<p><strong>ಕೋಲಾರ:</strong> ಜಿಲ್ಲೆಯಲ್ಲಿ ಗೌರಿ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬವನ್ನು ಶಾಂತಿ, ಸೌಹಾರ್ದಯುತವಾಗಿ ಆಚರಿಸಲು ಸಾರ್ವಜನಿಕರು ಸಹಕಾರ ನೀಡಬೇಕು. ಅರ್ಥಪೂರ್ಣ ಆಚರಣೆಗೆ ಪ್ರತಿಯೊಬ್ಬರೂ ನೆರವಾಗಬೇಕು ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿ ಮನವಿ ಮಾಡಿದರು.</p>.<p>ನಗರ ಹೊರವಲಯದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಪ್ರಯುಕ್ತ ಸೋಮವಾರ ನಡೆದ ಶಾಂತಿ ಪಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಎಲ್ಲಾ ಸಮಾಜದವರು ಭಾವೈಕ್ಯದಿಂದ ಹಬ್ಬ ಆಚರಿಸಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಧ್ವನಿವರ್ಧಕಗಳನ್ನು ಬಳಸಬೇಕು. ಹಿರಿಯ ನಾಗರಿಕರು, ಮಕ್ಕಳು, ಪ್ರಾಣಿಗಳಿಗೆ ತೊಂದರೆಯಾಗದಂತೆ ಸಾರ್ವಜನಿಕರು ಗಣೇಶ ಮಂಡಳಿಗಳು ನಿಗಾವಹಿಸಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಸಹಕಾರ ನೀಡಬೇಕು’ ಎಂದರು.</p>.<p>ಗಣೇಶ ವಿಸರ್ಜನೆಯ ದಿನಗಳಂದು ವ್ಯತ್ಯಯವಾಗದಂತೆ ನಿರಂತರ ವಿದ್ಯುತ್ ಪೂರೈಸಲು ಬೆಸ್ಕಾಂ ಕ್ರಮ ವಹಿಸಬೇಕು. ಪೊಲೀಸರು ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಬೇಕು. ಗಣೇಶ ವಿಸರ್ಜನೆಯ ದಿನ ಸಂಚಾರಕ್ಕೆ ಅಡೆತಡೆಯಾಗದಂತೆ ಮೊದಲೇ ಸಂಚಾರ ಮಾರ್ಗ ಬದಲಾವಣೆ ಮಾಡಿ ಸಾರ್ವಜನಿಕರಿಗೆ ಮುನ್ಸೂಚನೆ ನೀಡಬೇಕು. ಪೊಲೀಸ್ ಇಲಾಖೆ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳು ಆಯಕಟ್ಟಿನ ಪ್ರದೇಶಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ಸೂಚನೆ ನೀಡಿದರು.</p>.<p>ಗಣೇಶನ ಪ್ರತಿಷ್ಠಾಪನೆಗೆ ಪೂರ್ವ ಪರವಾನಗಿ ಪಡೆಯುವುದು ಕಡ್ಡಾಯವಾಗಿದೆ. ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳು ಏಕ ಗವಾಕ್ಷಿಯಲ್ಲಿ ನಿಗದಿತ ನಮೂನೆಯಲ್ಲಿ ಮುಂಚಿತವಾಗಿ ಅರ್ಜಿ ಸಲ್ಲಿಸಬೇಕು. ಆಯೋಜಕರು ಸಲ್ಲಿಸುವ ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆಗಳು ಜಂಟಿ ತಪಾಸಣೆ ಮಾಡಿ ನಿಯಮಾನುಸಾರ ಪರವಾನಗಿ ನೀಡಲು ಕ್ರಮ ವಹಿಸಬೇಕು. ರಾತ್ರಿ 10.30 ರೊಳಗಾಗಿ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಬೇಕು ಎಂದು ನಿರ್ದೇಶನ ನೀಡಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಮಾತನಾಡಿ, ಗಣೇಶೋತ್ಸವ ಸಂದರ್ಭದಲ್ಲಿ ಪೊಲೀಸ್ ಇಲಾಖೆಯಿಂದ ಸೂಕ್ತ ಭದ್ರತೆ ಒದಗಿಸಲಾಗುವುದು ಎಂದರು.</p>.<p>ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಅಧಿಕಾರಿ ರಾಜು ಮಾತನಾಡಿ, ‘ಪರಿಸರಕ್ಕೆ ಹಾನಿಯಾಗದಂತೆ ಗಣೇಶೋತ್ಸವ ಆಚರಣೆ ಮಾಡಬೇಕು. ಎಲ್ಲ ಜಿಲ್ಲೆಗಳಲ್ಲೂ ಪಿಒಪಿ ಗಣೇಶ ಮೂರ್ತಿ ಹಾಗೂ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದೆ. ಕೋಲಾರ ನಗರದ ಜನತೆ ಸಹಕಾರ ನೀಡಬೇಕು’ ಎಂದು ಕೋರಿದರು.</p>.<p>ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಪ್ರವೀಣ್ ಪಿ.ಬಾಗೇವಾಡಿ, ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಎಂ.ಮಂಗಳಾ, ಉಪವಿಭಾಗಾಧಿಕಾರಿ ಡಾ.ಮೈತ್ರಿ, ಡಿವೈಎಸ್ಪಿ ಎಂ.ಎಚ್.ನಾಗ್ತೆ, ಎಲ್ಲಾ ತಾಲ್ಲೂಕುಗಳ ತಹಶೀಲ್ದಾರ್ಗಳು, ಪೊಲೀಸ್ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ವಿವಿಧ ಸಮಾಜದ ಮುಖಂಡರು, ಗಣೇಶ ಮಂಡಳಿಗಳ ಪದಾಧಿಕಾರಿಗಳು ಇದ್ದರು.</p>.<div><blockquote>ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳು ರಸ್ತೆ ಮಧ್ಯೆ ಗಣೇಶನ ಪ್ರತಿಷ್ಠಾಪನೆ ಮಾಡಿದರೆ ಸುಗಮ ಸಂಚಾರಕ್ಕೆ ತೊಂದರೆಯಾಗಲಿದೆ. ಹೀಗಾಗಿ ರಸ್ತೆ ನಡುವೆ ಗಣೇಶನನ್ನು ಕೂರಿಸುವುದು ಬೇಡ </blockquote><span class="attribution">ಎಂ.ಆರ್.ರವಿ ಜಿಲ್ಲಾಧಿಕಾರಿ</span></div>.