<p><strong>ಕೋಲಾರ:</strong> ನಿವೃತ್ತ ಐಎಎಸ್ ಅಧಿಕಾರಿ ದಿವಂಗತ ಸಿ.ಮುನಿಸ್ವಾಮಿ ಅವರ ಪತ್ನಿ ಮಂಗಮ್ಮ ಮುನಿಸ್ವಾಮಿ ಮಂಗಳವಾರ 75ನೇ ವರ್ಷಕ್ಕೆ ಕಾಲಿಡುತ್ತಿದ್ದು, ಅಭಿಮಾನಿಗಳು, ಕುಟುಂಬದವರ ನೇತೃತ್ವದಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ನಗರದ ಹೊರವಲಯದ ಸಿ.ಮುನಿಸ್ವಾಮಿ ಪಬ್ಲಿಕ್ ಶಾಲೆ ಆವರಣದಲ್ಲಿ ಬೆಳಿಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ.</p>.<p>ಕಾರ್ಯಕ್ರಮದಲ್ಲಿ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಶಾಸಕರು, ಮುಖಂಡರು, ಕಾರ್ಯಕರ್ತರು, ಕುಟುಂಬದ ಸದಸ್ಯರು, ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ.</p>.<p>ಮಂಗಮ್ಮ 1950ರ ನ. 11ರಂದು ಮುದಿಮಡಗು ಚಿಕ್ಕಗುರಪ್ಪ ಮತ್ತು ಶ್ಯಾಮಲಮ್ಮ ಅವರ ಪುತ್ರಿಯಾಗಿ ಜನಿಸಿದರು. ಅದೇ ಗ್ರಾಮದಲ್ಲಿ ಪ್ರಾಥಮಿಕ ಹಾಗೂ ಕೋಲಾರದಲ್ಲಿ ಕಾಲೇಜು ಶಿಕ್ಷಣ ಮುಗಿಸಿ 1970ರಲ್ಲಿ ಸಿ.ಮುನಿಸ್ವಾಮಿ ಅವರನ್ನು ವಿವಾಹವಾದರು.</p>.<p>ರಾಜಕೀಯ, ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದಾರೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ, ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ. 1999ರಲ್ಲಿ ಕೋಲಾರ ಲೋಕಸಭೆಗೆ ಸ್ಪರ್ಧಿಸಿ ಪರಾಭವಗೊಂಡರೂ ಮತ್ತೆ ಜಿ.ಪಂ ಅಧ್ಯಕ್ಷರಾಗಿ 5 ವರ್ಷ ಆಡಳಿತ ನಡೆಸಿದರು. ಪತಿ ಸಿ.ಮುನಿಸ್ವಾಮಿ ಹೆಸರಿನಲ್ಲಿ ಸಿ.ಮುನಿಸ್ವಾಮಿ ಚಾರಿಟಬಲ್ ಟ್ರಸ್ಟ್ ಸ್ಥಾಪಿಸಿ ಕುಂಬಾರಹಳ್ಳಿಯಲ್ಲಿ ಸಿ.ಮುನಿಸ್ವಾಮಿ ಪಬ್ಲಿಕ್ ಶಾಲೆ ತೆರೆದರು.</p>.<p>ಡಾ.ಪೂರ್ಣಿಮಾ, ನಾಗೇಶ್ ಬಾಬು, ಮಲ್ಲೇಶ್ ಬಾಬು ಅವರು ಮಂಗಮ್ಮ ಅವರ ಮಕ್ಕಳು. ಪೂರ್ಣಿಮಾ ಅವರನ್ನು ವೈದ್ಯರನ್ನಾಗಿಸಿ, ಐಎಎಸ್ ಅಧಿಕಾರಿ ಮಂಜುನಾಥ್ ಪ್ರಸಾದ್ ಜೊತೆ ವಿವಾಹ ಮಾಡಿಕೊಟ್ಟರು. ನಾಗೇಶ್ ಬಾಬು ನಾಗರಿಕ ವಿಮಾನಯಾನದಲ್ಲಿ ಪೈಲಟ್ ಆಗಿಸಿ, ಪೈಲಟ್ ಆಗಿರುವವರನ್ನೇ ಸೊಸೆಯನ್ನಾಗಿಸಿಕೊಂಡರು. </p>.<p>ಕಿರಿಯ ಪುತ್ರ ಸಂಸದ: ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕಿರಿಯ ಪುತ್ರ ಎಂ.ಮಲ್ಲೇಶ್ ಬಾಬು, ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಎರಡು ಬಾರಿ ಸ್ಪರ್ಧಿಸಿ ಪರಾಭವಗೊಂಡರು. ನಂತರ 2024ರ ಲೋಕಸಭೆ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಿ ಗೆಲ್ಲುವ ಮೂಲಕ ತಂದೆ ಸಿ.