<p><strong>ಕೋಲಾರ:</strong> ‘ಸರ್ಕಾರವು ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯೆಂದು ಘೋಷಿಸಿದೆ. ಬರ ಪರಿಸ್ಥಿತಿಯ ಸಂದರ್ಭದಲ್ಲಿ ಅಂತರ್ಜಲ ವೃದ್ಧಿಗಾಗಿ ಕೆರೆಗಳ ಪುನಶ್ಚೇತನ ಹಮ್ಮಿಕೊಂಡಿರುವುದು ಶ್ಲಾಘನೀಯ’ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾ ಮಹದೇವನ್ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಜಿಲ್ಲಾಡಳಿತದ ವತಿಯಿಂದ ಕೈಗೊಂಡಿರುವ ನಗರದ ಕೋಲಾರಮ್ಮ ಅಮಾನಿ ಕೆರೆ ಪುನಶ್ಚೇತನ ಕಾಮಗಾರಿಯನ್ನು ಶುಕ್ರವಾರ ಪರಿಶೀಲಿಸಿ ಮಾತನಾಡಿ, ‘ಅಂತರ್ಜಲ ವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರವು ಜಲಾಮೃತ, ಜಲಶಕ್ತಿ ಯೋಜನೆ ಜಾರಿಗೊಳಿಸಿವೆ. ಈ ಯೋಜನೆಗಳಡಿ ಕೆರೆ, ರಾಜಕಾಲುವೆ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ’ ಎಂದರು.</p>.<p>‘ಜಿಲ್ಲೆಯಲ್ಲಿ ಪುನಶ್ಚೇತನ ಮಾಡಲು ಉದ್ದೇಶಿಸಿರುವ ಕೆರೆಗಳ ಪಟ್ಟಿ ನೀಡಿದರೆ ಅಗತ್ಯ ಅನುದಾನ ಬಿಡುಗಡೆ ಮಾಡಲಾಗುತ್ತದೆ. ಕೆ.ಸಿ ವ್ಯಾಲಿ ಯೋಜನೆ ನೀರಿನಿಂದ ಜಿಲ್ಲೆಯ ಕೆರೆಗಳು ಭರ್ತಿಯಾದರೆ ಅಂತರ್ಜಲ ಮಟ್ಟ ಸುಧಾರಿಸುತ್ತದೆ. ಇದರಿಂದ ಜಿಲ್ಲೆಯ ನೀರಿನ ಬವಣೆ ಬಗೆಹರಿಯುತ್ತದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>‘ವಿಶೇಷ ಆದ್ಯತೆ ಮೇರೆಗೆ ಜಿಲ್ಲೆಯ ಕೆರೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಕೋಲಾರಮ್ಮ ಕೆರೆಯನ್ನು ಸ್ವಚ್ಛಗೊಳಿಸಬೇಕು ಎಂಬುದು ಹಲವು ವರ್ಷಗಳ ಬೇಡಿಕೆಯಾಗಿತ್ತು. ಕೆ.ಸಿ ವ್ಯಾಲಿ ಯೋಜನೆಯಿಂದ ₹ 8 ಕೋಟಿ ಹಣ ತೆಗೆದುಕೊಂಡು ಕೆರೆ ಪುನಶ್ಚೇತನ ಕಾಮಗಾರಿ ಆರಂಭಿಸಲಾಗಿದೆ. ಜಿಲ್ಲೆಯ ಬೇರೆ ಕೆರೆಗಳ ಅಭಿವೃದ್ಧಿಗೆ ಅನುದಾನ ಮಂಜೂರು ಮಾಡಬೇಕು’ ಎಂದು ಸಂಸದ ಎಸ್.ಮುನಿಸ್ವಾಮಿ ಮನವಿ ಮಾಡಿದರು.</p>.