<p><strong>ಪಿಒಪಿ ಮೂರ್ತಿ ಬಳಸಬೇಡಿ:</strong></p><p>ಪಿಒಪಿ ಹಾಗೂ ರಾಸಾಯನಿಕ ಮಿಶ್ರಿತ ಬಣ್ಣಗಳ ಮೂರ್ತಿಗಳನ್ನು ಪ್ರತಿಷ್ಠಾಪಿಸಬಾರದು. ಪರಿಸರ ಸ್ನೇಹಿ ವಿಗ್ರಹಗಳ ಪ್ರತಿಷ್ಠಾಪನೆ ಮಾಡಬೇಕು. ಮಣ್ಣಿನಿಂದ ತಯಾರಿಸಿದ ಗಣೇಶ ಮೂರ್ತಿಗಳ ಸ್ಥಾಪನೆ ಮಾಡಬೇಕು. ಸರ್ಕಾರ ರೂಪಿಸಿರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಎಂ.ಆರ್.ರವಿ ಸೂಚನೆ ನೀಡಿದರು.</p>.<p><strong>ಬಿಗಿ ಬಂದೋಬಸ್ತ್ಗೆ ಕ್ರಮ:</strong></p><p>‘ಎರಡೂ ಹಬ್ಬಗಳಿಗೆ ಬಿಗಿ ಬಂದೋಬಸ್ತ್ ಒದಗಿಸಲು ಕ್ರಮ ವಹಿಸಲಾಗುವುದು. ಸೆ.4ರಂದು ಒಂಬತ್ತನೇ ದಿನದ ಗಣೇಶ ಮೂರ್ತಿಗಳ ವಿಸರ್ಜನೆಯಾಗಲಿದೆ. ಮರುದಿನ 5ಕ್ಕೆ ಈದ್ ಮಿಲಾದ್ ಇರುವ ಕಾರಣ ಪೊಲೀಸ್ ಬಂದೋಬಸ್ತ್ಗೆ ಒತ್ತಡ ಬೀಳಲಿದೆ. ಒಂಬತ್ತನೇ ದಿನದ ಗಣೇಶ ಮೂರ್ತಿಗಳನ್ನು ಸಾಧ್ಯವಾದಷ್ಟೂ ಬೇಗ ವಿಸರ್ಜನೆ ಮಾಡಬೇಕು’ ಎಂದು ನಿಖಿಲ್ ಬಿ. ಹೇಳಿದರು. ಆಗ ಮುಖಂಡರು ಮಾತನಾಡಿ ಗಣೇಶ ಪ್ರತಿಷ್ಠಾಪನಾ ಸಮಿತಿಗಳು ಇಲಾಖೆಗಳೊಂದಿಗೆ ಎಲ್ಲ ರೀತಿ ಸಹಕರಿಸಲಿವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ಜಿಲ್ಲೆಯಲ್ಲಿ ಗೌರಿ ಗಣೇಶ ಚತುರ್ಥಿ ಹಾಗೂ ಈದ್ ಮಿಲಾದ್ ಹಬ್ಬವನ್ನು ಶಾಂತಿ, ಸೌಹಾರ್ದಯುತವಾಗಿ ಆಚರಿಸಲು ಸಾರ್ವಜನಿಕರು ಸಹಕಾರ ನೀಡಬೇಕು. ಅರ್ಥಪೂರ್ಣ ಆಚರಣೆಗೆ ಪ್ರತಿಯೊಬ್ಬರೂ ನೆರವಾಗಬೇಕು ಎಂದು ಜಿಲ್ಲಾಧಿಕಾರಿ ಎಂ.ಆರ್.ರವಿ ಮನವಿ ಮಾಡಿದರು.</p>.<p>ನಗರ ಹೊರವಲಯದ ಜಿಲ್ಲಾಡಳಿತ ಭವನದ ಸಭಾಂಗಣದಲ್ಲಿ ಗಣೇಶ ಹಬ್ಬ ಹಾಗೂ ಈದ್ ಮಿಲಾದ್ ಪ್ರಯುಕ್ತ ಸೋಮವಾರ ನಡೆದ ಶಾಂತಿ ಪಾಲನಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.</p>.<p>‘ಎಲ್ಲಾ ಸಮಾಜದವರು ಭಾವೈಕ್ಯದಿಂದ ಹಬ್ಬ ಆಚರಿಸಬೇಕು. ಸಾರ್ವಜನಿಕರಿಗೆ ತೊಂದರೆಯಾಗದಂತೆ ಧ್ವನಿವರ್ಧಕಗಳನ್ನು ಬಳಸಬೇಕು. ಹಿರಿಯ ನಾಗರಿಕರು, ಮಕ್ಕಳು, ಪ್ರಾಣಿಗಳಿಗೆ ತೊಂದರೆಯಾಗದಂತೆ ಸಾರ್ವಜನಿಕರು ಗಣೇಶ ಮಂಡಳಿಗಳು ನಿಗಾವಹಿಸಿ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆಗೆ ಸಹಕಾರ ನೀಡಬೇಕು’ ಎಂದರು.