ಮುನಿಸ್ವಾಮಿ ಅವರ ಆಸೆ ಪೂರೈಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ನಿವೃತ್ತ ಐಎಎಸ್ ಅಧಿಕಾರಿ ದಿವಂಗತ ಸಿ.ಮುನಿಸ್ವಾಮಿ ಅವರ ಪತ್ನಿ ಮಂಗಮ್ಮ ಮುನಿಸ್ವಾಮಿ ಮಂಗಳವಾರ 75ನೇ ವರ್ಷಕ್ಕೆ ಕಾಲಿಡುತ್ತಿದ್ದು, ಅಭಿಮಾನಿಗಳು, ಕುಟುಂಬದವರ ನೇತೃತ್ವದಲ್ಲಿ ಅಮೃತ ಮಹೋತ್ಸವ ಕಾರ್ಯಕ್ರಮವನ್ನು ನಗರದ ಹೊರವಲಯದ ಸಿ.ಮುನಿಸ್ವಾಮಿ ಪಬ್ಲಿಕ್ ಶಾಲೆ ಆವರಣದಲ್ಲಿ ಬೆಳಿಗ್ಗೆ 10.30ಕ್ಕೆ ಹಮ್ಮಿಕೊಳ್ಳಲಾಗಿದೆ.</p>.<p>ಕಾರ್ಯಕ್ರಮದಲ್ಲಿ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸೇರಿದಂತೆ ಶಾಸಕರು, ಮುಖಂಡರು, ಕಾರ್ಯಕರ್ತರು, ಕುಟುಂಬದ ಸದಸ್ಯರು, ಅಭಿಮಾನಿಗಳು ಪಾಲ್ಗೊಳ್ಳಲಿದ್ದಾರೆ.</p>.<p>ಮಂಗಮ್ಮ 1950ರ ನ. 11ರಂದು ಮುದಿಮಡಗು ಚಿಕ್ಕಗುರಪ್ಪ ಮತ್ತು ಶ್ಯಾಮಲಮ್ಮ ಅವರ ಪುತ್ರಿಯಾಗಿ ಜನಿಸಿದರು. ಅದೇ ಗ್ರಾಮದಲ್ಲಿ ಪ್ರಾಥಮಿಕ ಹಾಗೂ ಕೋಲಾರದಲ್ಲಿ ಕಾಲೇಜು ಶಿಕ್ಷಣ ಮುಗಿಸಿ 1970ರಲ್ಲಿ ಸಿ.ಮುನಿಸ್ವಾಮಿ ಅವರನ್ನು ವಿವಾಹವಾದರು.</p>.<p>ರಾಜಕೀಯ, ಸಾಮಾಜಿಕ ಹಾಗೂ ಶೈಕ್ಷಣಿಕ ಕ್ಷೇತ್ರದಲ್ಲಿ ಛಾಪು ಮೂಡಿಸಿದ್ದಾರೆ. ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾಗಿ, ಸದಸ್ಯರಾಗಿ ಕಾರ್ಯನಿರ್ವಹಿಸಿದ್ದಾರೆ. 1999ರಲ್ಲಿ ಕೋಲಾರ ಲೋಕಸಭೆಗೆ ಸ್ಪರ್ಧಿಸಿ ಪರಾಭವಗೊಂಡರೂ ಮತ್ತೆ ಜಿ.ಪಂ ಅಧ್ಯಕ್ಷರಾಗಿ 5 ವರ್ಷ ಆಡಳಿತ ನಡೆಸಿದರು. ಪತಿ ಸಿ.ಮುನಿಸ್ವಾಮಿ ಹೆಸರಿನಲ್ಲಿ ಸಿ.ಮುನಿಸ್ವಾಮಿ ಚಾರಿಟಬಲ್ ಟ್ರಸ್ಟ್ ಸ್ಥಾಪಿಸಿ ಕುಂಬಾರಹಳ್ಳಿಯಲ್ಲಿ ಸಿ.ಮುನಿಸ್ವಾಮಿ ಪಬ್ಲಿಕ್ ಶಾಲೆ ತೆರೆದರು.</p>.<p>ಡಾ.ಪೂರ್ಣಿಮಾ, ನಾಗೇಶ್ ಬಾಬು, ಮಲ್ಲೇಶ್ ಬಾಬು ಅವರು ಮಂಗಮ್ಮ ಅವರ ಮಕ್ಕಳು. ಪೂರ್ಣಿಮಾ ಅವರನ್ನು ವೈದ್ಯರನ್ನಾಗಿಸಿ, ಐಎಎಸ್ ಅಧಿಕಾರಿ ಮಂಜುನಾಥ್ ಪ್ರಸಾದ್ ಜೊತೆ ವಿವಾಹ ಮಾಡಿಕೊಟ್ಟರು. ನಾಗೇಶ್ ಬಾಬು ನಾಗರಿಕ ವಿಮಾನಯಾನದಲ್ಲಿ ಪೈಲಟ್ ಆಗಿಸಿ, ಪೈಲಟ್ ಆಗಿರುವವರನ್ನೇ ಸೊಸೆಯನ್ನಾಗಿಸಿಕೊಂಡರು. </p>.<p>ಕಿರಿಯ ಪುತ್ರ ಸಂಸದ: ಬೆಂಗಳೂರು ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿರುವ ಕಿರಿಯ ಪುತ್ರ ಎಂ.ಮಲ್ಲೇಶ್ ಬಾಬು, ಬಂಗಾರಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಎರಡು ಬಾರಿ ಸ್ಪರ್ಧಿಸಿ ಪರಾಭವಗೊಂಡರು. ನಂತರ 2024ರ ಲೋಕಸಭೆ ಚುನಾವಣೆಯಲ್ಲಿ ಕೋಲಾರ ಕ್ಷೇತ್ರದಿಂದ ಸ್ಪರ್ಧಿಸಿ ಗೆಲ್ಲುವ ಮೂಲಕ ತಂದೆ ಸಿ.ಮುನಿಸ್ವಾಮಿ ಅವರ ಆಸೆ ಪೂರೈಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>