<p><strong>ಕಾಮಸಮುದ್ರ (ಬಂಗಾರಪೇಟೆ):</strong> ಕಾಡಾನೆಗಳ ಹಾವಳಿಗೆ ಶಾಶ್ವತ ಪರಿಹಾರ ನೀಡಬೇಕು. ಇಲ್ಲದಿದ್ದರೆ, ಆನೆ ಲದ್ದಿ ಮಾರಾಟಕ್ಕೆ ಮಾರುಕಟ್ಟೆ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿ ರೈತ ಸಂಘಟನೆ ಭಾನುವಾರ ಆನೆ ಲದ್ದಿ ಸಮೇತವಾಗಿ ವಿಶೇಷ ಪ್ರತಿಭಟನೆ ನಡೆಸಿತು.</p>.<p>ಮಾರುಕಟ್ಟೆಗೆ ಬೆಳೆ ಬರುವ ಸಮಯದಲ್ಲಿ ರಾತ್ರೋರಾತ್ರಿ ಹೊಲ-ಗದ್ದೆ ಮತ್ತು ತೋಟಗಳಿಗೆ ಲಗ್ಗೆ ಇಡುತ್ತಿರುವ ಕಾಡಾನೆಗಳು ರೈತರ ಬೆವರು ಸುರಿಸಿ ಬೆಳೆದ ಬೆಳೆಯನ್ನು ಹಾನಿ ಮಾಡುತ್ತಿವೆ. ಗಡಿ ಭಾಗದ ಸಮಸ್ಯೆ ಪರಿಹಾರಕ್ಕೆ ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂದಿನ ಚುನಾವಣೆ ಬಹಿಷ್ಕಾರ ಮಾಡುತ್ತೇವೆ ಎಂದರು.</p>.<p>ಕಾಡಾನೆಗಳ ಹಾವಳಿ ತಡೆಯಲು ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು. ನಷ್ಟ ಅನುಭವಿಸಿದ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಲಾಯಿತು.</p>.<p>ರೈತ ಸಂಘದ ಮುಖಂಡರಾದ ನಾರಾಯಣಗೌಡ, ಪುತ್ತೇರಿ ರಾಜು, ಈಕಂಬಳ್ಳಿ ಮಂಜುನಾಥ್, ಕಾಮಸಮುದ್ರ ಹೋಬಳಿ ಅಧ್ಯಕ್ಷ ಮುನಿಕೃಷ್ಣ, ನಾಗಯ್ಯ, ವಿಶ್ವ, ಮುನಿರಾಜು, ಯಲ್ಲಣ್ಣ, ಪ್ರಭಾಕರ್, ನಾಗರಾಜ್, ಗೋವಿಂದಪ್ಪ, ಮಂಜುನಾಥ್, ಗುಲ್ಲಟ್ಟಿ, ಲಕ್ಷ್ಮಣ್ , ಹನುಮಯ್ಯ,ಹಾಜರಿದ್ದರು. ನಂತರ ಸಹಾಯಕ ಸಬ್ ಇನ್ಸ್ಪೆಕ್ಟರ್ ವೆಂಕಟೇಶ್ ಅವರಿಗೆ ಮನವಿ ಸಲ್ಲಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಾಮಸಮುದ್ರ (ಬಂಗಾರಪೇಟೆ):</strong> ಕಾಡಾನೆಗಳ ಹಾವಳಿಗೆ ಶಾಶ್ವತ ಪರಿಹಾರ ನೀಡಬೇಕು. ಇಲ್ಲದಿದ್ದರೆ, ಆನೆ ಲದ್ದಿ ಮಾರಾಟಕ್ಕೆ ಮಾರುಕಟ್ಟೆ ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿ ರೈತ ಸಂಘಟನೆ ಭಾನುವಾರ ಆನೆ ಲದ್ದಿ ಸಮೇತವಾಗಿ ವಿಶೇಷ ಪ್ರತಿಭಟನೆ ನಡೆಸಿತು.</p>.<p>ಮಾರುಕಟ್ಟೆಗೆ ಬೆಳೆ ಬರುವ ಸಮಯದಲ್ಲಿ ರಾತ್ರೋರಾತ್ರಿ ಹೊಲ-ಗದ್ದೆ ಮತ್ತು ತೋಟಗಳಿಗೆ ಲಗ್ಗೆ ಇಡುತ್ತಿರುವ ಕಾಡಾನೆಗಳು ರೈತರ ಬೆವರು ಸುರಿಸಿ ಬೆಳೆದ ಬೆಳೆಯನ್ನು ಹಾನಿ ಮಾಡುತ್ತಿವೆ. ಗಡಿ ಭಾಗದ ಸಮಸ್ಯೆ ಪರಿಹಾರಕ್ಕೆ ಜನಪ್ರತಿನಿಧಿಗಳು ನಿರ್ಲಕ್ಷ್ಯ ವಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಮುಂದಿನ ಚುನಾವಣೆ ಬಹಿಷ್ಕಾರ ಮಾಡುತ್ತೇವೆ ಎಂದರು.</p>.<p>ಕಾಡಾನೆಗಳ ಹಾವಳಿ ತಡೆಯಲು ಅಧಿಕಾರಿಗಳು ಕಾರ್ಯೋನ್ಮುಖರಾಗಬೇಕು. ನಷ್ಟ ಅನುಭವಿಸಿದ ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಆಗ್ರಹಿಸಲಾಯಿತು.</p>.<p>ರೈತ ಸಂಘದ ಮುಖಂಡರಾದ ನಾರಾಯಣಗೌಡ, ಪುತ್ತೇರಿ ರಾಜು, ಈಕಂಬಳ್ಳಿ ಮಂಜುನಾಥ್, ಕಾಮಸಮುದ್ರ ಹೋಬಳಿ ಅಧ್ಯಕ್ಷ ಮುನಿಕೃಷ್ಣ, ನಾಗಯ್ಯ, ವಿಶ್ವ, ಮುನಿರಾಜು, ಯಲ್ಲಣ್ಣ, ಪ್ರಭಾಕರ್, ನಾಗರಾಜ್, ಗೋವಿಂದಪ್ಪ, ಮಂಜುನಾಥ್, ಗುಲ್ಲಟ್ಟಿ, ಲಕ್ಷ್ಮಣ್ , ಹನುಮಯ್ಯ,ಹಾಜರಿದ್ದರು. ನಂತರ ಸಹಾಯಕ ಸಬ್ ಇನ್ಸ್ಪೆಕ್ಟರ್ ವೆಂಕಟೇಶ್ ಅವರಿಗೆ ಮನವಿ ಸಲ್ಲಿಸಲಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>