ಕೋವಿಡ್ ಹಿನ್ನೆಲೆಯಲ್ಲಿ ಗ್ರಾಮಗಳಲ್ಲಿ ಸ್ವಚ್ಛತೆ ನಿರ್ವಹಣೆಗಾಗಿ ಗ್ರಾಮ ಪಂಚಾಯಿತಿಯಿಂದ ಪ್ರತಿ ಕುಟುಂಬಕ್ಕೆ ಕಸದ ಬುಟ್ಟಿಗಳನ್ನು ನೀಡಲಾಗಿದೆ. ಆದರೆ, ಯಾವುದೇ ರೀತಿ ಕೊಟೇಷನ್ ಅಥವಾ ಟೆಂಡರ್ ಕರೆದಿಲ್ಲ. ಸಾರ್ವಜನಿಕವಾಗಿ ಪ್ರಚಾರ ಮಾಡಿಲ್ಲ. ಕೊಟೇಷನ್ ಕರೆದಂತೆ ದಾಖಲೆ ಸೃಷ್ಟಿಸಿ, ಹಣ ದುರ್ಬಳಕೆ ಮಾಡಲಾಗಿದೆ ಎಂದು ದೂರಿದರು.