕೊರೊನಾ ಸೋಂಕಿತರ ಸಾವಿನ ಸಂಖ್ಯೆ ಹೆಚ್ಚಳವಾಗಿರುವುದರಿಂದ ಜಿಲ್ಲಾ ಕೇಂದ್ರದಲ್ಲಿ ಅಂತ್ಯಕ್ರಿಯೆಗೆ ಸಮಸ್ಯೆಯಾಗಿದೆ. ಸ್ಮಶಾನಗಳಲ್ಲಿ ಜಾಗ ಇಲ್ಲವಾಗಿದೆ. ಹೀಗಾಗಿ ಸಂಸದರು, ಶಾಸಕರು ಹಾಗೂ ಜಿಲ್ಲಾಧಿಕಾರಿಯು ಅನಿಲ ಚಿತಾಗಾರವನ್ನು ನಗರಸಭೆ ಸುಪರ್ದಿಗೆ ಪಡೆದು ಬಳಕೆಗೆ ಮುಕ್ತಗೊಳಿಸುವಂತೆ ಸೂಚಿಸಿದ್ದಾರೆ’ ಎಂದು ಮಾಹಿತಿ ನೀಡಿದರು.</p>.<p>‘ಇತ್ತೀಚೆಗೆ ನಡೆದ ನಗರಸಭೆ ಸಾಮಾನ್ಯ ಸಭೆಯಲ್ಲಿ ಅನಿಲ ಚಿತಾಗಾರವನ್ನು ನಗರಸಭೆಯ ವಶಕ್ಕೆ ಪಡೆಯುವ ಬಗ್ಗೆ ವಿಸ್ತೃತ ಚರ್ಚೆ ನಡೆಸಿ ನಿರ್ಣಯ ಕೈಗೊಳ್ಳಲಾಗಿದೆ. ಗ್ಯಾಸ್ ಸಿಲಿಂಡರ್, ಚಿತಾಗಾರದ ಸ್ವಚ್ಛತಾ ಕಾರ್ಯ, ಸಿಬ್ಬಂದಿ ವೇತನ ಸೇರಿದಂತೆ ಒಂದು ಶವ ಸುಡಲು ₹ 3,600 ದರ ನಿಗದಿಪಡಿಸಲು ನಿರ್ಧರಿಸಲಾಗಿದೆ’ ಎಂದು ವಿವರಿಸಿದರು.</p>.<p><strong>ಪರಿಸರ ಸ್ನೇಹಿ:</strong> ‘ತಜ್ಞರ ತಾಂತ್ರಿಕ ಸಲಹೆಯಂತೆ ಆಧುನಿಕ ಶೈಲಿಯಲ್ಲಿ ವಿನ್ಯಾಸ ಮಾಡಿರುವ ಅನಿಲ ಚಿತಾಗಾರ ಸಂಪೂರ್ಣ ಪರಿಸರ ಸ್ನೇಹಿಯಾಗಿದೆ. ಈ ಚಿತಾಗಾರದಲ್ಲಿ ಒಂದು ಶವ ಸುಡಲು ಕನಿಷ್ಠ 1 ತಾಸು ಬೇಕು. ಕಟ್ಟಿಗೆ ಅಥವಾ ಮರದ ತುಂಡುಗಳಲ್ಲಿ ಶವ ಸುಡಲು ಹೆಚ್ಚಿನ ಕಾಲಾವಕಾಶ ಬೇಕಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.</p>.<p>‘ವಿದ್ಯುತ್ ಚಿತಾಗಾರಕ್ಕೆ ನಿರಂತರ ವಿದ್ಯುತ್ ಪೂರೈಕೆ ಅತ್ಯಗತ್ಯ. ಶವ ಸುಡುವಾಗ ವಿದ್ಯುತ್ ಕಡಿತಗೊಂಡರೆ ಸಮಸ್ಯೆ ಎದುರಿಸಬೇಕಾಗುತ್ತದೆ. ಆದರೆ, ಅನಿಲ ಚಿತಾಗಾರದಲ್ಲಿ ಈ ಕಿರಿಕಿರಿ ಇಲ್ಲ. ಮರದ ತುಂಡುಗಳು ಅಥವಾ ಕಟ್ಟಿಗೆಯಲ್ಲಿ ಶವ ಸುಡುವ ಕ್ರಮವು ದುಬಾರಿ ವೆಚ್ಚದ್ದು. ಈ ವಿಧಾನವು ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಆರ್ಥಿಕ ಹೊರೆಯಾಗಿದೆ. ಅಲ್ಲದೇ, ಕಟ್ಟಿಗೆಯಲ್ಲಿ ಶವ ಸುಡುವುದರಿಂದ ಪರಿಸರ ಮಾಲಿನ್ಯವಾಗುತ್ತದೆ’ ಎಂದು ಹೇಳಿದರು.</p>.<p>‘ಸದ್ಯ ಶವ ಸುಡುವ ಕಾರ್ಯ ವಿಧಾನದ ಬಗ್ಗೆ ತರಬೇತಿ ಪಡೆದ ಸಿಬ್ಬಂದಿಯಿಲ್ಲ. ಚಿತಾಗಾರದಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗೆ ತರಬೇತಿಯ ಅಗತ್ಯವಿದ್ದು, ನಿರ್ಮಿತಿ ಕೇಂದ್ರದ ಅಧಿಕಾರಿಗಳು 2 ತಿಂಗಳು ತರಬೇತಿ ಕೊಡಿಸಲು ಒಪ್ಪಿದ್ದಾರೆ’ ಎಂದು ತಿಳಿಸಿದರು.</p>.<p><strong>ಫಲಕ ಅಳವಡಿಕೆ</strong>: ‘ನಗರಸಭೆಯಿಂದ ದರ ನಿಗದಿಪಡಿಸಿ ಚಿತಾಗಾರದ ಬಳಿ ನಗರಸಭೆಯ ದೂರವಾಣಿ ಸಂಖ್ಯೆಯೊಂದಿಗೆ ಫಲಕ ಅಳವಡಿಸಲಾಗುತ್ತದೆ. ಸಂಸ್ಕಾರದ ಸಂದರ್ಭದಲ್ಲಿ ಸಮಸ್ಯೆಯಾದರೆ ನಾಗರೀಕರು ನಗರಸಭೆ ದೂರವಾಣಿ ಸಂಖ್ಯೆ ಸಂಪರ್ಕಿಸಬಹುದು’ ಎಂದು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ಮುಜರಾಯಿ ಇಲಾಖೆಯು ನಿರ್ಮಿಸಿರುವ ಅನಿಲ ಚಿತಾಗಾರವನ್ನು ನಗರಸಭೆಯ ಸ್ವಾಧೀನಕ್ಕೆ ಪಡೆದು ಸಾರ್ವಜನಿಕ ಬಳಕೆಗೆ ಮುಕ್ತಗೊಳಿಸಲು ನಿರ್ಧರಿಸಲಾಗಿದೆ’ ಎಂದು ನಗರಸಭೆ ಆಯುಕ್ತ ಶ್ರೀಕಾಂತ್ ತಿಳಿಸಿದರು.</p>.<p>ನಗರದ ರಹಮತ್ನಗರ ಬಳಿಯ ಹಿಂದೂ ರುದ್ರಭೂಮಿಯಲ್ಲಿರುವ ಅನಿಲ ಚಿತಾಗಾರಕ್ಕೆ ನಗರಸಭಾ ಸದಸ್ಯರೊಂದಿಗೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿ, ‘ಜಿಲ್ಲಾ ನಿರ್ಮಿತಿ ಕೇಂದ್ರವು ಸುಮಾರು ₹ 1.10 ವೆಚ್ಚದಲ್ಲಿ ಈ ಚಿತಾಗಾರ ನಿರ್ಮಿಸಿದೆ’ ಎಂದು ಹೇಳಿದರು.</p>.<p>‘ಕೊರೊನಾ ಸೋಂಕಿತರ ಸಾವಿನ ಸಂಖ್ಯೆ ಹೆಚ್ಚಳವಾಗಿರುವುದರಿಂದ ಜಿಲ್ಲಾ ಕೇಂದ್ರದಲ್ಲಿ ಅಂತ್ಯಕ್ರಿಯೆಗೆ ಸಮಸ್ಯೆಯಾಗಿದೆ. ಸ್ಮಶಾನಗಳಲ್ಲಿ ಜಾಗ ಇಲ್ಲವಾಗಿದೆ. ಹೀಗಾಗಿ ಸಂಸದರು, ಶಾಸಕರು ಹಾಗೂ ಜಿಲ್ಲಾಧಿಕಾರಿಯು ಅನಿಲ ಚಿತಾಗಾರವನ್ನು ನಗರಸಭೆ ಸುಪರ್ದಿಗೆ ಪಡೆದು ಬಳಕೆಗೆ ಮುಕ್ತಗೊಳಿಸುವಂತೆ ಸೂಚಿಸಿದ್ದಾರೆ’ ಎಂದು ಮಾಹಿತಿ ನೀಡಿದರು.</p>.<p>‘ಇತ್ತೀಚೆಗೆ ನಡೆದ ನಗರಸಭೆ ಸಾಮಾನ್ಯ ಸಭೆಯಲ್ಲಿ ಅನಿಲ ಚಿತಾಗಾರವನ್ನು ನಗರಸಭೆಯ ವಶಕ್ಕೆ ಪಡೆಯುವ ಬಗ್ಗೆ ವಿಸ್ತೃತ ಚರ್ಚೆ ನಡೆಸಿ ನಿರ್ಣಯ ಕೈಗೊಳ್ಳಲಾಗಿದೆ. ಗ್ಯಾಸ್ ಸಿಲಿಂಡರ್, ಚಿತಾಗಾರದ ಸ್ವಚ್ಛತಾ ಕಾರ್ಯ, ಸಿಬ್ಬಂದಿ ವೇತನ ಸೇರಿದಂತೆ ಒಂದು ಶವ ಸುಡಲು ₹ 3,600 ದರ ನಿಗದಿಪಡಿಸಲು ನಿರ್ಧರಿಸಲಾಗಿದೆ’ ಎಂದು ವಿವರಿಸಿದರು.