<p>ಶ್ರೀನಿವಾಸಪುರ: ತಾಲ್ಲೂಕಿನ ಗೌನಿಪಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ನಾಗರತ್ನಮ್ಮ ರಾಮ್ಮೋಹನ್, ಉಪಾಧ್ಯಕ್ಷೆಯಾಗಿ ವೆಂಕಟಲಕ್ಷ್ಮಮ್ಮ ವೆಂಕಟರವಣ ಬುಧವಾರ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ.</p>.<p>ಅಧ್ಯಕ್ಷ ಸ್ಥಾನಕ್ಕೆ ಮೂವರು ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಜೆಡಿಎಸ್ ಬೆಂಬಲಿತ ನಾಗರತ್ನಮ್ಮ ರಾಮ್ಮೋಹನ್ ಒಟ್ಟು 23 ಮತಗಳ ಪೈಕಿ 13 ಮತ ಪಡೆದು ಗೆಲುವು ಸಾಧಿಸಿದ್ದಾರೆ. ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಫೌಜಿಯಾ ಖಾನಂ 9 ಮತ ಪಡೆದುಕೊಂಡಿದ್ದಾರೆ. ಜರೀನಾ ತಾಜ್ಗೆ ಶೂನ್ಯ ಮತ ಬಂದಿವೆ. ಒಂದು ಮತ ತಿರಸ್ಕೃತಗೊಂಡಿದೆ.</p>.<p>ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ವೆಂಕಟಲಕ್ಷ್ಮಮ್ಮ ವೆಂಕಟರವಣ 12 ಮತ ಪಡೆದು ಆಯ್ಕೆಯಾಗಿದ್ದಾರೆ. ಅವರ ಪ್ರತಿಸ್ಪರ್ಧಿ ವೆಂಕಟಲಕ್ಷ್ಮಮ್ಮ ಜಿ.ರಮೇಶ್ 10 ಮತ ಪಡೆದಿದ್ದಾರೆ.</p>.<p>ಚುನಾವಣಾಧಿಕಾರಿ ಎನ್.ನಾರಾಯಣಸ್ವಾಮಿ, ಪಿಡಿಒ ಗೌಸ್ಸಾಬ್ ಚುನಾಣಾ ಕಾರ್ಯನಿರ್ವಹಿಸಿದರು. ಮುಖಂಡ ಶೇಷಾದ್ರಿ, ಅರುಣ ರವಿಕುಮಾರ್, ಜಿ.ಕೆ.ನಾಗರಾಜ್, ವೆಂಕಟರವಣಪ್ಪ, ಶಂಕರಪ್ಪ, ಶಿವಣ್ಣ, ಜಿ.ಎನ್.ರೆಡ್ಡಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಶ್ರೀನಿವಾಸಪುರ: ತಾಲ್ಲೂಕಿನ ಗೌನಿಪಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷೆಯಾಗಿ ನಾಗರತ್ನಮ್ಮ ರಾಮ್ಮೋಹನ್, ಉಪಾಧ್ಯಕ್ಷೆಯಾಗಿ ವೆಂಕಟಲಕ್ಷ್ಮಮ್ಮ ವೆಂಕಟರವಣ ಬುಧವಾರ ನಡೆದ ಚುನಾವಣೆಯಲ್ಲಿ ಆಯ್ಕೆಯಾಗಿದ್ದಾರೆ.</p>.<p>ಅಧ್ಯಕ್ಷ ಸ್ಥಾನಕ್ಕೆ ಮೂವರು ಅಭ್ಯರ್ಥಿಗಳು ಸ್ಪರ್ಧಿಸಿದ್ದು, ಜೆಡಿಎಸ್ ಬೆಂಬಲಿತ ನಾಗರತ್ನಮ್ಮ ರಾಮ್ಮೋಹನ್ ಒಟ್ಟು 23 ಮತಗಳ ಪೈಕಿ 13 ಮತ ಪಡೆದು ಗೆಲುವು ಸಾಧಿಸಿದ್ದಾರೆ. ಅವರ ಪ್ರತಿಸ್ಪರ್ಧಿ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಫೌಜಿಯಾ ಖಾನಂ 9 ಮತ ಪಡೆದುಕೊಂಡಿದ್ದಾರೆ. ಜರೀನಾ ತಾಜ್ಗೆ ಶೂನ್ಯ ಮತ ಬಂದಿವೆ. ಒಂದು ಮತ ತಿರಸ್ಕೃತಗೊಂಡಿದೆ.</p>.<p>ಉಪಾಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿದ್ದ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ವೆಂಕಟಲಕ್ಷ್ಮಮ್ಮ ವೆಂಕಟರವಣ 12 ಮತ ಪಡೆದು ಆಯ್ಕೆಯಾಗಿದ್ದಾರೆ. ಅವರ ಪ್ರತಿಸ್ಪರ್ಧಿ ವೆಂಕಟಲಕ್ಷ್ಮಮ್ಮ ಜಿ.ರಮೇಶ್ 10 ಮತ ಪಡೆದಿದ್ದಾರೆ.</p>.<p>ಚುನಾವಣಾಧಿಕಾರಿ ಎನ್.ನಾರಾಯಣಸ್ವಾಮಿ, ಪಿಡಿಒ ಗೌಸ್ಸಾಬ್ ಚುನಾಣಾ ಕಾರ್ಯನಿರ್ವಹಿಸಿದರು. ಮುಖಂಡ ಶೇಷಾದ್ರಿ, ಅರುಣ ರವಿಕುಮಾರ್, ಜಿ.ಕೆ.ನಾಗರಾಜ್, ವೆಂಕಟರವಣಪ್ಪ, ಶಂಕರಪ್ಪ, ಶಿವಣ್ಣ, ಜಿ.ಎನ್.ರೆಡ್ಡಪ್ಪ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>