ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅತಿಥಿ ಶಿಕ್ಷಕರ ಬಗ್ಗೆ ಸರ್ಕಾರಕ್ಕೆ ಕಾಳಜಿ ಇಲ್ಲ: ಎಸ್.ಎನ್.ನಾರಾಯಣಸ್ವಾಮಿ

Last Updated 6 ಸೆಪ್ಟೆಂಬರ್ 2020, 3:19 IST
ಅಕ್ಷರ ಗಾತ್ರ

ಬಂಗಾರಪೇಟೆ: ಅತಿಥಿ ಶಿಕ್ಷಕರಿಗೆ ಸರ್ಕಾರ ವೇತನ ನೀಡುತ್ತಿಲ್ಲ. ಅವರ ಕುಟುಂಬ ಸಂಕಷ್ಟಕ್ಕೆ ಸಿಲುಕಿದೆ. ಕಾಯಂ ಶಿಕ್ಷಕರಿಗೂ ಸಕಾಲಕ್ಕೆ ವೇತನ ನೀಡದಿರುವುದು ಬಿಜೆಪಿ ಆಡಳಿತಕ್ಕೆ ಹಿಡಿದ ಕನ್ನಡಿಯಾಗಿದೆ ಎಂದು ಶಾಸಕ ಎಸ್.ಎನ್.ನಾರಾಯಣಸ್ವಾಮಿ ಹೇಳಿದರು.

ಪಟ್ಟಣದ ಬಾಲಕಿಯರ ಸರ್ಕಾರಿ ಜೂನಿಯರ್ ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶೈಕ್ಷಣಿಕವಾಗಿ ತಾಲ್ಲೂಕು ಈ ಬಾರಿ ಎರಡನೇ ಸ್ಥಾನದಲ್ಲಿರುವುದು ಶ್ಲಾಘನೀಯ. ಗ್ರಾಮೀಣ ಭಾಗದ ಕನಮನಹಳ್ಳಿ, ಗುಲ್ಲಹಳ್ಳಿ ಸರ್ಕಾರಿ ಶಾಲೆಗಳಲ್ಲಿ ಉತ್ತಮ ಫಲಿತಾಂಶ ಬಂದಿದೆ. ಆದರೆ ಪಟ್ಟಣದ ಶಾಲೆಗಳಲ್ಲಿ ನಿರೀಕ್ಷೆಯಂತೆ ಬಂದಿಲ್ಲ. ಈ ಬಗ್ಗೆ ಶಿಕ್ಷಕರು ಕಾಳಜಿ ವಹಿಸಬೇಕು ಎಂದರು.

ಶಿಕ್ಷಕರ ಸಂಘದ ಚುನಾವಣೆ ಆ ಚುನಾವಣೆಗೆ ಮಾತ್ರ ಸೀಮಿತವಾಗಬೇಕು. ಯಾರೇ ಗೆಲ್ಲಲಿ ಎಲ್ಲರೂ ಒಗ್ಗಟ್ಟಾಗಿರಬೇಕು. ಪರಸ್ಪರ ಮನಸ್ತಾಪ ಇರಕೂಡದು ಎಂದು ಸಲಹೆ ಮಾಡಿದರು.

33 ನಿವೃತ್ತ ಶಿಕ್ಷಕರಿಗೆ ಸನ್ಮಾನ ಮಾಡಲಾಯಿತು.

ಕಾಂಗ್ರೆಸ್ ಜಿಲ್ಲಾ ಘಟಕ ಅಧ್ಯಕ್ಷ ಕೆ.ಚಂದ್ರಾರೆಡ್ಡಿ, ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಮಹದೇವಪ್ಪ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ವೆಂಕಟೇಶಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಬಿ.ಪಿ.ಕೆಂಪಯ್ಯ, ಸರ್ಕಾರಿ ನೌಕರರ ಸಂಘದ ಅಪ್ಪಯ್ಯಗೌಡ, ಕಾರ್ಯದರ್ಶಿ ಎಲ್.ರಾಜಪ್ಪ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಆಂಜನೇಯಗೌಡ, ಪ್ರೌಢಶಾಲಾ ಶಿಕ್ಷಕರ ಸಂಘದ ವೆಂಕಟೇಶಗೌಡ, ಪ್ರೇಮಲತಾ, ಸಬ್ಇನ್‌ಸ್ಪೆಕ್ಟರ್ ಜಗದೀಶ್ ರೆಡ್ಡಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT