ಇಲ್ಲಿ ಸೋಮವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ‘ಪರಿಸರಕ್ಕೆ ಹಾನಿಕಾರಕವಾದ ರಾಸಾಯನಿಕಗಳನ್ನು ಬಳಸಿ ಸಿದ್ಧಪಡಿಸುವ ಗಣೇಶ ಮೂರ್ತಿಗಳನ್ನು ಪೂಜಿಸುವ ಬದಲು ಮಣ್ಣಿನಿಂದ ಮಾಡಿದ ಅಥವಾ ಗೋಧಿ, ರಾಗಿ ಹಿಟ್ಟಿಗೆ ಅರಿಶಿಣ ಸೇರಿಸಿ ಸಣ್ಣ ಗಣೇಶ ಮೂರ್ತಿಗಳನ್ನು ತಯಾರಿಸಿ ಪೂಜಿಸಬೇಕು. ಆ ಮೂಲಕ ಪರಿಸರ ರಕ್ಷಿಸಬೇಕು’ ಎಂದು ಮನವಿ ಮಾಡಿದರು.