<p>ಕೋಲಾರ: ಗುರು ಪೂರ್ಣಿಮೆ ಅಂಗವಾಗಿ ನಗರದ ಸಾಯಿಬಾಬಾ ಮಂದಿರದಲ್ಲಿ ಗುರುವಾರ ಗುರುವಿನ ದರ್ಶನಕ್ಕಾಗಿ ಭಕ್ತಸಾಗರವೇ ಸೇರಿತ್ತು. ದಿನವಿಡೀ ವಿಶೇಷ ಪೂಜೆ, ವಾದ್ಯಗೋಷ್ಠಿ, ಪ್ರಸಾದ ವಿತರಣೆ, ಅನ್ನದಾಸೋಹ ನಡೆಯಿತು.</p><p>ಮುಂಜಾನೆಯಿಂದಲೇ ಗುರುವಿನ ಕೃಪೆ ಪಡೆಯಲು ಸಹಸ್ರಾರು ಮಂದಿ ಸರದಿ ಸಾಲಿನಲ್ಲಿ ನಿಂತಿದ್ದರು. ಬಾಬಾ ಮಂದಿರದಿಂದ ರೈಲ್ವೆ ನಿಲ್ದಾಣದವರೆಗೆ ಆ ಸಾಲು ಬೆಳೆದಿತ್ತು. ಮುಂಜಾನೆಯ ಅಭಿಷೇಕ, ಗುರು ಭಜನೆಯೊಂದಿಗೆ ಪೂಜಾ ಕಾರ್ಯಕ್ರಮಗಳು ಆರಂಭಗೊಂಡಿತು. ದೇವಾಲಯವನ್ನು ವಿವಿಧ ರೀತಿಯ ಹೂಗಳಿಂದ ವಿಶಿಷ್ಟವಾಗಿ ಅಲಂಕಾರ ಮಾಡಲಾಗಿತ್ತು.</p>.<p>ಭಕ್ತರ ಅನುಕೂಲಕ್ಕಾಗಿ ಹಾಗೂ ದರ್ಶನಕ್ಕೆ ಬಂದ ಸಹಸ್ರಾರು ಮಂದಿಯನ್ನು ನಿಯಂತ್ರಿಸಲು ಮಂದಿರದ ಮುಂಭಾಗ ಬ್ಯಾರಿಕೇಡ್ ನಿರ್ಮಿಸಲಾಗಿತ್ತು. ಪೊಲೀಸರು ನಿಗಾ ವಹಿಸಿದ್ದರು. ಭಕ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.</p>.<p>25 ಸಾವಿರಕ್ಕೂ ಅಧಿಕ ಮಂದಿ ಮಂದಿರಕ್ಕೆ ಬಂದು ಸಾಯಿಬಾಬಾನ ದರ್ಶನ ಪಡೆದರು. ಎಲ್ಲರಿಗೂ ಹಬ್ಬದೂಟ ಬಡಿಸಲಾಯಿತು. ಸಮೀಪದ ರೈಲು ನಿಲ್ದಾಣದ ಮುಂಭಾಗದ ಮೈದಾನದಲ್ಲಿ ಅಪೆಕ್ಸ್ ಬ್ಯಾಂಕ್ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕ ಬ್ಯಾಲಹಳ್ಳಿ ಗೋವಿಂದಗೌಡ ನೇತೃತ್ವ ವಹಿಸಿದ್ದರು.</p>.<p>ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ತಮ್ಮ ಬೆಂಬಲಿಗರೊಂದಿಗೆ ದೇವಾಲಯಕ್ಕೆ ಆಗಮಿಸಿ 40 ನಿಮಿಷ ವಿಶೇಷ ಪೂಜೆ ಸಲ್ಲಿಸಿದರು. ಮುಖಂಡರಾದ ಊರುಬಾಗಿಲು ಶ್ರೀನಿವಾಸ್, ಪ್ರಸಾದ್ಬಾಬು, ಕೆ.ಜಯದೇವ್ ಇದ್ದರು.</p>.<p>ನಗರದ ಬ್ರಾಹ್ಮಣರ ಬೀದಿಯ ರಾಘವೇಂದ್ರಸ್ವಾಮಿ ಮಠದಲ್ಲಿ ಗುರುಪೂರ್ಣಿಮೆ ನಿಮಿತ್ತ ರಾಯರ ಬೃಂದಾನವಕ್ಕೆ ವಿಶೇಷ ಪೂಜೆ, ಹೂವಿನ ಅಲಂಕಾರ ಮಾಡಲಾಗಿತ್ತು. ನೂರಾರು ಮಂದಿ ಭಕ್ತರು ಆಗಮಿಸಿ ಗುರುಗಳ ದರ್ಶನ ಪಡೆದರು. ನಗರದ ಕೆಇಬಿ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ಗುರು ಪೂರ್ಣಿಮೆ ಅಂಗವಾಗಿ ನಗರದ ಸಾಯಿಬಾಬಾ ಮಂದಿರದಲ್ಲಿ ಗುರುವಾರ ಗುರುವಿನ ದರ್ಶನಕ್ಕಾಗಿ ಭಕ್ತಸಾಗರವೇ ಸೇರಿತ್ತು. ದಿನವಿಡೀ ವಿಶೇಷ ಪೂಜೆ, ವಾದ್ಯಗೋಷ್ಠಿ, ಪ್ರಸಾದ ವಿತರಣೆ, ಅನ್ನದಾಸೋಹ ನಡೆಯಿತು.