<p>ಕೋಲಾರ: ಜಿಲ್ಲೆಯಲ್ಲಿ ವಿವಿಧ ಕಾರಣಕ್ಕೆ ಚುನಾವಣೆ ನಡೆಯದೆ ಖಾಲಿ ಉಳಿದಿರುವ ಗ್ರಾಮ ಪಂಚಾಯಿತಿ ವಿವಿಧ ಕ್ಷೇತ್ರಗಳ ಸದಸ್ಯ ಸ್ಥಾನದ ಉಪ ಚುನಾವಣಾ ವೇಳಾಪಟ್ಟಿ ಪ್ರಕಟಿಸಲಾಗಿದೆ.</p>.<p>ಮಾಲೂರು ಮತ್ತು ಮುಳಬಾಗಿಲು ತಾಲ್ಲೂಕಿನಲ್ಲಿ ಚುನಾವಣೆ ನಡೆಯದೆ ಖಾಲಿ ಇರುವ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ 2 ಸದಸ್ಯ ಸ್ಥಾನಕ್ಕೆ ಚುನಾವಣೆ ನಡೆಸಲು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅಧಿಸೂಚನೆ ಹೊರಡಿಸಿದ್ದಾರೆ.</p>.<p>ಮಾಲೂರು ತಾಲ್ಲೂಕಿನ ಕಂಬೀಪುರ ಪ್ರಾದೇಶಿಕ ಚುನಾವಣಾ ಕ್ಷೇತ್ರದ ಅಬ್ಬೇನಹಳ್ಳಿ ಗ್ರಾ.ಪಂ 1 ಸ್ಥಾನಕ್ಕೆ (ಹಿಂದುಳಿದ ವರ್ಗ ಎ–ಮಹಿಳಾ ಮೀಸಲಾತಿ) ಮತ್ತು ಮುಳಬಾಗಿಲು ತಾಲ್ಲೂಕಿನ ಮಲ್ಲಸಂದ್ರ ಪ್ರಾದೇಶಿಕ ಚುನಾವಣಾ ಕ್ಷೇತ್ರದ ಉತ್ತನೂರು ಗ್ರಾ.ಪಂ 1 ಸ್ಥಾನಕ್ಕೆ (ಅನುಸೂಚಿತ ಜಾತಿ) ಚುನಾವಣೆ ನಡೆಯಲಿದೆ.</p>.<p>ನಾಮಪತ್ರ ಸಲ್ಲಿಸಲು ಮಾರ್ಚ್ 19 ಕಡೆಯ ದಿನ. ಮಾರ್ಚ್ 20ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ಮಾರ್ಚ್ 22 ಕಡೆಯ ದಿನವಾಗಿದೆ. ಮಾರ್ಚ್ 29ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ಆಯಾ ತಾಲ್ಲೂಕು ಕೇಂದ್ರದಲ್ಲಿ ಮಾರ್ಚ್ 31ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಸಿ ಫಲಿತಾಂಶ ಘೋಷಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ಜಿಲ್ಲೆಯಲ್ಲಿ ವಿವಿಧ ಕಾರಣಕ್ಕೆ ಚುನಾವಣೆ ನಡೆಯದೆ ಖಾಲಿ ಉಳಿದಿರುವ ಗ್ರಾಮ ಪಂಚಾಯಿತಿ ವಿವಿಧ ಕ್ಷೇತ್ರಗಳ ಸದಸ್ಯ ಸ್ಥಾನದ ಉಪ ಚುನಾವಣಾ ವೇಳಾಪಟ್ಟಿ ಪ್ರಕಟಿಸಲಾಗಿದೆ.</p>.<p>ಮಾಲೂರು ಮತ್ತು ಮುಳಬಾಗಿಲು ತಾಲ್ಲೂಕಿನಲ್ಲಿ ಚುನಾವಣೆ ನಡೆಯದೆ ಖಾಲಿ ಇರುವ ಪ್ರಾದೇಶಿಕ ಚುನಾವಣಾ ಕ್ಷೇತ್ರಗಳ 2 ಸದಸ್ಯ ಸ್ಥಾನಕ್ಕೆ ಚುನಾವಣೆ ನಡೆಸಲು ಜಿಲ್ಲಾಧಿಕಾರಿ ಆರ್.ಸೆಲ್ವಮಣಿ ಅಧಿಸೂಚನೆ ಹೊರಡಿಸಿದ್ದಾರೆ.</p>.<p>ಮಾಲೂರು ತಾಲ್ಲೂಕಿನ ಕಂಬೀಪುರ ಪ್ರಾದೇಶಿಕ ಚುನಾವಣಾ ಕ್ಷೇತ್ರದ ಅಬ್ಬೇನಹಳ್ಳಿ ಗ್ರಾ.ಪಂ 1 ಸ್ಥಾನಕ್ಕೆ (ಹಿಂದುಳಿದ ವರ್ಗ ಎ–ಮಹಿಳಾ ಮೀಸಲಾತಿ) ಮತ್ತು ಮುಳಬಾಗಿಲು ತಾಲ್ಲೂಕಿನ ಮಲ್ಲಸಂದ್ರ ಪ್ರಾದೇಶಿಕ ಚುನಾವಣಾ ಕ್ಷೇತ್ರದ ಉತ್ತನೂರು ಗ್ರಾ.ಪಂ 1 ಸ್ಥಾನಕ್ಕೆ (ಅನುಸೂಚಿತ ಜಾತಿ) ಚುನಾವಣೆ ನಡೆಯಲಿದೆ.</p>.<p>ನಾಮಪತ್ರ ಸಲ್ಲಿಸಲು ಮಾರ್ಚ್ 19 ಕಡೆಯ ದಿನ. ಮಾರ್ಚ್ 20ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆ ಹಿಂಪಡೆಯಲು ಮಾರ್ಚ್ 22 ಕಡೆಯ ದಿನವಾಗಿದೆ. ಮಾರ್ಚ್ 29ರಂದು ಬೆಳಿಗ್ಗೆ 7 ಗಂಟೆಯಿಂದ ಸಂಜೆ 5ರವರೆಗೆ ಮತದಾನ ನಡೆಯಲಿದೆ. ಆಯಾ ತಾಲ್ಲೂಕು ಕೇಂದ್ರದಲ್ಲಿ ಮಾರ್ಚ್ 31ರಂದು ಬೆಳಿಗ್ಗೆ 8 ಗಂಟೆಯಿಂದ ಮತ ಎಣಿಕೆ ನಡೆಸಿ ಫಲಿತಾಂಶ ಘೋಷಿಸಲಾಗುತ್ತದೆ ಎಂದು ಜಿಲ್ಲಾಧಿಕಾರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>