ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಸಂತೆ ಮೈದಾನದಲ್ಲಿ ಮಳಿಗೆಗಳ ನಿರ್ಮಾಣ’

Last Updated 9 ಫೆಬ್ರುವರಿ 2018, 9:06 IST
ಅಕ್ಷರ ಗಾತ್ರ

ವಿಜಯಪುರ: ಸಂತೆ ಮೈದಾನದಲ್ಲಿ ಜನರಿಗೆ ಅನುಕೂಲವಾಗುವಂತೆ ಎಪಿಎಂಸಿಯಿಂದ ₹ 50 ಲಕ್ಷ, ಸಂಸದರ ನಿಧಿಯಿಂದ ₹ 30 ಲಕ್ಷ ವೆಚ್ಚದಲ್ಲಿ ಸುಸಜ್ಜಿತ ಮಳಿಗೆಗಳನ್ನು ನಿರ್ಮಾಣ ಮಾಡಲು ಉದ್ದೇಶಿಸಿದ್ದು, ಸ್ಥಳೀಯ ವ್ಯಾಪಾರಸ್ಥರು, ನಾಗರಿಕರು ಸಹಕಾರ ನೀಡಬೇಕು ಎಂದು ದೊಡ್ಡಬಳ್ಳಾಪುರ ಎಪಿಎಂಸಿ ಅಧ್ಯಕ್ಷೆ ಅಮರಾವತಮ್ಮ ಹೇಳಿದರು.

ಗುರುವಾರ ಇಲ್ಲಿನ ಸಂತೆ ಮೈದಾನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಅವರು ಮಾತನಾಡಿದರು.  ಡಬ್ಲೂ.ಐ.ಎಫ್ ಯೋಜನೆಯಡಿಯಲ್ಲಿ ನಿರ್ಮಾಣ ಮಾಡಲು ಉದ್ದೇಶಿಸಿರುವ ಕಾಮಗಾರಿಗಳು ಗುಣಮಟ್ಟದಿಂದ ಆಗುವಂತೆ ಸ್ಥಳೀಯ ಪುರಸಭಾ ಸದಸ್ಯರು ಗಮನಹರಿಸಬೇಕು ಎಂದು ತಿಳಿಸಿದರು.

ರೈತರ ಬೆಳೆಗಳಿಗೆ ಸೂಕ್ತ ಸುರಕ್ಷತೆ ಒದಗಿಸುವುದು, ಗ್ರಾಹಕರು ನೇರವಾಗಿ ಬಂದು ಖರೀದಿ ಮಾಡಲು ಅವಕಾಶ ಕಲ್ಪಿಸುವಂತಹ ಉದ್ದೇಶದಿಂದ ಅಭಿವೃದ್ಧಿ ಪಡಿಸಲಾಗುತ್ತಿದೆ ಎಂದರು.

ಜಿಲ್ಲಾ ಪಂಚಾಯಿತಿ ಸದಸ್ಯ ಲಕ್ಷ್ಮೀನಾರಾಯಣಪ್ಪ ಮಾತನಾಡಿ, ಗ್ರಾಮೀಣ ಭಾಗದಲ್ಲಿನ ರೈತರ ಪಾಲಿಗೆ ಮಾರುಕಟ್ಟೆಗಳೇ ಮುಖ್ಯ ವ್ಯಾಪಾರ ಕೇಂದ್ರಗಳಾಗಿವೆ ಎಂದು ಅಭಿಪ್ರಾಯಪಟ್ಟರು.

ಪ್ರತಿ ಶುಕ್ರವಾರ ನಡೆಯುವ ಸಂತೆಗೆ ಸುತ್ತಮುತ್ತಲಿನ ಸಾವಿರಾರು ರೈತರು ತಾವು ಬೆಳೆದಂತಹ ತರಕಾರಿಗಳನ್ನು ಇಲ್ಲಿಗೆ ತಂದು ವ್ಯಾಪಾರ ಮಾಡುತ್ತಾರೆ ಎಂದು ತಿಳಿಸಿದರು.

ಅವರು ಬೆಳೆದಂತಹ ತರಕಾರಿಗಳನ್ನು ಬೆಂಗಳೂರು ಮಾರುಕಟ್ಟೆಗೆ ತೆಗೆದುಕೊಂಡು ಹೋಗುವಂತಹ ಯಾವುದೇ ಸೂಕ್ತ ವ್ಯವಸ್ಥೆಯಿಲ್ಲ ಎಂದು ತಿಳಿಸಿದರು. ಸಾಗಾಣಿಕೆಯ ವೆಚ್ಚಕ್ಕೆ ಕಡಿವಾಣ ಬೀಳಲಿರುವುದರಿಂದ ಇಂತಹ ಮಾರುಕಟ್ಟೆಗಳನ್ನು ಅಭಿವೃದ್ಧಿ ಪಡಿಸಿ ರೈತರಿಗೆ ಅನುಕೂಲ ಕಲ್ಪಿಸುವುದು ಅನಿವಾರ್ಯವಾಗಿದೆ ಎಂದರು.

ಸ್ಥಳೀಯ ವ್ಯಾಪಾರಸ್ಥರು, ನಾಗರಿಕರು ಇಂತಹ ಸೌಲಭ್ಯಗಳನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಅಗತ್ಯ ಬಿದ್ದರೆ, ಮತ್ತಷ್ಟು ಅನುದಾನ ಬಿಡುಗಡೆ ಮಾಡಿಕೊಡಲು ಅಗತ್ಯ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಎಪಿಎಂಸಿ ಕಾರ್ಯದರ್ಶಿ ಸಿದ್ದಲಿಂಗಸ್ವಾಮಿ, ಸದಸ್ಯ ಸುಧಾಕರ್, ಪುರಸಭಾ ಮುಖ್ಯಾಧಿಕಾರಿ ಎ.ಎಚ್.ನಾಗರಾಜ್, ಪುರಸಭಾ ಸದಸ್ಯರಾದ ಆರ್.ಸಿ.ಮಂಜುನಾಥ್, ಎಂ.ನಾಗರಾಜ್, ಮುನಿಚಿನ್ನಪ್ಪ, ಜೆ.ಎನ್.ಶ್ರೀನಿವಾಸ್, ಮುಖಂಡರಾದ ಮುನಿಕೃಷ್ಣಪ್ಪ, ಮಂಜುನಾಥ್, ನಾಗನಾಯಕನಹಳ್ಳಿ ಕೃಷ್ಣಪ್ಪ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT