ವಿದ್ಯಾರ್ಥಿಗಳ ಮೆರವಣಿಗೆ: ಎಸ್ಸೆಸ್ಸೆಲ್ಸಿ, ದ್ವಿತೀಯ ಪಿಯುಸಿ, ಪದವಿ, ಉನ್ನತ ಶಿಕ್ಷಣದಲ್ಲಿ ಉತ್ತಮ ಸಾಧನೆ ಮಾಡಿದ ಆರ್ಯವೈಶ್ಯ ಸಮುದಾಯದ ವಿದ್ಯಾರ್ಥಿಗಳನ್ನು ಬೆಳ್ಳಿ ಪಲ್ಲಕಿ, ಸಾರೋಟು, ಕುದುರೆ ಮೇಲೆ ಕೂರಿಸಿ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು. ಮೆರವಣಿಗೆ ಉದ್ದಕ್ಕೂ ಪಟಾಕಿ ಸಿಡಿಸಿ ವಿದ್ಯಾರ್ಥಿಗಳ ಮೇಲೆ ಪುಷ್ಪವೃಷ್ಠಿ ಸುರಿಸಲಾಯಿತು. ಡೊಳ್ಳು ಕುಣಿತ ಹಾಗೂ ಜನಪದ ಕಲಾ ತಂಡಗಳು ಮೆರವಣಿಗೆಗೆ ಮೆರುಗು ನೀಡಿದವು.