</p>.<p>ಗಣೇಶ ವಿಸರ್ಜನೆಯ ದಿನಗಳಂದು ವ್ಯತ್ಯಯವಾಗದಂತೆ ನಿರಂತರ ವಿದ್ಯುತ್ ಪೂರೈಸಲು ಬೆಸ್ಕಾಂ ಕ್ರಮ ವಹಿಸಬೇಕು. ಪೊಲೀಸರು ಸೂಕ್ತ ಬಂದೋಬಸ್ತ್ ವ್ಯವಸ್ಥೆ ಕಲ್ಪಿಸಬೇಕು. ಗಣೇಶ ವಿಸರ್ಜನೆಯ ದಿನ ಸಂಚಾರಕ್ಕೆ ಅಡೆತಡೆಯಾಗದಂತೆ ಮೊದಲೇ ಸಂಚಾರ ಮಾರ್ಗ ಬದಲಾವಣೆ ಮಾಡಿ ಸಾರ್ವಜನಿಕರಿಗೆ ಮುನ್ಸೂಚನೆ ನೀಡಬೇಕು. ಪೊಲೀಸ್ ಇಲಾಖೆ ಸೇರಿದಂತೆ ಸಂಬಂಧಪಟ್ಟ ಇಲಾಖೆಗಳು ಆಯಕಟ್ಟಿನ ಪ್ರದೇಶಗಳಲ್ಲಿ ಸಿ.ಸಿ.ಟಿ.ವಿ ಕ್ಯಾಮೆರಾಗಳನ್ನು ಅಳವಡಿಸಬೇಕು ಎಂದು ಸೂಚನೆ ನೀಡಿದರು.</p>.<p>ಗಣೇಶನ ಪ್ರತಿಷ್ಠಾಪನೆಗೆ ಪೂರ್ವ ಪರವಾನಗಿ ಪಡೆಯುವುದು ಕಡ್ಡಾಯವಾಗಿದೆ. ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳು ಏಕ ಗವಾಕ್ಷಿಯಲ್ಲಿ ನಿಗದಿತ ನಮೂನೆಯಲ್ಲಿ ಮುಂಚಿತವಾಗಿ ಅರ್ಜಿ ಸಲ್ಲಿಸಬೇಕು. ಆಯೋಜಕರು ಸಲ್ಲಿಸುವ ಅರ್ಜಿಗಳನ್ನು ಸಂಬಂಧಪಟ್ಟ ಇಲಾಖೆಗಳು ಜಂಟಿ ತಪಾಸಣೆ ಮಾಡಿ ನಿಯಮಾನುಸಾರ ಪರವಾನಗಿ ನೀಡಲು ಕ್ರಮ ವಹಿಸಬೇಕು. ರಾತ್ರಿ 10.30 ರೊಳಗಾಗಿ ಗಣೇಶ ಮೂರ್ತಿಗಳ ವಿಸರ್ಜನೆ ಮಾಡಬೇಕು ಎಂದು ನಿರ್ದೇಶನ ನೀಡಿದರು.</p>.<p>ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನಿಖಿಲ್ ಬಿ. ಮಾತನಾಡಿ, ಗಣೇಶೋತ್ಸವ ಸಂದರ್ಭದಲ್ಲಿ ಪೊಲೀಸ್ ಇಲಾಖೆಯಿಂದ ಸೂಕ್ತ ಭದ್ರತೆ ಒದಗಿಸಲಾಗುವುದು ಎಂದರು.</p>.<p>ರಾಜ್ಯ ಪರಿಸರ ಮಾಲಿನ್ಯ ನಿಯಂತ್ರಣ ಅಧಿಕಾರಿ ರಾಜು ಮಾತನಾಡಿ, ‘ಪರಿಸರಕ್ಕೆ ಹಾನಿಯಾಗದಂತೆ ಗಣೇಶೋತ್ಸವ ಆಚರಣೆ ಮಾಡಬೇಕು. ಎಲ್ಲ ಜಿಲ್ಲೆಗಳಲ್ಲೂ ಪಿಒಪಿ ಗಣೇಶ ಮೂರ್ತಿ ಹಾಗೂ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗಿದೆ. ಕೋಲಾರ ನಗರದ ಜನತೆ ಸಹಕಾರ ನೀಡಬೇಕು’ ಎಂದು ಕೋರಿದರು.</p>.<p>ಸಭೆಯಲ್ಲಿ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಪ್ರವೀಣ್ ಪಿ.