<p>ಕೋಲಾರ: ಕೋಲಾರ ನಗರದಲ್ಲಿ ಸೋಮವಾರ (ಸೆ.2) ನಡೆಯಲಿರುವ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ನಾಲ್ಕನೇ ವಾರ್ಷಿಕ ಘಟಿಕೋತ್ಸವದಲ್ಲಿ ಪಾಲ್ಗೊಳ್ಳಬೇಕಿದ್ದ ರಾಜ್ಯಪಾಲ ಥಾವರಚಂದ್ ಗೆಹಲೋತ್ ಕೊನೆ ಗಳಿಗೆಯಲ್ಲಿ ತಮ್ಮ ಪ್ರವಾಸ ರದ್ದುಪಡಿಸಿದ್ದಾರೆ.</p>.<p>ಅನಿವಾರ್ಯ ಕಾರಣಗಳಿಂದ ಪ್ರವಾಸ ರದ್ದಾಗಿರುವ ವಿಚಾರವನ್ನು ರಾಜಭವನ ಕಚೇರಿ ಭಾನುವಾರ ಮಧ್ಯಾಹ್ನ ಖಚಿತಪಡಿಸಿದೆ.</p>.<p>ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ಹೈಕೋರ್ಟ್ನಲ್ಲಿ ಸೋಮವಾರ ಮುಂದುವರಿಯಲಿದೆ. ರಾಜ್ಯಪಾಲರ ಪ್ರವಾಸ ರದ್ದು ಮಾಡಲು ಈ ವಿಚಾರವೂ ಕಾರಣ ಎನ್ನಲಾಗಿದೆ.</p>.<p>ಅಲ್ಲದೆ, ಭಾನುವಾರ ಬೆಳಗ್ಗೆ ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕಾಂಗ್ರೆಸ್ ಪಕ್ಷದ ಅಹಿಂದ ಒಕ್ಕೂಟದ ಮುಖಂಡರು ಕೋಲಾರಕ್ಕೆ ಸೋಮವಾರ ಭೇಟಿ ನೀಡುತ್ತಿರುವ ರಾಜ್ಯಪಾಲರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟಿಸುವ ಎಚ್ಚರಿಕೆಯನ್ನೂ ನೀಡಿದ್ದರು.</p>.<p>‘ರಾಜ್ಯಪಾಲರು ಬಿಜೆಪಿ ಮಾತು ಕೇಳಿ ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ. ಬಿಜೆಪಿ ಏಜೆಂಟ್ರಂತೆ ವರ್ತಿಸುತ್ತಿದ್ದಾರೆ. ಸಾಧ್ಯವಾದರೆ ಅವರಿಗೆ ದಿಗ್ಬಂಧನ ವಿಧಿಸುತ್ತೇವೆ’ ಎಂದು ಅಹಿಂದ ಮುಖಂಡರು ಹೇಳಿದ್ದರು.</p>.<p>ಈ ಎಲ್ಲ ಕಾರಣಗಳಿಂದ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯಪಾಲರ ಭೇಟಿ ರದ್ದಾಗಿರುವುದು ಗೊತ್ತಾಗಿದೆ.</p>.<p>ಸೋಮವಾರ ಬೆಳಗ್ಗೆ 11ಕ್ಕೆ ಕೋಲಾರ ನಗರ ಹೊರವಲಯದ ನಂದಿನಿ ಪ್ಯಾಲೆಸ್ನಲ್ಲಿ ಘಟಿಕೋತ್ಸವ ನಡೆಯಲಿದೆ. ಈ ಸಂಬಂಧ ವಿಶ್ವವಿದ್ಯಾಲಯ ಈಗಾಗಲೇ ಆಹ್ವಾನ ಪತ್ರಿಕೆ ವಿತರಿಸಿದೆ. ರಾಜ್ಯಪಾಲರು ಘಟಿಕೋತ್ಸವ ಅಧ್ಯಕ್ಷತೆ ವಹಿಸಿ ಗೌರವ ಡಾಕ್ಟರೇಟ್ ಹಾಗೂ ಪದಕ ಪ್ರದಾನ ಮಾಡಬೇಕಿತ್ತು.</p>.