<p><strong>ಕೋಲಾರ: </strong>‘ಜಿಲ್ಲೆಯ ಕೆಜಿಎಫ್ನಲ್ಲಿ ಚಿನ್ನದ ಗಣಿ ಪುನರಾರಂಭಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ’ ಎಂದು ಸಂಸದ ಎಸ್.ಮುನಿಸ್ವಾಮಿ ಹೇಳಿದರು.</p>.<p>ಜಿಲ್ಲಾಡಳಿತವು ಇಲ್ಲಿ ಶನಿವಾರ ಹಮ್ಮಿಕೊಂಡಿದ್ದ ಅಟಲ್ ಭೂಜಲ ಯೋಜನೆ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿ, ‘ಕೇಂದ್ರದ ಸೂಚನೆಯಂತೆ ಅಧಿಕಾರಿಗಳ ತಂಡವು ಕೆಜಿಎಫ್ನ ಗಣಿಗಾರಿಕೆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಈ ತಂಡವು ಕೇಂದ್ರಕ್ಕೆ ವರದಿ ಸಲ್ಲಿಸಿದ್ದು, ಸಾಧ್ಯವಾದಷ್ಟು ಬೇಗನೆ ಗಣಿಗಾರಿಕೆ ಆರಂಭಿಸುತ್ತೇವೆ’ ಎಂದು ಭರವಸೆ ನೀಡಿದರು.</p>.<p>‘ಸರ್ಕಾರದ ಯೋಜನೆಗಳನ್ನು ಅಧಿಕಾರಿಗಳು ಸಮರ್ಪಕವಾಗಿ ಕಾರ್ಯಗತಗೊಳಿಸಿದರೆ ಮಾತ್ರ ದೇಶದ ಪ್ರಗತಿ ಸಾಧ್ಯ. ರಾಜಕಾರಣಿಗಳು ಶಿಫಾರಸು ಮಾಡಿದ ವ್ಯಕ್ತಿಗಳನ್ನು ಬಿಟ್ಟು ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಕರ್ಯ ತಲುಪಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>‘ರೈತರ ಆದಾಯ ದ್ವಿಗುಣಗೊಳಿಸಲು ಕೇಂದ್ರ ಸರ್ಕಾರವು ಪ್ರಾಯೋಗಿಕವಾಗಿ ಕರ್ನಾಟಕ ರಾಜ್ಯವನ್ನು ಆಯ್ಕೆ ಮಾಡಿಕೊಂಡಿದೆ. ಕೋಲಾರ ಲೋಕಸಭಾ ಕ್ಷೇತ್ರದ ಎಲ್ಲಾ ತಾಲ್ಲೂಕುಗಳು ಈ ಯೋಜನೆ ವ್ಯಾಪ್ತಿಗೆ ಸೇರಿವೆ. ಈ ಬಗ್ಗೆ ರೈತರಿಗೆ ಸಂಪೂರ್ಣ ಮಾಹಿತಿ ನೀಡಬೇಕು’ ಎಂದು ತಿಳಿಸಿದರು.</p>.<p>‘ರೈತರ ಸಹಕಾರವಿಲ್ಲದೆ ಯಾವುದೇ ಯೋಜನೆ ಜಾರಿ ಸಾಧ್ಯವಿಲ್ಲ. ರಾಜಕೀಯ ಮುಖಂಡರು ಶಿಫಾರಸ್ಸು ಮಾಡಿದವರಿಗೆ ಸೌಕರ್ಯ ಕಲ್ಪಿಸುವುದನ್ನು ಅಧಿಕಾರಿಗಳು ಬಿಡಬೇಕು. ರೈತ ವಿರೋಧಿಗಳು ಕೆ.