<p><strong>ಮಾಲೂರು</strong>: ತಾಲ್ಲೂಕಿನ ನೊಸಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಲಾಟರಿ ಪ್ರಕ್ರಿಯೆ ಮೂಲಕ ಅಧ್ಯಕ್ಷೆಯಾಗಿ ಬಿಜೆಪಿ ಬೆಂಬಲಿತ ದೀಪಿಕಾ ಹಾಗೂ ಕಾಂಗ್ರೆಸ್ ಬೆಂಬಲಿತ ಶ್ರೀಈಶ್ವರಿ ಅವರು ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿದ್ದ ಬಿಇಒ ಕೃಷ್ಣಮೂರ್ತಿ ಘೋಷಿಸಿದರು.</p>.<p>ನೊಸಗೆರೆ ಪಂಚಾಯಿತಿಯಲ್ಲಿ 18 ಸದಸ್ಯರಿದ್ದಾರೆ. ಅಧ್ಯಕ್ಷ ಸ್ಥಾನ ಅನುಸೂಚಿತ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ವಿ.ಎಸ್. ಜಯಶ್ರೀ ಮತ್ತು ದೀಪಿಕಾ ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಈಶ್ವರಿ ಮತ್ತು ಬಿ.ಎ. ಪ್ರಶಾಂತಿ ನಾಮಪತ್ರ ಸಲ್ಲಿಸಿದ್ದರು.</p>.<p>ಎರಡೂ ಕಡೆಯ ಅಭ್ಯರ್ಥಿಗಳು ತಲಾ 9 ಮತ ಪಡೆದರು. ಈ ಹಿನ್ನೆಲೆಯಲ್ಲಿ ಲಾಟರಿ ಮೂಲಕ ಆಯ್ಕೆ ಮಾಡಲಾಯಿತು.ಪಿಡಿಒ ಭಾರತಿ, ತಾ.ಪಂ ಸದಸ್ಯೆ ಲಕ್ಷ್ಮಿ ರಾಜಪ್ಪ, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಪುರ ನಾರಾಯಣಸ್ವಾಮಿ, ಕಾರ್ಯದರ್ಶಿ ಅಂಬರೀಷ್, ರಾಜಪ್ಪ, ರಮೇಶ್, ಚಿಕ್ಕಾಪುರ ನಾರಾಯಣಸ್ವಾಮಿ, ಶ್ರೀನಿವಾಸ್ ಹಾಗೂ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಾಲೂರು</strong>: ತಾಲ್ಲೂಕಿನ ನೊಸಗೆರೆ ಗ್ರಾಮ ಪಂಚಾಯಿತಿ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ ಲಾಟರಿ ಪ್ರಕ್ರಿಯೆ ಮೂಲಕ ಅಧ್ಯಕ್ಷೆಯಾಗಿ ಬಿಜೆಪಿ ಬೆಂಬಲಿತ ದೀಪಿಕಾ ಹಾಗೂ ಕಾಂಗ್ರೆಸ್ ಬೆಂಬಲಿತ ಶ್ರೀಈಶ್ವರಿ ಅವರು ಉಪಾಧ್ಯಕ್ಷೆಯಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿಯಾಗಿದ್ದ ಬಿಇಒ ಕೃಷ್ಣಮೂರ್ತಿ ಘೋಷಿಸಿದರು.</p>.<p>ನೊಸಗೆರೆ ಪಂಚಾಯಿತಿಯಲ್ಲಿ 18 ಸದಸ್ಯರಿದ್ದಾರೆ. ಅಧ್ಯಕ್ಷ ಸ್ಥಾನ ಅನುಸೂಚಿತ ಮಹಿಳೆ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ವಿ.ಎಸ್. ಜಯಶ್ರೀ ಮತ್ತು ದೀಪಿಕಾ ನಾಮಪತ್ರ ಸಲ್ಲಿಸಿದ್ದರು. ಉಪಾಧ್ಯಕ್ಷ ಸ್ಥಾನಕ್ಕೆ ಈಶ್ವರಿ ಮತ್ತು ಬಿ.ಎ. ಪ್ರಶಾಂತಿ ನಾಮಪತ್ರ ಸಲ್ಲಿಸಿದ್ದರು.</p>.<p>ಎರಡೂ ಕಡೆಯ ಅಭ್ಯರ್ಥಿಗಳು ತಲಾ 9 ಮತ ಪಡೆದರು. ಈ ಹಿನ್ನೆಲೆಯಲ್ಲಿ ಲಾಟರಿ ಮೂಲಕ ಆಯ್ಕೆ ಮಾಡಲಾಯಿತು.ಪಿಡಿಒ ಭಾರತಿ, ತಾ.ಪಂ ಸದಸ್ಯೆ ಲಕ್ಷ್ಮಿ ರಾಜಪ್ಪ, ಬಿಜೆಪಿ ತಾಲ್ಲೂಕು ಘಟಕದ ಅಧ್ಯಕ್ಷ ಪುರ ನಾರಾಯಣಸ್ವಾಮಿ, ಕಾರ್ಯದರ್ಶಿ ಅಂಬರೀಷ್, ರಾಜಪ್ಪ, ರಮೇಶ್, ಚಿಕ್ಕಾಪುರ ನಾರಾಯಣಸ್ವಾಮಿ, ಶ್ರೀನಿವಾಸ್ ಹಾಗೂ ಸದಸ್ಯರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>