<p>ರಾಜ್ಯಪಾಲರು ಬರುತ್ತಾರೆಂದು ಪೊಲೀಸರು ಬಿಗಿ ಬಂದೋಬಸ್ತ್ ಕಲ್ಪಿಸಲು ಸಕಲ ಸಿದ್ಧತೆ ಮಾಡಿಕೊಂಡಿದ್ದರು. ಅವರನ್ನು ಸ್ವಾಗತಿಸಲು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಜಿಲ್ಲಾಡಳಿತವೂ ಸಜ್ಜಾಗಿತ್ತು.</p>.<p>‘ವಿಶ್ವವಿದ್ಯಾಲಯದ ಕುಲಾಧಿಪತಿಯೂ ಆಗಿರುವ ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಮ ಕುಲಾಧಿಪತಿ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅಧ್ಯಕ್ಷತೆ ವಹಿಸಿ ಘಟಿಕೋತ್ಸವ ನಡೆಸಿಕೊಡಲಿದ್ದಾರೆ’ ಎಂದು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ನಿರಂಜನ ವಾನಳ್ಳಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಈ ನಡುವೆ, ರಾಜ್ಯಪಾಲರ ಭೇಟಿ ರದ್ದಾಗಿರುವುದರಿಂದ ಸೋಮವಾರ ಬೆಳಗ್ಗೆ ಮತ್ತೊಮ್ಮೆ ಸಭೆ ನಡೆಸಿ ಪ್ರತಿಭಟನೆ ಸ್ವರೂಪದ ಬಗ್ಗೆ ಚರ್ಚಿಸುವುದಾಗಿ ಕಾಂಗ್ರೆಸ್ ಮುಖಂಡರು ಹೇಳಿದ್ದಾರೆ.</p>.<p>Highlights - null</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ಕೋಲಾರ ನಗರದಲ್ಲಿ ಸೋಮವಾರ (ಸೆ.2) ನಡೆಯಲಿರುವ ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ನಾಲ್ಕನೇ ವಾರ್ಷಿಕ ಘಟಿಕೋತ್ಸವದಲ್ಲಿ ಪಾಲ್ಗೊಳ್ಳಬೇಕಿದ್ದ ರಾಜ್ಯಪಾಲ ಥಾವರಚಂದ್ ಗೆಹಲೋತ್ ಕೊನೆ ಗಳಿಗೆಯಲ್ಲಿ ತಮ್ಮ ಪ್ರವಾಸ ರದ್ದುಪಡಿಸಿದ್ದಾರೆ.</p>.<p>ಅನಿವಾರ್ಯ ಕಾರಣಗಳಿಂದ ಪ್ರವಾಸ ರದ್ದಾಗಿರುವ ವಿಚಾರವನ್ನು ರಾಜಭವನ ಕಚೇರಿ ಭಾನುವಾರ ಮಧ್ಯಾಹ್ನ ಖಚಿತಪಡಿಸಿದೆ.</p>.<p>ಮುಡಾ ಪ್ರಕರಣ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ಹೈಕೋರ್ಟ್ನಲ್ಲಿ ಸೋಮವಾರ ಮುಂದುವರಿಯಲಿದೆ. ರಾಜ್ಯಪಾಲರ ಪ್ರವಾಸ ರದ್ದು ಮಾಡಲು ಈ ವಿಚಾರವೂ ಕಾರಣ ಎನ್ನಲಾಗಿದೆ.</p>.<p>ಅಲ್ಲದೆ, ಭಾನುವಾರ ಬೆಳಗ್ಗೆ ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕಾಂಗ್ರೆಸ್ ಪಕ್ಷದ ಅಹಿಂದ ಒಕ್ಕೂಟದ ಮುಖಂಡರು ಕೋಲಾರಕ್ಕೆ ಸೋಮವಾರ ಭೇಟಿ ನೀಡುತ್ತಿರುವ ರಾಜ್ಯಪಾಲರಿಗೆ ಕಪ್ಪು ಬಾವುಟ ಪ್ರದರ್ಶಿಸಿ ಪ್ರತಿಭಟಿಸುವ ಎಚ್ಚರಿಕೆಯನ್ನೂ ನೀಡಿದ್ದರು.