<p>‘ನಾನು ಚುನಾವಣೆಯಲ್ಲಿ ಆಯ್ಕೆಯಾದ ದಿನದಿಂದ ನಗರದ ಜನ ಕೆರೆ ಅಭಿವೃದ್ಧಿಗೆ ಮನವಿ ಮಾಡುತ್ತಿದ್ದರು. ಕೆರೆ ಸ್ವಚ್ಛತೆಗೆ ಇದೀಗ ಕಾಲ ಕೂಡಿ ಬಂದಿದ್ದು, ಜನ ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ’ ಎಂದು ತಿಳಿಸಿದರು.</p>.<p><strong>ಸರ್ಕಾರಕ್ಕೆ ಪ್ರಸ್ತಾವ:</strong> ‘ಜಲಾಮೃತ ಯೋಜನೆಯಡಿ ಜಿಲ್ಲೆಯ 40 ಕೆರೆಗಳನ್ನು ಅಭಿವೃದ್ಧಿಪಡಿಸಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಜಲ ಶಕ್ತಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗುತ್ತಿದೆ’ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ಮಾಹಿತಿ ನೀಡಿದರು.</p>.<p>‘ಜಿಲ್ಲೆಯ 126 ಕೆರೆಗಳಿಗೆ ಆದ್ಯತೆ ಮೇರೆಗೆ ಕೆ.ಸಿ ವ್ಯಾಲಿ ಯೋಜನೆಯ ನೀರು ತುಂಬಿಸಲು ಉದ್ದೇಶಿಸಲಾಗಿದೆ. ಈಗಾಗಲೇ 20ಕ್ಕೂ ಹೆಚ್ಚು ಕೆರೆ ಭರ್ತಿಯಾಗಿವೆ. ಈ ವರ್ಷ ವಾಡಿಕೆಯಂತೆ ಮಳೆಯಾಗಿದ್ದರೆ ಶೇ 40ರಷ್ಟು ಕೆರೆಗಳು ತುಂಬುತ್ತಿದ್ದವು’ ಎಂದು ವಿವರಿಸಿದರು.</p>.<p><strong>ಮಾದರಿ ಕೆರೆಯಾಗಿಸಿ:</strong> ‘ಜಿಲ್ಲೆಯಲ್ಲಿ ನೀರಿನ ಸಮಸ್ಯೆ ನಿವಾರಣೆಗೆ ಮೊದಲ ಆದ್ಯತೆ ನೀಡಿ. ಕೆರೆಗಳಲ್ಲಿನ ಅನುಪಯುಕ್ತ ಮರಗಳನ್ನು ತೆರವುಗೊಳಿಸಬೇಕು. ಸರ್ಕಾರಿ ಖಾಲಿ ಜಾಗಗಳಲ್ಲಿ ಸಸಿಗಳನ್ನು ನೆಟ್ಟು ಪೋಷಿಸಬೇಕು. ಇದಕ್ಕೆ ಅರಣ್ಯ ಇಲಾಖೆಯವರು ಸಹಕಾರ ನೀಡಬೇಕು’ ಎಂದು ಉಮಾ ಮಹದೇವನ್ ಸೂಚಿಸಿದರು.</p>.<p>‘ಕೋಲಾರಮ್ಮ ಅಮಾನಿ ಕೆರೆಯನ್ನು ಮಾದರಿ ಕೆರೆಯಾಗಿ ಅಭಿವೃದ್ಧಿಪಡಿಸಬೇಕು. ಸ್ಥಳೀಯ ಸಂಸ್ಥೆಯಿಂದ ಸಾಧ್ಯವಾದಷ್ಟು ಅನುದಾನ ಬಳಸಿ. ಸಣ್ಣ ನೀರಾವರಿ ಇಲಾಖೆಯಲ್ಲೂ ಕೆರೆ ಅಭಿವೃದ್ಧಿ ಅನುದಾನ ಉಳಿಕೆಯಾಗಿದ್ದು, ಇದಕ್ಕೆ ಬಳಕೆ ಮಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿ.ಎಸ್.ವೆಂಕಟೇಶ್, ಉಪ ಕಾರ್ಯದರ್ಶಿ ಸಂಜೀವಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಪುಷ್ಪಲತಾ, ಉಪ ವಿಭಾಗಾಧಿಕಾರಿ ಸೋಮಶೇಖರ್, ತಹಶೀಲ್ದಾರ್ ಶೋಭಿತಾ, ನಗರಸಭೆ ಆಯುಕ್ತ ಶ್ರೀಕಾಂತ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ಸರ್ಕಾರವು ಜಿಲ್ಲೆಯನ್ನು ಬರಪೀಡಿತ ಜಿಲ್ಲೆಯೆಂದು ಘೋಷಿಸಿದೆ. ಬರ ಪರಿಸ್ಥಿತಿಯ ಸಂದರ್ಭದಲ್ಲಿ ಅಂತರ್ಜಲ ವೃದ್ಧಿಗಾಗಿ ಕೆರೆಗಳ ಪುನಶ್ಚೇತನ ಹಮ್ಮಿಕೊಂಡಿರುವುದು ಶ್ಲಾಘನೀಯ’ ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಉಮಾ ಮಹದೇವನ್ ಮೆಚ್ಚುಗೆ ವ್ಯಕ್ತಪಡಿಸಿದರು.</p>.<p>ಜಿಲ್ಲಾಡಳಿತದ ವತಿಯಿಂದ ಕೈಗೊಂಡಿರುವ ನಗರದ ಕೋಲಾರಮ್ಮ ಅಮಾನಿ ಕೆರೆ ಪುನಶ್ಚೇತನ ಕಾಮಗಾರಿಯನ್ನು ಶುಕ್ರವಾರ ಪರಿಶೀಲಿಸಿ ಮಾತನಾಡಿ, ‘ಅಂತರ್ಜಲ ವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರವು ಜಲಾಮೃತ, ಜಲಶಕ್ತಿ ಯೋಜನೆ ಜಾರಿಗೊಳಿಸಿವೆ. ಈ ಯೋಜನೆಗಳಡಿ ಕೆರೆ, ರಾಜಕಾಲುವೆ ಸ್ವಚ್ಛತೆಗೆ ಆದ್ಯತೆ ನೀಡಲಾಗಿದೆ’ ಎಂದರು.</p>.<p>‘ಜಿಲ್ಲೆಯಲ್ಲಿ ಪುನಶ್ಚೇತನ ಮಾಡಲು ಉದ್ದೇಶಿಸಿರುವ ಕೆರೆಗಳ ಪಟ್ಟಿ ನೀಡಿದರೆ ಅಗತ್ಯ ಅನುದಾನ ಬಿಡುಗಡೆ ಮಾಡಲಾಗುತ್ತದೆ. ಕೆ.ಸಿ ವ್ಯಾಲಿ ಯೋಜನೆ ನೀರಿನಿಂದ ಜಿಲ್ಲೆಯ ಕೆರೆಗಳು ಭರ್ತಿಯಾದರೆ ಅಂತರ್ಜಲ ಮಟ್ಟ ಸುಧಾರಿಸುತ್ತದೆ. ಇದರಿಂದ ಜಿಲ್ಲೆಯ ನೀರಿನ ಬವಣೆ ಬಗೆಹರಿಯುತ್ತದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>‘ವಿಶೇಷ ಆದ್ಯತೆ ಮೇರೆಗೆ ಜಿಲ್ಲೆಯ ಕೆರೆಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ. ಕೋಲಾರಮ್ಮ ಕೆರೆಯನ್ನು ಸ್ವಚ್ಛಗೊಳಿಸಬೇಕು ಎಂಬುದು ಹಲವು ವರ್ಷಗಳ ಬೇಡಿಕೆಯಾಗಿತ್ತು. ಕೆ.ಸಿ ವ್ಯಾಲಿ ಯೋಜನೆಯಿಂದ ₹ 8 ಕೋಟಿ ಹಣ ತೆಗೆದುಕೊಂಡು ಕೆರೆ ಪುನಶ್ಚೇತನ ಕಾಮಗಾರಿ ಆರಂಭಿಸಲಾಗಿದೆ. ಜಿಲ್ಲೆಯ ಬೇರೆ ಕೆರೆಗಳ ಅಭಿವೃದ್ಧಿಗೆ ಅನುದಾನ ಮಂಜೂರು ಮಾಡಬೇಕು’ ಎಂದು ಸಂಸದ ಎಸ್.ಮುನಿಸ್ವಾಮಿ ಮನವಿ ಮಾಡಿದರು.</p>.