ಬಾಗೇವಾಡಿ, ಕೆಜಿಎಫ್ ಪೊಲೀಸ್ ವರಿಷ್ಠಾಧಿಕಾರಿ ಶಿವಾಂಶು ರಜಪೂತ್, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಎಂ.ಮಂಗಳಾ, ಉಪವಿಭಾಗಾಧಿಕಾರಿ ಡಾ.ಮೈತ್ರಿ, ಡಿವೈಎಸ್ಪಿ ಎಂ.ಎಚ್.ನಾಗ್ತೆ, ಎಲ್ಲಾ ತಾಲ್ಲೂಕುಗಳ ತಹಶೀಲ್ದಾರ್ಗಳು, ಪೊಲೀಸ್ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ, ವಿವಿಧ ಸಮಾಜದ ಮುಖಂಡರು, ಗಣೇಶ ಮಂಡಳಿಗಳ ಪದಾಧಿಕಾರಿಗಳು ಇದ್ದರು.</p>.<div><blockquote>ಸಾರ್ವಜನಿಕ ಗಣೇಶೋತ್ಸವ ಮಂಡಳಿಗಳು ರಸ್ತೆ ಮಧ್ಯೆ ಗಣೇಶನ ಪ್ರತಿಷ್ಠಾಪನೆ ಮಾಡಿದರೆ ಸುಗಮ ಸಂಚಾರಕ್ಕೆ ತೊಂದರೆಯಾಗಲಿದೆ. ಹೀಗಾಗಿ ರಸ್ತೆ ನಡುವೆ ಗಣೇಶನನ್ನು ಕೂರಿಸುವುದು ಬೇಡ </blockquote><span class="attribution">ಎಂ.ಆರ್.ರವಿ ಜಿಲ್ಲಾಧಿಕಾರಿ</span></div>.<p><strong>ಪಿಒಪಿ ಮೂರ್ತಿ ಬಳಸಬೇಡಿ:</strong></p><p>ಪಿಒಪಿ ಹಾಗೂ ರಾಸಾಯನಿಕ ಮಿಶ್ರಿತ ಬಣ್ಣಗಳ ಮೂರ್ತಿಗಳನ್ನು ಪ್ರತಿಷ್ಠಾಪಿಸಬಾರದು. ಪರಿಸರ ಸ್ನೇಹಿ ವಿಗ್ರಹಗಳ ಪ್ರತಿಷ್ಠಾಪನೆ ಮಾಡಬೇಕು. ಮಣ್ಣಿನಿಂದ ತಯಾರಿಸಿದ ಗಣೇಶ ಮೂರ್ತಿಗಳ ಸ್ಥಾಪನೆ ಮಾಡಬೇಕು. ಸರ್ಕಾರ ರೂಪಿಸಿರುವ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಎಂ.ಆರ್.ರವಿ ಸೂಚನೆ ನೀಡಿದರು.</p>.<p><strong>ಬಿಗಿ ಬಂದೋಬಸ್ತ್ಗೆ ಕ್ರಮ:</strong></p><p>‘ಎರಡೂ ಹಬ್ಬಗಳಿಗೆ ಬಿಗಿ ಬಂದೋಬಸ್ತ್ ಒದಗಿಸಲು ಕ್ರಮ ವಹಿಸಲಾಗುವುದು. ಸೆ.4ರಂದು ಒಂಬತ್ತನೇ ದಿನದ ಗಣೇಶ ಮೂರ್ತಿಗಳ ವಿಸರ್ಜನೆಯಾಗಲಿದೆ. ಮರುದಿನ 5ಕ್ಕೆ ಈದ್ ಮಿಲಾದ್ ಇರುವ ಕಾರಣ ಪೊಲೀಸ್ ಬಂದೋಬಸ್ತ್ಗೆ ಒತ್ತಡ ಬೀಳಲಿದೆ. ಒಂಬತ್ತನೇ ದಿನದ ಗಣೇಶ ಮೂರ್ತಿಗಳನ್ನು ಸಾಧ್ಯವಾದಷ್ಟೂ ಬೇಗ ವಿಸರ್ಜನೆ ಮಾಡಬೇಕು’ ಎಂದು ನಿಖಿಲ್ ಬಿ. ಹೇಳಿದರು. ಆಗ ಮುಖಂಡರು ಮಾತನಾಡಿ ಗಣೇಶ ಪ್ರತಿಷ್ಠಾಪನಾ ಸಮಿತಿಗಳು ಇಲಾಖೆಗಳೊಂದಿಗೆ ಎಲ್ಲ ರೀತಿ ಸಹಕರಿಸಲಿವೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>