</p>.<p><strong>ಪರಿಸರ ಸ್ನೇಹಿ:</strong> ‘ತಜ್ಞರ ತಾಂತ್ರಿಕ ಸಲಹೆಯಂತೆ ಆಧುನಿಕ ಶೈಲಿಯಲ್ಲಿ ವಿನ್ಯಾಸ ಮಾಡಿರುವ ಅನಿಲ ಚಿತಾಗಾರ ಸಂಪೂರ್ಣ ಪರಿಸರ ಸ್ನೇಹಿಯಾಗಿದೆ. ಈ ಚಿತಾಗಾರದಲ್ಲಿ ಒಂದು ಶವ ಸುಡಲು ಕನಿಷ್ಠ 1 ತಾಸು ಬೇಕು. ಕಟ್ಟಿಗೆ ಅಥವಾ ಮರದ ತುಂಡುಗಳಲ್ಲಿ ಶವ ಸುಡಲು ಹೆಚ್ಚಿನ ಕಾಲಾವಕಾಶ ಬೇಕಾಗುತ್ತದೆ’ ಎಂದು ಅಭಿಪ್ರಾಯಪಟ್ಟರು.</p>.<p>‘ವಿದ್ಯುತ್ ಚಿತಾಗಾರಕ್ಕೆ ನಿರಂತರ ವಿದ್ಯುತ್ ಪೂರೈಕೆ ಅತ್ಯಗತ್ಯ. ಶವ ಸುಡುವಾಗ ವಿದ್ಯುತ್ ಕಡಿತಗೊಂಡರೆ ಸಮಸ್ಯೆ ಎದುರಿಸಬೇಕಾಗುತ್ತದೆ. ಆದರೆ, ಅನಿಲ ಚಿತಾಗಾರದಲ್ಲಿ ಈ ಕಿರಿಕಿರಿ ಇಲ್ಲ. ಮರದ ತುಂಡುಗಳು ಅಥವಾ ಕಟ್ಟಿಗೆಯಲ್ಲಿ ಶವ ಸುಡುವ ಕ್ರಮವು ದುಬಾರಿ ವೆಚ್ಚದ್ದು. ಈ ವಿಧಾನವು ಬಡ ಹಾಗೂ ಮಧ್ಯಮ ವರ್ಗದ ಜನರಿಗೆ ಆರ್ಥಿಕ ಹೊರೆಯಾಗಿದೆ. ಅಲ್ಲದೇ, ಕಟ್ಟಿಗೆಯಲ್ಲಿ ಶವ ಸುಡುವುದರಿಂದ ಪರಿಸರ ಮಾಲಿನ್ಯವಾಗುತ್ತದೆ’ ಎಂದು ಹೇಳಿದರು.</p>.<p>‘ಸದ್ಯ ಶವ ಸುಡುವ ಕಾರ್ಯ ವಿಧಾನದ ಬಗ್ಗೆ ತರಬೇತಿ ಪಡೆದ ಸಿಬ್ಬಂದಿಯಿಲ್ಲ. ಚಿತಾಗಾರದಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿಗೆ ತರಬೇತಿಯ ಅಗತ್ಯವಿದ್ದು, ನಿರ್ಮಿತಿ ಕೇಂದ್ರದ ಅಧಿಕಾರಿಗಳು 2 ತಿಂಗಳು ತರಬೇತಿ ಕೊಡಿಸಲು ಒಪ್ಪಿದ್ದಾರೆ’ ಎಂದು ತಿಳಿಸಿದರು.</p>.<p><strong>ಫಲಕ ಅಳವಡಿಕೆ</strong>: ‘ನಗರಸಭೆಯಿಂದ ದರ ನಿಗದಿಪಡಿಸಿ ಚಿತಾಗಾರದ ಬಳಿ ನಗರಸಭೆಯ ದೂರವಾಣಿ ಸಂಖ್ಯೆಯೊಂದಿಗೆ ಫಲಕ ಅಳವಡಿಸಲಾಗುತ್ತದೆ. ಸಂಸ್ಕಾರದ ಸಂದರ್ಭದಲ್ಲಿ ಸಮಸ್ಯೆಯಾದರೆ ನಾಗರೀಕರು ನಗರಸಭೆ ದೂರವಾಣಿ ಸಂಖ್ಯೆ ಸಂಪರ್ಕಿಸಬಹುದು’ ಎಂದು ನಗರಸಭೆ ಸ್ಥಾಯಿ ಸಮಿತಿ ಅಧ್ಯಕ್ಷ ಮಂಜುನಾಥ್ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>