<p><strong>ಕೋಲಾರ</strong>: ರಾಜ್ಯದಲ್ಲಿ ಪಕ್ಷ ಸಂಘಟನೆ ಜತೆಗೆ ರೈತರ ಸಮಸ್ಯೆ ಗುರುತಿಸಿ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಪರಿಹರಿಸಲಾಗುವುದು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತಿಳಿಸಿದರು.<br />ತಾಲ್ಲೂಕಿನ ವಡಗೂರು ಗ್ರಾಮದಲ್ಲಿ ಭಾನುವಾರ ರೈತರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದರು.</p>.<p>ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರ ಅಭಿವೃದ್ಧಿಗೆ ಸಾಕಷ್ಟು ಯೋಜನೆ ಜಾರಿಗೆ ತಂದಿದ್ದು ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಕೃಷಿ ದ್ವಿಗುಣಗೊಳಿಸಲು ಚರ್ಚಿಸಲಾಗುತ್ತಿದೆ ಎಂದರು. ರಾಜ್ಯದಲ್ಲಿ ರೈತರ 21 ಕೋಟಿ ಜಮೀನಿದೆ. ಇದರಲ್ಲಿ 5 ಲಕ್ಷ ಜಮೀನುಗಳ ಬೆಳೆ ಸಮೀಕ್ಷೆ ಆಗಿದೆ. ಸಮೀಕ್ಷೆ ಆಧಾರದಲ್ಲೇ ಸರ್ಕಾರದ ಪರಿಹಾರ ಘೋಷಿಸಲಾಗುತ್ತದೆ. ರೈತರ ಬೆಳೆ ಸಮೀಕ್ಷೆಯು ರಾಜ್ಯದಲ್ಲಿ ಕೇವಲ ಶೇ 30 ದಾಟಿಲ್ಲ ಎಂದರು.<br />ದೇಶದಲ್ಲಿ ಕೊರೊನಾದಿಂದ ಉದ್ಯೋಗ ನೆಲೆಕಚ್ಚಿರುವ ಸಂದರ್ಭದಲ್ಲಿ ಕೃಷಿ ಉದ್ಯೋಗ ಗಮನಾರ್ಹ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಕೊರೊನಾ ನಂತರ ಕೃಷಿ ಚಟುವಟಿಕೆಗಳು ಶೇ 7ರಷ್ಟು ಹೆಚ್ಚಳವಾಗಿದೆ ಎಂದರು.</p>.<p>ಸಂಸದ ಎಸ್. ಮುನಿಸ್ವಾಮಿ ಮಾತನಾಡಿ, ಹಿಂದೆ ಯಾವುದೇ ರೈತರಿಗೆ ಪರಿಹಾರ ಪಡೆಯಲು ದಳ್ಳಾಳಿಗಳ ಬಳಿ ಹೋಗಬೇಕಾಗಿತ್ತು. ಬಿಜೆಪಿ ಸರ್ಕಾರ ಬಂದ ನಂತರ ರೈತರ ಖಾತೆಗೆ ನೇರವಾಗಿ ಹಣ ಜಮೆಯಾಗುವಂತೆ ಮಾಡಲಾಗಿದೆ ಎಂದರು.<br />ಸಂವಾದದಲ್ಲಿ ತಿಪ್ಪಸಂದ್ರ ರೈತ ಶ್ರೀನಿವಾಸ್ ಮಾತನಾಡಿ, ಎಪಿಎಂಸಿ ಮಾರುಕಟ್ಟೆಯಲ್ಲಿ ರೈತರು ಕಷ್ಟಪಟ್ಟು ಬೆಳೆದ ಬೆಳೆಗೆ ಶೇ 8ರಷ್ಟು ಕಮಿಷನ್ ತೆಗೆದುಕೊಳ್ಳುತ್ತಿದ್ದಾರೆ. ರೈತರಿಗೆ ಸರ್ಕಾರದಿಂದ ಸಹಾಯಧನ ಸಿಗುತ್ತಿಲ್ಲ ಎಂದರು.</p>.<p>ಬಿಜೆಪಿ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ಉಪಾಧ್ಯಕ್ಷ ಲೋಕೇಶ್ ಗೌಡ, ಖಜಾಂಚಿ ಲಲ್ಲೇಶ್ ರೆಡ್ಡಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವೇಣುಗೋಪಾಲ್, ಲಕ್ಷಣ್ ಗೌಡ, ನೆನಮನಹಳ್ಳಿ ಚಂದ್ರಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ರಾಜ್ಯದಲ್ಲಿ ಪಕ್ಷ ಸಂಘಟನೆ ಜತೆಗೆ ರೈತರ ಸಮಸ್ಯೆ ಗುರುತಿಸಿ ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಪರಿಹರಿಸಲಾಗುವುದು ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ತಿಳಿಸಿದರು.<br />ತಾಲ್ಲೂಕಿನ ವಡಗೂರು ಗ್ರಾಮದಲ್ಲಿ ಭಾನುವಾರ ರೈತರೊಂದಿಗೆ ನಡೆದ ಸಂವಾದದಲ್ಲಿ ಮಾತನಾಡಿದರು.</p>.<p>ಕೇಂದ್ರ ಮತ್ತು ರಾಜ್ಯ ಸರ್ಕಾರ ರೈತರ ಅಭಿವೃದ್ಧಿಗೆ ಸಾಕಷ್ಟು ಯೋಜನೆ ಜಾರಿಗೆ ತಂದಿದ್ದು ಅದನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಕೃಷಿ ದ್ವಿಗುಣಗೊಳಿಸಲು ಚರ್ಚಿಸಲಾಗುತ್ತಿದೆ ಎಂದರು. ರಾಜ್ಯದಲ್ಲಿ ರೈತರ 21 ಕೋಟಿ ಜಮೀನಿದೆ. ಇದರಲ್ಲಿ 5 ಲಕ್ಷ ಜಮೀನುಗಳ ಬೆಳೆ ಸಮೀಕ್ಷೆ ಆಗಿದೆ. ಸಮೀಕ್ಷೆ ಆಧಾರದಲ್ಲೇ ಸರ್ಕಾರದ ಪರಿಹಾರ ಘೋಷಿಸಲಾಗುತ್ತದೆ. ರೈತರ ಬೆಳೆ ಸಮೀಕ್ಷೆಯು ರಾಜ್ಯದಲ್ಲಿ ಕೇವಲ ಶೇ 30 ದಾಟಿಲ್ಲ ಎಂದರು.<br />ದೇಶದಲ್ಲಿ ಕೊರೊನಾದಿಂದ ಉದ್ಯೋಗ ನೆಲೆಕಚ್ಚಿರುವ ಸಂದರ್ಭದಲ್ಲಿ ಕೃಷಿ ಉದ್ಯೋಗ ಗಮನಾರ್ಹ ಪ್ರಮಾಣದಲ್ಲಿ ಹೆಚ್ಚಳವಾಗಿದೆ. ಕೊರೊನಾ ನಂತರ ಕೃಷಿ ಚಟುವಟಿಕೆಗಳು ಶೇ 7ರಷ್ಟು ಹೆಚ್ಚಳವಾಗಿದೆ ಎಂದರು.</p>.<p>ಸಂಸದ ಎಸ್. ಮುನಿಸ್ವಾಮಿ ಮಾತನಾಡಿ, ಹಿಂದೆ ಯಾವುದೇ ರೈತರಿಗೆ ಪರಿಹಾರ ಪಡೆಯಲು ದಳ್ಳಾಳಿಗಳ ಬಳಿ ಹೋಗಬೇಕಾಗಿತ್ತು. ಬಿಜೆಪಿ ಸರ್ಕಾರ ಬಂದ ನಂತರ ರೈತರ ಖಾತೆಗೆ ನೇರವಾಗಿ ಹಣ ಜಮೆಯಾಗುವಂತೆ ಮಾಡಲಾಗಿದೆ ಎಂದರು.<br />ಸಂವಾದದಲ್ಲಿ ತಿಪ್ಪಸಂದ್ರ ರೈತ ಶ್ರೀನಿವಾಸ್ ಮಾತನಾಡಿ, ಎಪಿಎಂಸಿ ಮಾರುಕಟ್ಟೆಯಲ್ಲಿ ರೈತರು ಕಷ್ಟಪಟ್ಟು ಬೆಳೆದ ಬೆಳೆಗೆ ಶೇ 8ರಷ್ಟು ಕಮಿಷನ್ ತೆಗೆದುಕೊಳ್ಳುತ್ತಿದ್ದಾರೆ. ರೈತರಿಗೆ ಸರ್ಕಾರದಿಂದ ಸಹಾಯಧನ ಸಿಗುತ್ತಿಲ್ಲ ಎಂದರು.</p>.<p>ಬಿಜೆಪಿ ರಾಜ್ಯ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿವಕುಮಾರ್, ಉಪಾಧ್ಯಕ್ಷ ಲೋಕೇಶ್ ಗೌಡ, ಖಜಾಂಚಿ ಲಲ್ಲೇಶ್ ರೆಡ್ಡಿ, ಬಿಜೆಪಿ ಜಿಲ್ಲಾ ಘಟಕದ ಅಧ್ಯಕ್ಷ ವೇಣುಗೋಪಾಲ್, ಲಕ್ಷಣ್ ಗೌಡ, ನೆನಮನಹಳ್ಳಿ ಚಂದ್ರಶೇಖರ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>