</p><p>ಮುಂಜಾನೆಯಿಂದಲೇ ಗುರುವಿನ ಕೃಪೆ ಪಡೆಯಲು ಸಹಸ್ರಾರು ಮಂದಿ ಸರದಿ ಸಾಲಿನಲ್ಲಿ ನಿಂತಿದ್ದರು. ಬಾಬಾ ಮಂದಿರದಿಂದ ರೈಲ್ವೆ ನಿಲ್ದಾಣದವರೆಗೆ ಆ ಸಾಲು ಬೆಳೆದಿತ್ತು. ಮುಂಜಾನೆಯ ಅಭಿಷೇಕ, ಗುರು ಭಜನೆಯೊಂದಿಗೆ ಪೂಜಾ ಕಾರ್ಯಕ್ರಮಗಳು ಆರಂಭಗೊಂಡಿತು. ದೇವಾಲಯವನ್ನು ವಿವಿಧ ರೀತಿಯ ಹೂಗಳಿಂದ ವಿಶಿಷ್ಟವಾಗಿ ಅಲಂಕಾರ ಮಾಡಲಾಗಿತ್ತು.</p>.<p>ಭಕ್ತರ ಅನುಕೂಲಕ್ಕಾಗಿ ಹಾಗೂ ದರ್ಶನಕ್ಕೆ ಬಂದ ಸಹಸ್ರಾರು ಮಂದಿಯನ್ನು ನಿಯಂತ್ರಿಸಲು ಮಂದಿರದ ಮುಂಭಾಗ ಬ್ಯಾರಿಕೇಡ್ ನಿರ್ಮಿಸಲಾಗಿತ್ತು. ಪೊಲೀಸರು ನಿಗಾ ವಹಿಸಿದ್ದರು. ಭಕ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡಬೇಕಾಯಿತು.</p>.<p>25 ಸಾವಿರಕ್ಕೂ ಅಧಿಕ ಮಂದಿ ಮಂದಿರಕ್ಕೆ ಬಂದು ಸಾಯಿಬಾಬಾನ ದರ್ಶನ ಪಡೆದರು. ಎಲ್ಲರಿಗೂ ಹಬ್ಬದೂಟ ಬಡಿಸಲಾಯಿತು. ಸಮೀಪದ ರೈಲು ನಿಲ್ದಾಣದ ಮುಂಭಾಗದ ಮೈದಾನದಲ್ಲಿ ಅಪೆಕ್ಸ್ ಬ್ಯಾಂಕ್ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕ ಬ್ಯಾಲಹಳ್ಳಿ ಗೋವಿಂದಗೌಡ ನೇತೃತ್ವ ವಹಿಸಿದ್ದರು.</p>.<p>ಆಹಾರ ಸಚಿವ ಕೆ.ಎಚ್.ಮುನಿಯಪ್ಪ, ತಮ್ಮ ಬೆಂಬಲಿಗರೊಂದಿಗೆ ದೇವಾಲಯಕ್ಕೆ ಆಗಮಿಸಿ 40 ನಿಮಿಷ ವಿಶೇಷ ಪೂಜೆ ಸಲ್ಲಿಸಿದರು. ಮುಖಂಡರಾದ ಊರುಬಾಗಿಲು ಶ್ರೀನಿವಾಸ್, ಪ್ರಸಾದ್ಬಾಬು, ಕೆ.ಜಯದೇವ್ ಇದ್ದರು.</p>.<p>ನಗರದ ಬ್ರಾಹ್ಮಣರ ಬೀದಿಯ ರಾಘವೇಂದ್ರಸ್ವಾಮಿ ಮಠದಲ್ಲಿ ಗುರುಪೂರ್ಣಿಮೆ ನಿಮಿತ್ತ ರಾಯರ ಬೃಂದಾನವಕ್ಕೆ ವಿಶೇಷ ಪೂಜೆ, ಹೂವಿನ ಅಲಂಕಾರ ಮಾಡಲಾಗಿತ್ತು. ನೂರಾರು ಮಂದಿ ಭಕ್ತರು ಆಗಮಿಸಿ ಗುರುಗಳ ದರ್ಶನ ಪಡೆದರು. ನಗರದ ಕೆಇಬಿ ಗಣಪತಿ ದೇವಾಲಯದಲ್ಲಿ ವಿಶೇಷ ಪೂಜೆ ನಡೆಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>