ಸಿ ವ್ಯಾಲಿ ಯೋಜನೆ ವಿರೋಧಿಸಿ ಜಿಲ್ಲೆಗೆ ಅವಮಾನ ಎಸಗುತ್ತಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಅಂತರ್ಜಲಕ್ಕೆ ಮಾರಕವಾಗಿರುವ ನೀಲಗಿರಿ ಮರಗಳನ್ನು ರೈತರು ಸ್ವಯಂ ಪ್ರೇರಿತರಾಗಿ ತೆರವುಗೊಳಿಸಬೇಕು. ಕೆರೆ, ಕಾಲುವೆ ಒತ್ತುವರಿಯಿಂದ ಉಂಟಾಗುತ್ತಿರುವ ಸಮಸ್ಯೆ ಬಗ್ಗೆ ಜಾಗೃತಿ ಮೂಡಿಸಬೇಕು. ಮುಂದಿನ ಪೀಳಿಗೆಯ ಹಿತದೃಷ್ಟಿಯಿಂದ ಉತ್ತಮ ಪರಿಸರ ನಿರ್ಮಾಣಕ್ಕೆ ಒತ್ತು ನೀಡಬೇಕು’ ಎಂದು ಕಿವಿಮಾತು ಹೇಳಿದರು.</p>.<p>ಶಾಸಕರ ಕಳವಳ: ‘ಜಿಲ್ಲೆಯಲ್ಲಿ ಸತತ ಬರಗಾಲ ಎದುರಾಗಿದ್ದು, ಮನುಷ್ಯನ ದುರಾಸೆಯ ಫಲವಾಗಿ ಕಷ್ಟದ ಪರಿಸ್ಥಿತಿ ಎದುರಿಸುವಂತಾಗಿದೆ. ಅರಣ್ಯ ಸಂಪತ್ತು ನಾಶವಾಗಿ ಮಳೆ ಪ್ರಮಾಣ ಕ್ಷೀಣಿಸಿದೆ’ ಎಂದು ಶಾಸಕ ಕೆ.ಶ್ರೀನಿವಾಸಗೌಡ ಕಳವಳ ವ್ಯಕ್ತಪಡಿಸಿದರು.</p>.<p>‘ಈ ಹಿಂದೆ ಹಿರಿಯರು ಮುಂದಾಲೋಚನೆಯಿಂದ ಕೆರೆ, ರಾಜಕಾಲುವೆ ನಿರ್ಮಾಣ ಮಾಡಿದರು. ಆದರೆ, ಜನರು ದುರಾಸೆಯಿಂದ ಕೆರೆ, ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಈಗ ಒತ್ತುವರಿ ತೆರವುಗೊಳಿಸದಿದ್ದರೆ ಭವಿಷ್ಯದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ’ ಎಂದು ಎಚ್ಚರಿಸಿದರು.</p>.<p>‘ಜಿಲ್ಲೆಯ ಕುಡಿಯುವ ನೀರಿನ ಸೌಕರ್ಯಕ್ಕಾಗಿ ಯರಗೋಳ್ ಯೋಜನೆ ಜಾರಿಗೊಳಿಸಲಾಯಿತು. ಆದರೆ, ಆಗಿನ ಶಾಸಕನಿಗೆ ಪೈಪ್ಲೈನ್ ಕಾಮಗಾರಿ ಮಾಡುವುದು ಅವಸರವಾಗಿತ್ತು. ಸಕಾಲಕ್ಕೆ ಡ್ಯಾಂ ನಿರ್ಮಿಸಿದ್ದರೆ ಈ ವೇಳೆಗಾಗಲೇ ನೀರು ಹರಿಯುತ್ತಿತ್ತು. ಆ ಮಾಜಿ ಶಾಸಕನಿಗೆ ಪೈಪ್ಲೈನ್ನಲ್ಲಿ ಹಣ ಮಾಡುವುದು ಮುಖ್ಯವಾಗಿತ್ತು’ ಎಂದು ಮಾಜಿ ಶಾಸಕ ವರ್ತೂರು ಪ್ರಕಾಶ್ ವಿರುದ್ಧ ಕಿಡಿಕಾರಿದರು.</p>.<p>ಶಾಸಕರಿಗೆ ತಿರುಗೇಟು: ‘ಜನಪ್ರತಿನಿಧಿಗಳಿಗೆ ಅಭಿವೃದ್ಧಿ ಕೆಲಸದ ಕಡೆ ಹೆಚ್ಚು ಗಮನ ಇರಬೇಕು. ಹಿಂದಿನ ಶಾಸಕರು ಕ್ಷೇತ್ರದಲ್ಲಿ ಮಾಡಿದ ಕೆಲಸ ಶಾಶ್ವತವಾಗಿ ಉಳಿದಿದೆ’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿ.ಎಸ್.ವೆಂಕಟೇಶ್ ಶಾಸಕ ಶ್ರೀನಿವಾಸಗೌಡರ ಮಾತಿಗೆ ತಿರುಗೇಟು ನೀಡಿದರು.</p>.<p>‘ಜಿಲ್ಲೆಯಲ್ಲಿ ಪಕ್ಷ, ಜಾತಿ ಭೇದಭಾವ ಬಿಟ್ಟು ಅಭಿವೃದ್ಧಿ ಕೆಲಸಕ್ಕೆ ಸಹಕಾರ ನೀಡಬೇಕು. ಜಿಲ್ಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನದ ಕೊರತೆಯಿದ್ದು, ಶಾಸಕರು ಹಾಗೂ ಸಂಸದರು ಸರ್ಕಾರದ ಮೇಲೆ ಒತ್ತಡ ತಂದು ಅನುದಾನ ಮಂಜೂರು ಮಾಡಿಸಬೇಕು’ ಎಂದು ಒತ್ತಾಯಿಸಿದರು.</p>.<p>ಜಿ.ಪಂ ಉಪಾಧ್ಯಕ್ಷೆ ಯಶೋದಾ, ಸದಸ್ಯ ಕೃಷ್ಣಪ್ಪ, ಅಂತರ್ಜಲ ನಿರ್ದೇಶನಾಲಯದ ನಿರ್ದೇಶಕ ಬಿ.ಟಿ.ಕಾಂತರಾಜ್, ಸಣ್ಣ ನೀರಾವರಿ ಮತ್ತು ಅಂತರ್ಜಲ ವೃತ್ತದ ಸೂಪರಿಂಟೆಂಡೆಂಟ್ ಎಂಜಿನಿಯರ್ ಎನ್.ನಾಗರಾಜ್, ಹಿರಿಯ ಭೂವಿಜ್ಞಾನಿ ಎ.ತಿಪ್ಪೇಸ್ವಾಮಿ, ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಪ್ರೊ.ಬಿ.ಜಿ.ಪ್ರಕಾಶ್, ಪ್ರಗತಿಪರ ರೈತ ಅಶೋಕ್ ರಾಂಪುರ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>‘ಜಿಲ್ಲೆಯ ಕೆಜಿಎಫ್ನಲ್ಲಿ ಚಿನ್ನದ ಗಣಿ ಪುನರಾರಂಭಿಸಲು ಕೇಂದ್ರ ಸರ್ಕಾರ ಒಪ್ಪಿಗೆ ನೀಡಿದೆ’ ಎಂದು ಸಂಸದ ಎಸ್.ಮುನಿಸ್ವಾಮಿ ಹೇಳಿದರು.</p>.<p>ಜಿಲ್ಲಾಡಳಿತವು ಇಲ್ಲಿ ಶನಿವಾರ ಹಮ್ಮಿಕೊಂಡಿದ್ದ ಅಟಲ್ ಭೂಜಲ ಯೋಜನೆ ಕುರಿತ ವಿಚಾರ ಸಂಕಿರಣದಲ್ಲಿ ಮಾತನಾಡಿ, ‘ಕೇಂದ್ರದ ಸೂಚನೆಯಂತೆ ಅಧಿಕಾರಿಗಳ ತಂಡವು ಕೆಜಿಎಫ್ನ ಗಣಿಗಾರಿಕೆ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ. ಈ ತಂಡವು ಕೇಂದ್ರಕ್ಕೆ ವರದಿ ಸಲ್ಲಿಸಿದ್ದು, ಸಾಧ್ಯವಾದಷ್ಟು ಬೇಗನೆ ಗಣಿಗಾರಿಕೆ ಆರಂಭಿಸುತ್ತೇವೆ’ ಎಂದು ಭರವಸೆ ನೀಡಿದರು.</p>.<p>‘ಸರ್ಕಾರದ ಯೋಜನೆಗಳನ್ನು ಅಧಿಕಾರಿಗಳು ಸಮರ್ಪಕವಾಗಿ ಕಾರ್ಯಗತಗೊಳಿಸಿದರೆ ಮಾತ್ರ ದೇಶದ ಪ್ರಗತಿ ಸಾಧ್ಯ. ರಾಜಕಾರಣಿಗಳು ಶಿಫಾರಸು ಮಾಡಿದ ವ್ಯಕ್ತಿಗಳನ್ನು ಬಿಟ್ಟು ಅರ್ಹ ಫಲಾನುಭವಿಗಳಿಗೆ ಸರ್ಕಾರದ ಸೌಕರ್ಯ ತಲುಪಿಸಬೇಕು’ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.</p>.<p>‘ರೈತರ ಆದಾಯ ದ್ವಿಗುಣಗೊಳಿಸಲು ಕೇಂದ್ರ ಸರ್ಕಾರವು ಪ್ರಾಯೋಗಿಕವಾಗಿ ಕರ್ನಾಟಕ ರಾಜ್ಯವನ್ನು ಆಯ್ಕೆ ಮಾಡಿಕೊಂಡಿದೆ. ಕೋಲಾರ ಲೋಕಸಭಾ ಕ್ಷೇತ್ರದ ಎಲ್ಲಾ ತಾಲ್ಲೂಕುಗಳು ಈ ಯೋಜನೆ ವ್ಯಾಪ್ತಿಗೆ ಸೇರಿವೆ. ಈ ಬಗ್ಗೆ ರೈತರಿಗೆ ಸಂಪೂರ್ಣ ಮಾಹಿತಿ ನೀಡಬೇಕು’ ಎಂದು ತಿಳಿಸಿದರು.</p>.<p>‘ರೈತರ ಸಹಕಾರವಿಲ್ಲದೆ ಯಾವುದೇ ಯೋಜನೆ ಜಾರಿ ಸಾಧ್ಯವಿಲ್ಲ. ರಾಜಕೀಯ ಮುಖಂಡರು ಶಿಫಾರಸ್ಸು ಮಾಡಿದವರಿಗೆ ಸೌಕರ್ಯ ಕಲ್ಪಿಸುವುದನ್ನು ಅಧಿಕಾರಿಗಳು ಬಿಡಬೇಕು. ರೈತ ವಿರೋಧಿಗಳು ಕೆ.ಸಿ ವ್ಯಾಲಿ ಯೋಜನೆ ವಿರೋಧಿಸಿ ಜಿಲ್ಲೆಗೆ ಅವಮಾನ ಎಸಗುತ್ತಿದ್ದಾರೆ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಅಂತರ್ಜಲಕ್ಕೆ ಮಾರಕವಾಗಿರುವ ನೀಲಗಿರಿ ಮರಗಳನ್ನು ರೈತರು ಸ್ವಯಂ ಪ್ರೇರಿತರಾಗಿ ತೆರವುಗೊಳಿಸಬೇಕು. ಕೆರೆ, ಕಾಲುವೆ ಒತ್ತುವರಿಯಿಂದ ಉಂಟಾಗುತ್ತಿರುವ ಸಮಸ್ಯೆ ಬಗ್ಗೆ ಜಾಗೃತಿ ಮೂಡಿಸಬೇಕು. ಮುಂದಿನ ಪೀಳಿಗೆಯ ಹಿತದೃಷ್ಟಿಯಿಂದ ಉತ್ತಮ ಪರಿಸರ ನಿರ್ಮಾಣಕ್ಕೆ ಒತ್ತು ನೀಡಬೇಕು’ ಎಂದು ಕಿವಿಮಾತು ಹೇಳಿದರು.</p>.<p>ಶಾಸಕರ ಕಳವಳ: ‘ಜಿಲ್ಲೆಯಲ್ಲಿ ಸತತ ಬರಗಾಲ ಎದುರಾಗಿದ್ದು, ಮನುಷ್ಯನ ದುರಾಸೆಯ ಫಲವಾಗಿ ಕಷ್ಟದ ಪರಿಸ್ಥಿತಿ ಎದುರಿಸುವಂತಾಗಿದೆ. ಅರಣ್ಯ ಸಂಪತ್ತು ನಾಶವಾಗಿ ಮಳೆ ಪ್ರಮಾಣ ಕ್ಷೀಣಿಸಿದೆ’ ಎಂದು ಶಾಸಕ ಕೆ.ಶ್ರೀನಿವಾಸಗೌಡ ಕಳವಳ ವ್ಯಕ್ತಪಡಿಸಿದರು.</p>.<p>‘ಈ ಹಿಂದೆ ಹಿರಿಯರು ಮುಂದಾಲೋಚನೆಯಿಂದ ಕೆರೆ, ರಾಜಕಾಲುವೆ ನಿರ್ಮಾಣ ಮಾಡಿದರು. ಆದರೆ, ಜನರು ದುರಾಸೆಯಿಂದ ಕೆರೆ, ರಾಜಕಾಲುವೆಗಳನ್ನು ಒತ್ತುವರಿ ಮಾಡಿಕೊಂಡಿದ್ದಾರೆ. ಈಗ ಒತ್ತುವರಿ ತೆರವುಗೊಳಿಸದಿದ್ದರೆ ಭವಿಷ್ಯದಲ್ಲಿ ಅಪಾಯ ಕಟ್ಟಿಟ್ಟ ಬುತ್ತಿ’ ಎಂದು ಎಚ್ಚರಿಸಿದರು.