ಮುಳಬಾಗಿಲು: ಉತ್ತರ ಪ್ರದೇಶದ ಹಾಥರಸ್ನಲ್ಲಿ ಅತ್ಯಾಚಾರ ನಡೆಸಿದ ಆರೋಪಿಗಳನ್ನು ಸಾರ್ವಜನಿಕವಾಗಿ ಗುಂಡಿಕ್ಕಿ ಕೊಲ್ಲಬೇಕು ಎಂದು ಒತ್ತಾಯಿಸಿ ರೈತಸಂಘದ ಉಪತಹಶೀಲ್ದಾರ್ ಸಂಪತ್ ಅವರಿಗೆ ರೈತ ಸಂಘದ ಸದಸ್ಯರು ಮನವಿ ಮಾಡಿದರು.
ರೈತ ಸಂಘದ ಉಪಾಧ್ಯಕ್ಷ ಕೆ. ನಾರಾಯಣಗೌಡ ಮಾತನಾಡಿ, ‘ದೇಶಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ಮಹಿಳೆಯರಿಗೆ ರಕ್ಷಣೆ ಇಲ್ಲ. ಮಹಿಳೆಯರ ರಕ್ಷಣೆಗೆ ಅನೇಕ ಕಾನೂನು ಇದ್ದರೂ ದೌರ್ಜನ್ಯ ತಡೆಯಲು ಸಾಧ್ಯವಾಗಿಲ್ಲ. ಹೀಗಾಗಿ ಇಂತಹ ಘಟನೆಗಳು ನಡೆದ ಕೂಡಲೇ ಆರೋಪಿಗಳನ್ನು ಬಂಧಿಸಿ, ಸಾರ್ವಜನಿಕವಾಗಿ ಗುಂಡಿಕ್ಕಿ ಕೊಲ್ಲಬೇಕು ಎಂದು ಆಗ್ರಹಿಸಿದರು.
ತಾಲ್ಲೂಕು ಅಧ್ಯಕ್ಷ ಫಾರೂಕ್ಪಾಷ ಮಾತನಾಡಿದರು.
ಉಪತಹಶೀಲ್ದಾರ್ ಸಂಪತ್ ಅವರು, ‘ಹಿರಿಯ ಅಧಿಕಾರಿಗಳ ಮೂಲಕ ಕೂಡಲೇ ತಮ್ಮ ಮನವಿಯನ್ನು ರಾಷ್ಟ್ರಪತಿಗೆ ಕಳುಹಿಸುತ್ತೇನೆ’ ಎಂದರು.