‘ಪ್ರವರ್ಗ–1ರಲ್ಲಿ 95 ಜಾತಿಗಳಿದ್ದು, ಯಾದವ ಸಮುದಾಯದ ಸುಮಾರು ಒಂದು ಕೋಟಿ ಜನರನ್ನು ಪ್ರತಿನಿಧಿಸುವ ಶಾಸಕಿ ಪೂರ್ಣಿಮಾ ಅವರಿಗೆ ಸಚಿವ ಸ್ಥಾನ ನೀಡದಿರುವುದು ಖಂಡನೀಯ. ರಾಜ್ಯದ ಎಲ್ಲಾ ಚುನಾವಣೆ ಹಾಗೂ ಉಪ ಚುನಾವಣೆಗಳಲ್ಲಿ ಯಾದವ ಸಮುದಾಯದ ಜನರು ಬಿಜೆಪಿಯನ್ನು ಬೆಂಬಲಿಸಿದ್ದಾರೆ. ಆದರೆ, ಬಿಜೆಪಿಯು ಪೂರ್ಣಿಮಾ ಅವರಿಗೆ ಸಚಿವ ಸ್ಥಾನ ನೀಡದೆ ಸಮುದಾಯಕ್ಕೆ ಅನ್ಯಾಯ ಮಾಡಿದೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.