</p>.<p>‘ಜಿಲ್ಲೆಯ ಕುಡಿಯುವ ನೀರಿನ ಸೌಕರ್ಯಕ್ಕಾಗಿ ಯರಗೋಳ್ ಯೋಜನೆ ಜಾರಿಗೊಳಿಸಲಾಯಿತು. ಆದರೆ, ಆಗಿನ ಶಾಸಕನಿಗೆ ಪೈಪ್ಲೈನ್ ಕಾಮಗಾರಿ ಮಾಡುವುದು ಅವಸರವಾಗಿತ್ತು. ಸಕಾಲಕ್ಕೆ ಡ್ಯಾಂ ನಿರ್ಮಿಸಿದ್ದರೆ ಈ ವೇಳೆಗಾಗಲೇ ನೀರು ಹರಿಯುತ್ತಿತ್ತು. ಆ ಮಾಜಿ ಶಾಸಕನಿಗೆ ಪೈಪ್ಲೈನ್ನಲ್ಲಿ ಹಣ ಮಾಡುವುದು ಮುಖ್ಯವಾಗಿತ್ತು’ ಎಂದು ಮಾಜಿ ಶಾಸಕ ವರ್ತೂರು ಪ್ರಕಾಶ್ ವಿರುದ್ಧ ಕಿಡಿಕಾರಿದರು.</p>.<p>ಶಾಸಕರಿಗೆ ತಿರುಗೇಟು: ‘ಜನಪ್ರತಿನಿಧಿಗಳಿಗೆ ಅಭಿವೃದ್ಧಿ ಕೆಲಸದ ಕಡೆ ಹೆಚ್ಚು ಗಮನ ಇರಬೇಕು. ಹಿಂದಿನ ಶಾಸಕರು ಕ್ಷೇತ್ರದಲ್ಲಿ ಮಾಡಿದ ಕೆಲಸ ಶಾಶ್ವತವಾಗಿ ಉಳಿದಿದೆ’ ಎಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿ.ಎಸ್.ವೆಂಕಟೇಶ್ ಶಾಸಕ ಶ್ರೀನಿವಾಸಗೌಡರ ಮಾತಿಗೆ ತಿರುಗೇಟು ನೀಡಿದರು.</p>.<p>‘ಜಿಲ್ಲೆಯಲ್ಲಿ ಪಕ್ಷ, ಜಾತಿ ಭೇದಭಾವ ಬಿಟ್ಟು ಅಭಿವೃದ್ಧಿ ಕೆಲಸಕ್ಕೆ ಸಹಕಾರ ನೀಡಬೇಕು. ಜಿಲ್ಲೆಯಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಅನುದಾನದ ಕೊರತೆಯಿದ್ದು, ಶಾಸಕರು ಹಾಗೂ ಸಂಸದರು ಸರ್ಕಾರದ ಮೇಲೆ ಒತ್ತಡ ತಂದು ಅನುದಾನ ಮಂಜೂರು ಮಾಡಿಸಬೇಕು’ ಎಂದು ಒತ್ತಾಯಿಸಿದರು.</p>.<p>ಜಿ.ಪಂ ಉಪಾಧ್ಯಕ್ಷೆ ಯಶೋದಾ, ಸದಸ್ಯ ಕೃಷ್ಣಪ್ಪ, ಅಂತರ್ಜಲ ನಿರ್ದೇಶನಾಲಯದ ನಿರ್ದೇಶಕ ಬಿ.ಟಿ.ಕಾಂತರಾಜ್, ಸಣ್ಣ ನೀರಾವರಿ ಮತ್ತು ಅಂತರ್ಜಲ ವೃತ್ತದ ಸೂಪರಿಂಟೆಂಡೆಂಟ್ ಎಂಜಿನಿಯರ್ ಎನ್.ನಾಗರಾಜ್, ಹಿರಿಯ ಭೂವಿಜ್ಞಾನಿ ಎ.ತಿಪ್ಪೇಸ್ವಾಮಿ, ತೋಟಗಾರಿಕೆ ಮಹಾವಿದ್ಯಾಲಯದ ಡೀನ್ ಪ್ರೊ.ಬಿ.ಜಿ.ಪ್ರಕಾಶ್, ಪ್ರಗತಿಪರ ರೈತ ಅಶೋಕ್ ರಾಂಪುರ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>