<p><strong>ಕೆಜಿಎಫ್:</strong> ಆಂಧ್ರಪ್ರದೇಶದ ಮೂಲದವರು ತಾಲ್ಲೂಕು ವ್ಯಾಪ್ತಿಯಲ್ಲಿ ಜಮೀನು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಶಾಸಕಿ ಎಂ. ರೂಪಕಲಾ ಶಶಿಧರ್ ಸೋಮವಾರ ಪೀಲವಾರ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ನೆರೆಯ ಆಂಧ್ರಪ್ರದೇಶಕ್ಕೆ ಹೊಂದಿಕೊಂಡ ಶ್ರೀನಿವಾಸಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೀಲವಾರ ಗ್ರಾಮದ ಸರ್ಕಾರಿ ಗೋಮಾಳ 98ರ ಸರ್ವೆ ನಂಬರ್ನಲ್ಲಿ 650 ಎಕರೆ ಜಮೀನು ಇದ್ದು, ಅದನ್ನು ಆಂಧ್ರಪ್ರದೇಶದವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ವ್ಯಾಪಕ ದೂರುಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ನಾಗವೇಣಿ ಮತ್ತು ಇತರ ಸಿಬ್ಬಂದಿಯೊಡನೆ ಸ್ಥಳ ಪರಿಶೀಲನೆ ನಡೆಸಲಾಗಿದೆ. 650 ಎಕರೆ ಜಮೀನು ಪೈಕಿ ಉಳುಮೆ ನಡೆಸುತ್ತಿರುವ ಅಧಿಕೃತ ಮತ್ತು ಅಧಿಕೃತ ಸ್ವಾಧೀನದಾರರ ಬಗ್ಗೆ ಮಾಹಿತಿ ಕಲೆ ಹಾಕಿ ನೀಡಬೇಕು ಎಂದು ಶಾಸಕಿ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಈ ಪ್ರದೇಶದಲ್ಲಿ ಬರುವ ಜಮೀನಿನ ಪೈಕಿ 200 ಎಕರೆ ಜಮೀನು ಅರಣ್ಯ ಇಲಾಖೆ ಸುಪರ್ದಿಗೆ ಬರುತ್ತದೆ ಎಂದು ತಹಶೀಲ್ದಾರ್ ಕೆ.ನಾಗವೇಣಿ ಮಾಹಿತಿ ನೀಡಿದರು.</p>.<p>ಅರಣ್ಯ ಇಲಾಖೆ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ಕೆಲ ರೈತರು ತಮ್ಮ ಜಮೀನನ್ನು ಅರಣ್ಯ ಇಲಾಖೆಯಿಂದ ಬಿಡಿಸಿಕೊಡುವಂತೆ ಮನವಿ ಮಾಡಿದರು.</p>.<p>ಅವರ ಮನವಿಗೆ ಒಪ್ಪದ ಶಾಸಕಿ ಅರಣ್ಯ ಇಲಾಖೆಗೆ ಸೇರಿದ ಜಾಗ ನೀಡಲು ಸಾಧ್ಯವಿಲ್ಲ. ಅರಣ್ಯ ಉಳಿಸಿ, ಬೆಳೆಸುವುದು ಎಲ್ಲರ ಕರ್ತವ್ಯವಾಗಬೇಕು ಎಂದು ತಿಳಿಸಿದರು. ಕ್ಯಾಸಂಬಳ್ಳಿ ಕಂದಾಯ ಇನ್ಸ್ಪೆಕ್ಟರ್ ಲೋಕೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆಜಿಎಫ್:</strong> ಆಂಧ್ರಪ್ರದೇಶದ ಮೂಲದವರು ತಾಲ್ಲೂಕು ವ್ಯಾಪ್ತಿಯಲ್ಲಿ ಜಮೀನು ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ಆರೋಪದ ಹಿನ್ನೆಲೆಯಲ್ಲಿ ಶಾಸಕಿ ಎಂ. ರೂಪಕಲಾ ಶಶಿಧರ್ ಸೋಮವಾರ ಪೀಲವಾರ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.</p>.<p>ನೆರೆಯ ಆಂಧ್ರಪ್ರದೇಶಕ್ಕೆ ಹೊಂದಿಕೊಂಡ ಶ್ರೀನಿವಾಸಸಂದ್ರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಪೀಲವಾರ ಗ್ರಾಮದ ಸರ್ಕಾರಿ ಗೋಮಾಳ 98ರ ಸರ್ವೆ ನಂಬರ್ನಲ್ಲಿ 650 ಎಕರೆ ಜಮೀನು ಇದ್ದು, ಅದನ್ನು ಆಂಧ್ರಪ್ರದೇಶದವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದಾರೆ ಎಂಬ ವ್ಯಾಪಕ ದೂರುಗಳು ಕೇಳಿ ಬಂದಿದ್ದವು. ಈ ಹಿನ್ನೆಲೆಯಲ್ಲಿ ತಹಶೀಲ್ದಾರ್ ನಾಗವೇಣಿ ಮತ್ತು ಇತರ ಸಿಬ್ಬಂದಿಯೊಡನೆ ಸ್ಥಳ ಪರಿಶೀಲನೆ ನಡೆಸಲಾಗಿದೆ. 650 ಎಕರೆ ಜಮೀನು ಪೈಕಿ ಉಳುಮೆ ನಡೆಸುತ್ತಿರುವ ಅಧಿಕೃತ ಮತ್ತು ಅಧಿಕೃತ ಸ್ವಾಧೀನದಾರರ ಬಗ್ಗೆ ಮಾಹಿತಿ ಕಲೆ ಹಾಕಿ ನೀಡಬೇಕು ಎಂದು ಶಾಸಕಿ ಅಧಿಕಾರಿಗಳಿಗೆ ಸೂಚಿಸಿದರು.</p>.<p>ಈ ಪ್ರದೇಶದಲ್ಲಿ ಬರುವ ಜಮೀನಿನ ಪೈಕಿ 200 ಎಕರೆ ಜಮೀನು ಅರಣ್ಯ ಇಲಾಖೆ ಸುಪರ್ದಿಗೆ ಬರುತ್ತದೆ ಎಂದು ತಹಶೀಲ್ದಾರ್ ಕೆ.ನಾಗವೇಣಿ ಮಾಹಿತಿ ನೀಡಿದರು.</p>.<p>ಅರಣ್ಯ ಇಲಾಖೆ ಜಮೀನಿನಲ್ಲಿ ಸಾಗುವಳಿ ಮಾಡುತ್ತಿರುವ ಕೆಲ ರೈತರು ತಮ್ಮ ಜಮೀನನ್ನು ಅರಣ್ಯ ಇಲಾಖೆಯಿಂದ ಬಿಡಿಸಿಕೊಡುವಂತೆ ಮನವಿ ಮಾಡಿದರು.</p>.<p>ಅವರ ಮನವಿಗೆ ಒಪ್ಪದ ಶಾಸಕಿ ಅರಣ್ಯ ಇಲಾಖೆಗೆ ಸೇರಿದ ಜಾಗ ನೀಡಲು ಸಾಧ್ಯವಿಲ್ಲ. ಅರಣ್ಯ ಉಳಿಸಿ, ಬೆಳೆಸುವುದು ಎಲ್ಲರ ಕರ್ತವ್ಯವಾಗಬೇಕು ಎಂದು ತಿಳಿಸಿದರು. ಕ್ಯಾಸಂಬಳ್ಳಿ ಕಂದಾಯ ಇನ್ಸ್ಪೆಕ್ಟರ್ ಲೋಕೇಶ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>