<p>‘ನಾನು ಚುನಾವಣೆಯಲ್ಲಿ ಆಯ್ಕೆಯಾದ ದಿನದಿಂದ ನಗರದ ಜನ ಕೆರೆ ಅಭಿವೃದ್ಧಿಗೆ ಮನವಿ ಮಾಡುತ್ತಿದ್ದರು. ಕೆರೆ ಸ್ವಚ್ಛತೆಗೆ ಇದೀಗ ಕಾಲ ಕೂಡಿ ಬಂದಿದ್ದು, ಜನ ಸಂಪೂರ್ಣ ಸಹಕಾರ ನೀಡುತ್ತಿದ್ದಾರೆ’ ಎಂದು ತಿಳಿಸಿದರು.</p>.<p><strong>ಸರ್ಕಾರಕ್ಕೆ ಪ್ರಸ್ತಾವ:</strong> ‘ಜಲಾಮೃತ ಯೋಜನೆಯಡಿ ಜಿಲ್ಲೆಯ 40 ಕೆರೆಗಳನ್ನು ಅಭಿವೃದ್ಧಿಪಡಿಸಲು ಸರ್ಕಾರಕ್ಕೆ ಪ್ರಸ್ತಾವ ಸಲ್ಲಿಸಲಾಗಿದೆ. ಜಲ ಶಕ್ತಿ ಯೋಜನೆಯನ್ನು ಸಮರ್ಪಕವಾಗಿ ಅನುಷ್ಠಾನಗೊಳಿಸಲಾಗುತ್ತಿದೆ’ ಎಂದು ಜಿಲ್ಲಾಧಿಕಾರಿ ಜೆ.ಮಂಜುನಾಥ್ ಮಾಹಿತಿ ನೀಡಿದರು.</p>.<p>‘ಜಿಲ್ಲೆಯ 126 ಕೆರೆಗಳಿಗೆ ಆದ್ಯತೆ ಮೇರೆಗೆ ಕೆ.ಸಿ ವ್ಯಾಲಿ ಯೋಜನೆಯ ನೀರು ತುಂಬಿಸಲು ಉದ್ದೇಶಿಸಲಾಗಿದೆ. ಈಗಾಗಲೇ 20ಕ್ಕೂ ಹೆಚ್ಚು ಕೆರೆ ಭರ್ತಿಯಾಗಿವೆ. ಈ ವರ್ಷ ವಾಡಿಕೆಯಂತೆ ಮಳೆಯಾಗಿದ್ದರೆ ಶೇ 40ರಷ್ಟು ಕೆರೆಗಳು ತುಂಬುತ್ತಿದ್ದವು’ ಎಂದು ವಿವರಿಸಿದರು.</p>.<p><strong>ಮಾದರಿ ಕೆರೆಯಾಗಿಸಿ:</strong> ‘ಜಿಲ್ಲೆಯಲ್ಲಿ ನೀರಿನ ಸಮಸ್ಯೆ ನಿವಾರಣೆಗೆ ಮೊದಲ ಆದ್ಯತೆ ನೀಡಿ. ಕೆರೆಗಳಲ್ಲಿನ ಅನುಪಯುಕ್ತ ಮರಗಳನ್ನು ತೆರವುಗೊಳಿಸಬೇಕು. ಸರ್ಕಾರಿ ಖಾಲಿ ಜಾಗಗಳಲ್ಲಿ ಸಸಿಗಳನ್ನು ನೆಟ್ಟು ಪೋಷಿಸಬೇಕು. ಇದಕ್ಕೆ ಅರಣ್ಯ ಇಲಾಖೆಯವರು ಸಹಕಾರ ನೀಡಬೇಕು’ ಎಂದು ಉಮಾ ಮಹದೇವನ್ ಸೂಚಿಸಿದರು.</p>.<p>‘ಕೋಲಾರಮ್ಮ ಅಮಾನಿ ಕೆರೆಯನ್ನು ಮಾದರಿ ಕೆರೆಯಾಗಿ ಅಭಿವೃದ್ಧಿಪಡಿಸಬೇಕು. ಸ್ಥಳೀಯ ಸಂಸ್ಥೆಯಿಂದ ಸಾಧ್ಯವಾದಷ್ಟು ಅನುದಾನ ಬಳಸಿ. ಸಣ್ಣ ನೀರಾವರಿ ಇಲಾಖೆಯಲ್ಲೂ ಕೆರೆ ಅಭಿವೃದ್ಧಿ ಅನುದಾನ ಉಳಿಕೆಯಾಗಿದ್ದು, ಇದಕ್ಕೆ ಬಳಕೆ ಮಾಡಿಕೊಳ್ಳಬೇಕು’ ಎಂದು ಸಲಹೆ ನೀಡಿದರು.</p>.<p>ಜಿಲ್ಲಾ ಪಂಚಾಯಿತಿ ಅಧ್ಯಕ್ಷ ಸಿ.ಎಸ್.ವೆಂಕಟೇಶ್, ಉಪ ಕಾರ್ಯದರ್ಶಿ ಸಂಜೀವಪ್ಪ, ಹೆಚ್ಚುವರಿ ಜಿಲ್ಲಾಧಿಕಾರಿ ಎಚ್.ಪುಷ್ಪಲತಾ, ಉಪ ವಿಭಾಗಾಧಿಕಾರಿ ಸೋಮಶೇಖರ್, ತಹಶೀಲ್ದಾರ್ ಶೋಭಿತಾ, ನಗರಸಭೆ ಆಯುಕ್ತ ಶ್ರೀಕಾಂತ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>