</p>.<p>‘ರಾಜ್ಯಪಾಲರು ಬಿಜೆಪಿ ಮಾತು ಕೇಳಿ ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡಿದ್ದಾರೆ. ಬಿಜೆಪಿ ಏಜೆಂಟ್ರಂತೆ ವರ್ತಿಸುತ್ತಿದ್ದಾರೆ. ಸಾಧ್ಯವಾದರೆ ಅವರಿಗೆ ದಿಗ್ಬಂಧನ ವಿಧಿಸುತ್ತೇವೆ’ ಎಂದು ಅಹಿಂದ ಮುಖಂಡರು ಹೇಳಿದ್ದರು.</p>.<p>ಈ ಎಲ್ಲ ಕಾರಣಗಳಿಂದ ಮುನ್ನೆಚ್ಚರಿಕೆ ಕ್ರಮವಾಗಿ ರಾಜ್ಯಪಾಲರ ಭೇಟಿ ರದ್ದಾಗಿರುವುದು ಗೊತ್ತಾಗಿದೆ.</p>.<p>ಸೋಮವಾರ ಬೆಳಗ್ಗೆ 11ಕ್ಕೆ ಕೋಲಾರ ನಗರ ಹೊರವಲಯದ ನಂದಿನಿ ಪ್ಯಾಲೆಸ್ನಲ್ಲಿ ಘಟಿಕೋತ್ಸವ ನಡೆಯಲಿದೆ. ಈ ಸಂಬಂಧ ವಿಶ್ವವಿದ್ಯಾಲಯ ಈಗಾಗಲೇ ಆಹ್ವಾನ ಪತ್ರಿಕೆ ವಿತರಿಸಿದೆ. ರಾಜ್ಯಪಾಲರು ಘಟಿಕೋತ್ಸವ ಅಧ್ಯಕ್ಷತೆ ವಹಿಸಿ ಗೌರವ ಡಾಕ್ಟರೇಟ್ ಹಾಗೂ ಪದಕ ಪ್ರದಾನ ಮಾಡಬೇಕಿತ್ತು.</p>.<p>ರಾಜ್ಯಪಾಲರು ಬರುತ್ತಾರೆಂದು ಪೊಲೀಸರು ಬಿಗಿ ಬಂದೋಬಸ್ತ್ ಕಲ್ಪಿಸಲು ಸಕಲ ಸಿದ್ಧತೆ ಮಾಡಿಕೊಂಡಿದ್ದರು. ಅವರನ್ನು ಸ್ವಾಗತಿಸಲು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಜಿಲ್ಲಾಡಳಿತವೂ ಸಜ್ಜಾಗಿತ್ತು.</p>.<p>‘ವಿಶ್ವವಿದ್ಯಾಲಯದ ಕುಲಾಧಿಪತಿಯೂ ಆಗಿರುವ ರಾಜ್ಯಪಾಲರ ಗೈರು ಹಾಜರಿಯಲ್ಲಿ ಸಮ ಕುಲಾಧಿಪತಿ, ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಅಧ್ಯಕ್ಷತೆ ವಹಿಸಿ ಘಟಿಕೋತ್ಸವ ನಡೆಸಿಕೊಡಲಿದ್ದಾರೆ’ ಎಂದು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದ ಕುಲಪತಿ ಪ್ರೊ.ನಿರಂಜನ ವಾನಳ್ಳಿ ‘ಪ್ರಜಾವಾಣಿ’ಗೆ ತಿಳಿಸಿದರು.</p>.<p>ಈ ನಡುವೆ, ರಾಜ್ಯಪಾಲರ ಭೇಟಿ ರದ್ದಾಗಿರುವುದರಿಂದ ಸೋಮವಾರ ಬೆಳಗ್ಗೆ ಮತ್ತೊಮ್ಮೆ ಸಭೆ ನಡೆಸಿ ಪ್ರತಿಭಟನೆ ಸ್ವರೂಪದ ಬಗ್ಗೆ ಚರ್ಚಿಸುವುದಾಗಿ ಕಾಂಗ್ರೆಸ್ ಮುಖಂಡರು ಹೇಳಿದ್ದಾರೆ.</p>.<p>Highlights - null</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>