<p><strong>ಬೇತಮಂಗಲ:</strong> ಸಮೀಪದ ಮೇಲಪಲ್ಲಿ ಗಂಗಮಾಂಭ ದೇವಿ ಜಾತ್ರೆ ಅಂಗವಾಗಿ ಭಾನುವಾರ ರಥೋತ್ಸವ ಹಾಗೂ ತುಲಾಭಾರ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.</p>.<p>ಜಾತ್ರೆ ಅಂಗವಾಗಿ ಮೇಲುಪಳ್ಳಿ ಗ್ರಾಮದಿಂದ ಶ್ರೀನಿವಾಸಂದ್ರದವರೆಗೂ ಮುಖ್ಯ ರಸ್ತೆಯಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ದೇಗುಲವನ್ನು ತಳಿರು ತೋರಣ, ಹೂ ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.</p>.<p>ರಥೋತ್ಸವಕ್ಕೆ ಶಾಸಕಿ ಎಂ.ರೂಪಕಲಾ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ಭಕ್ತರು ರಥಕ್ಕೆ ಬಾಳೆಹಣ್ಣು ಅರ್ಪಿಸುವ ಮೂಲಕ ತಮ್ಮ ಹರಿಕೆ ತೀರಿಸಿದರು.</p>.<p>ಜಾತ್ರೆಗೆ ಸುತ್ತಮುತ್ತಲಿನ ಗ್ರಾಮದವರು, ಆಂಧ್ರಪ್ರದೇಶದವರು ಆಗಮಿಸಿದ್ದರು. ಜೊತೆಗೆ ಬೆಳಗ್ಗೆಯಿಂದ ಸಂಜೆವರೆಗೂ ಅನ್ನಸಂತರ್ಪಣೆ ನೆರವೇರಿತು. </p>.<p>ಭಾನುವಾರ ರಾತ್ರಿ ಅಮ್ಮನವರ ತುಲಾಭಾರ ಸಂಭ್ರಮದಿಂದ ನೆರವೇರಿತು. ನೂರಾರು ಭಕ್ತರು ಆಗಮಿಸಿದ್ದರು. ಜ.25 ರಂದು ಪುಷ್ಪ ಪಲ್ಲಕ್ಕಿ, 26ರಂದು ಹಸಿ ಕರಗ, ಅಗ್ನಿಕುಂಡ ಹಾಗೂ ವಿವಿಧ ಪೂಜಾ ಕಾರ್ಯಕ್ರಮಗಳು ನೆರವೇರಲಿವೆ.</p>.<p>ರಾಧಾಕೃಷ್ಣಾರೆಡ್ಡಿ, ಜಯಪ್ರಕಾಶ್ ನಾಯ್ಡು, ಪದ್ಮನಾಭ ರೆಡ್ಡಿ, ರಾಮಪ್ಪ, ರವಿಚಂದ್ರ, ವೆಂಕಟೇಶಪ್ಪ, ಕದಿರಪ್ಪ, ಭಾಸ್ಕರ್, ಮನೋಹರ್, ರಾಜೇಂದ್ರ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೇತಮಂಗಲ:</strong> ಸಮೀಪದ ಮೇಲಪಲ್ಲಿ ಗಂಗಮಾಂಭ ದೇವಿ ಜಾತ್ರೆ ಅಂಗವಾಗಿ ಭಾನುವಾರ ರಥೋತ್ಸವ ಹಾಗೂ ತುಲಾಭಾರ ಕಾರ್ಯಕ್ರಮ ಸಂಭ್ರಮದಿಂದ ನಡೆಯಿತು.</p>.<p>ಜಾತ್ರೆ ಅಂಗವಾಗಿ ಮೇಲುಪಳ್ಳಿ ಗ್ರಾಮದಿಂದ ಶ್ರೀನಿವಾಸಂದ್ರದವರೆಗೂ ಮುಖ್ಯ ರಸ್ತೆಯಲ್ಲಿ ವಿದ್ಯುತ್ ದೀಪಾಲಂಕಾರ ಮಾಡಲಾಗಿತ್ತು. ದೇಗುಲವನ್ನು ತಳಿರು ತೋರಣ, ಹೂ ಹಾಗೂ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.</p>.<p>ರಥೋತ್ಸವಕ್ಕೆ ಶಾಸಕಿ ಎಂ.ರೂಪಕಲಾ ಪೂಜೆ ಸಲ್ಲಿಸಿ ಚಾಲನೆ ನೀಡಿದರು. ಭಕ್ತರು ರಥಕ್ಕೆ ಬಾಳೆಹಣ್ಣು ಅರ್ಪಿಸುವ ಮೂಲಕ ತಮ್ಮ ಹರಿಕೆ ತೀರಿಸಿದರು.</p>.<p>ಜಾತ್ರೆಗೆ ಸುತ್ತಮುತ್ತಲಿನ ಗ್ರಾಮದವರು, ಆಂಧ್ರಪ್ರದೇಶದವರು ಆಗಮಿಸಿದ್ದರು. ಜೊತೆಗೆ ಬೆಳಗ್ಗೆಯಿಂದ ಸಂಜೆವರೆಗೂ ಅನ್ನಸಂತರ್ಪಣೆ ನೆರವೇರಿತು. </p>.<p>ಭಾನುವಾರ ರಾತ್ರಿ ಅಮ್ಮನವರ ತುಲಾಭಾರ ಸಂಭ್ರಮದಿಂದ ನೆರವೇರಿತು. ನೂರಾರು ಭಕ್ತರು ಆಗಮಿಸಿದ್ದರು. ಜ.25 ರಂದು ಪುಷ್ಪ ಪಲ್ಲಕ್ಕಿ, 26ರಂದು ಹಸಿ ಕರಗ, ಅಗ್ನಿಕುಂಡ ಹಾಗೂ ವಿವಿಧ ಪೂಜಾ ಕಾರ್ಯಕ್ರಮಗಳು ನೆರವೇರಲಿವೆ.</p>.<p>ರಾಧಾಕೃಷ್ಣಾರೆಡ್ಡಿ, ಜಯಪ್ರಕಾಶ್ ನಾಯ್ಡು, ಪದ್ಮನಾಭ ರೆಡ್ಡಿ, ರಾಮಪ್ಪ, ರವಿಚಂದ್ರ, ವೆಂಕಟೇಶಪ್ಪ, ಕದಿರಪ್ಪ, ಭಾಸ್ಕರ್, ಮನೋಹರ್, ರಾಜೇಂದ್ರ ಇತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>