ಇದೇ ಸಂದರ್ಭದಲ್ಲಿ ಶಿಕ್ಷಕರ ಸಂಘದ ಪದಾಧಿಕಾರಿಗಳು, ಅಧಿಕಾರಿಗಳು ಬದಲಾದರು. ಇದರಿಂದಾಗಿ ಕಾಮಗಾರಿ ಕುಂಠಿತಗೊಂಡಿತು. ಗುರುಭವನ ನಿಲ್ಲಬಾರದು ಎಂಬ ನಿಟ್ಟಿನಲ್ಲಿ ಪುನಃ ಶಿಕ್ಷಕರ ಸಂಘದ ಪದಾಧಿಕಾರಿಗಳು ಪ್ರಯತ್ನ ಮುಂದುವರಿಸಿದರು. ಅಂದಿನ ಶಾಸಕ ವೈ.ಸಂಪಂಗಿ ₹10 ಲಕ್ಷ ಅನುದಾನ ನೀಡಿದರು. ಜಿಲ್ಲಾ ಪಂಚಾಯಿತಿಯಿಂದ ₹2.50 ಲಕ್ಷ ಅನುದಾನ ಬಂದಿತು.