<p><strong>ಕೋಲಾರ:</strong> ‘ರೈತರ ಹೆಸರಿನಲ್ಲಿ ಹೋರಾಟ ಮಾಡುತ್ತಿರುವವರು ಡೋಂಗಿಗಳು. ಅವರದು ಹೊಟ್ಟೆ ಪಾಡಿನ ರಾಜಕೀಯ’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರೈತ ಮುಖಂಡರನ್ನು ಕಟುವಾಗಿ ಟೀಕಿಸಿದ್ದಾರೆ.</p>.<p>ನಗರದಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಭೂ ಸುಧಾರಣೆ ಕಾಯ್ದೆ ವಿರುದ್ಧ ಹೋರಾಟ ಮಾಡುತ್ತಿರುವ ರೈತ ಮುಖಂಡರು ಮೊದಲು ತಮ್ಮ ಹುಳುಕು ಮುಚ್ಚಿಕೊಳ್ಳಲಿ. ಅವರ ಆಟ ನನ್ನ ಬಳಿ ನಡೆಯಲ್ಲ’ ಎಂದು ಗುಡುಗಿದರು.</p>.<p>‘ರೈತ ಮುಖಂಡರು ನನ್ನ ಬಗ್ಗೆ ಎಚ್ಚರಿಕೆಯಿಂದ ಮಾತನಾಡಬೇಕು. ಅವರಿಂದ ನಾನು ಪಾಠ ಕಲಿಯಬೇಕಿಲ್ಲ. ದೇವೇಗೌಡರು ಮತ್ತು ನಾನು ರಾಜಕೀಯ ಬಿಟ್ಟು ಹೋಗಬೇಕೆಂದು ಹೇಳಲು ಅವರು ಯಾರು? ಅವರಿಂದ ರಾಜಕೀಯಕ್ಕೆ ಬಂದಿದ್ದೇವಾ? ಆ ಚಿಲ್ಲರೆಗಳಿಗೆ ಉತ್ತರಿಸುವ ಅಗತ್ಯವಿಲ್ಲ’ ಎಂದರು.</p>.<p><strong>ಕಾವೇರಿ ನೀರು ಉಳಿದಿದ್ದು ಯಾರಿಂದ?:</strong> ಕಾವೇರಿ ನದಿ ನೀರು ಉಳಿಸಿದ್ದು, 30 ಟಿಎಂಸಿ ಹೆಚ್ಚುವರಿ ನೀರು ಬಂದಿರುವುದು ದೇವೇಗೌಡರ ಹೋರಾಟದ ಫಲ.ರಾಜ್ಯಕ್ಕೆ ಹೆಚ್ಚುವರಿ ನೀರು ಬಂದದ್ದು ರೈತ ಮುಖಂಡರ ಹೋರಾಟದಿಂದಲ್ಲ, ದೇವೇಗೌಡರಿಂದ’ ಎಂದು ಅವರು ಕಿಡಿಕಾರಿದರು.</p>.<p>‘ದೇವೇಗೌಡರು ರೈತರಿಗೆ ಏನು ಅನ್ಯಾಯ ಮಾಡಿದ್ದಾರೆ? ಎಂದು ಪ್ರಶ್ನಿಸಿದ ಕುಮಾರಸ್ವಾಮಿ,‘ಅವರೇನೂ ರೈತರಿಗೆ ವಿಷ ಕೊಟ್ಟಿಲ್ಲ’ ಎಂದು ಹೇಳಿದರು.</p>.<p><strong>ರೈತ ವಿರೋಧಿ ಹಣೆಪಟ್ಟಿ ಕಟ್ಟಲು ಪಿತೂರಿ:</strong>ಕೆಲ ಸಂಘಟನೆಗಳು ಮತ್ತು ವ್ಯಕ್ತಿಗಳು ಜೆಡಿಎಸ್ ಪಕ್ಷಕ್ಕೆ ರೈತ ವಿರೋಧಿ ಎಂಬ ಪಟ್ಟ ಕಟ್ಟಲು ಹೊರಟಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ನಾನು ಮುಖ್ಯಮಂತ್ರಿಯಾಗಿದ್ದಾಗ ಪ್ರತಿ ತಿಂಗಳು ರೈತ ಮುಖಂಡರ ಸಭೆ ನಡೆಸಿ ಸಮಸ್ಯೆಗೆ ಸ್ಪಂದಿಸಿದ್ದೇನೆ. 14 ತಿಂಗಳಲ್ಲಿ ರೈತರ ₹ 25 ಸಾವಿರ ಕೋಟಿ ಸಾಲ ಮನ್ನಾ ಮಾಡಿದೆ. ಆಗ ಯಾವೊಬ್ಬ ರೈತ ಮುಖಂಡನೂ ನನ್ನ ಪರವಾಗಿ ಮಾತನಾಡಲಿಲ್ಲ. ಆದರೆ, ಈಗ ಜೆಡಿಎಸ್ ಪಕ್ಷ ರೈತರಿಗೆ ದ್ರೋಹ ಮಾಡಿದೆ ಎಂದು ಆರೋಪಿಸಲಾಗುತ್ತಿದೆ’ ಎಂದು ಹರಿಹಾಯ್ದರು.</p>.<p>ಜೆಡಿಎಸ್ ರೈತರ ಪರವಾಗಿರುವ ಪಕ್ಷ. ರೈತ ಮುಖಂಡರು ಬೆಂಬಲ ಕೊಡದಿದ್ದರೂ ರೈತರ ಪರವಾಗಿ ಹೋರಾಟ ಮಾಡಿದೆ. ಪಕ್ಷ ಮುಂದೆಯೂ ರೈತರ ಪರವಾಗಿ ಇರುತ್ತದೆ. ಈ ವಿಚಾರವಾಗಿ ರೈತ ಮುಖಂಡರು ಬಹಿರಂಗ ಚರ್ಚೆಗೆ ಬರಲಿ ಎಂದು ಕುಮಾರಸ್ವಾಮಿ ಸವಾಲು ಹಾಕಿದರು.</p>.<p><strong>ಕಾಂಗ್ರೆಸ್ ಶಾಲಿಗೆ ಬೆಲೆಯಿಲ್ಲ</strong></p>.<p>‘ಕಾಂಗ್ರೆಸ್ ಮುಖಂಡರಂತೆ ನಾನು ಡಬಲ್ ಗೇಮ್ ರಾಜಕೀಯ ಮಾಡಲ್ಲ. ಮುಖ್ಯಮಂತ್ರಿ ಯಡಿಯೂರಪ್ಪರನ್ನು ಅವರ ಅಧಿಕೃತ ಕಚೇರಿಯಲ್ಲಿ ಭೇಟಿಯಾಗಿದ್ದೇನೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರಂತೆ ಮಧ್ಯ ರಾತ್ರಿ ಗುಟ್ಟಿನಲ್ಲಿ ಭೇಟಿಯಾಗಿಲ್ಲ’ ಎಂದು ಎಚ್.ಡಿ. ಕುಮಾರಸ್ವಾಮಿ ಕುಟುಕಿದ್ದಾರೆ.</p>.<p>‘ಕಾಂಗ್ರೆಸ್ ಶಾಲಿಗೆ ಈಗ ಬೆಲೆಯಿಲ್ಲ. ಹೀಗಾಗಿ ಕಾಂಗ್ರೆಸ್ ಮುಖಂಡರು ಪಕ್ಷದ ಶಾಲು ತೆಗೆದಿಟ್ಟು ರೈತರ ಹಸಿರು ಶಾಲು ಹಾಕಿಕೊಂಡಿದ್ದಾರೆ. ಜೆಡಿಎಸ್ ಯಾವುದೇ ಪಕ್ಷದ ಜತೆ ಹೊಂದಾಣಿಕೆ ಮಾಡಿಕೊಂಡಿಲ್ಲ. ಹೊಂದಾಣಿಕೆ ರಾಜಕೀಯದ ಅಗತ್ಯವೂ ಇಲ್ಲ’ ಎಂದು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ರೈತರ ಹೆಸರಿನಲ್ಲಿ ಹೋರಾಟ ಮಾಡುತ್ತಿರುವವರು ಡೋಂಗಿಗಳು. ಅವರದು ಹೊಟ್ಟೆ ಪಾಡಿನ ರಾಜಕೀಯ’ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ರೈತ ಮುಖಂಡರನ್ನು ಕಟುವಾಗಿ ಟೀಕಿಸಿದ್ದಾರೆ.</p>.<p>ನಗರದಲ್ಲಿ ಬುಧವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ‘ಭೂ ಸುಧಾರಣೆ ಕಾಯ್ದೆ ವಿರುದ್ಧ ಹೋರಾಟ ಮಾಡುತ್ತಿರುವ ರೈತ ಮುಖಂಡರು ಮೊದಲು ತಮ್ಮ ಹುಳುಕು ಮುಚ್ಚಿಕೊಳ್ಳಲಿ. ಅವರ ಆಟ ನನ್ನ ಬಳಿ ನಡೆಯಲ್ಲ’ ಎಂದು ಗುಡುಗಿದರು.</p>.<p>‘ರೈತ ಮುಖಂಡರು ನನ್ನ ಬಗ್ಗೆ ಎಚ್ಚರಿಕೆಯಿಂದ ಮಾತನಾಡಬೇಕು. ಅವರಿಂದ ನಾನು ಪಾಠ ಕಲಿಯಬೇಕಿಲ್ಲ. ದೇವೇಗೌಡರು ಮತ್ತು ನಾನು ರಾಜಕೀಯ ಬಿಟ್ಟು ಹೋಗಬೇಕೆಂದು ಹೇಳಲು ಅವರು ಯಾರು? ಅವರಿಂದ ರಾಜಕೀಯಕ್ಕೆ ಬಂದಿದ್ದೇವಾ? ಆ ಚಿಲ್ಲರೆಗಳಿಗೆ ಉತ್ತರಿಸುವ ಅಗತ್ಯವಿಲ್ಲ’ ಎಂದರು.</p>.<p><strong>ಕಾವೇರಿ ನೀರು ಉಳಿದಿದ್ದು ಯಾರಿಂದ?:</strong> ಕಾವೇರಿ ನದಿ ನೀರು ಉಳಿಸಿದ್ದು, 30 ಟಿಎಂಸಿ ಹೆಚ್ಚುವರಿ ನೀರು ಬಂದಿರುವುದು ದೇವೇಗೌಡರ ಹೋರಾಟದ ಫಲ.ರಾಜ್ಯಕ್ಕೆ ಹೆಚ್ಚುವರಿ ನೀರು ಬಂದದ್ದು ರೈತ ಮುಖಂಡರ ಹೋರಾಟದಿಂದಲ್ಲ, ದೇವೇಗೌಡರಿಂದ’ ಎಂದು ಅವರು ಕಿಡಿಕಾರಿದರು.</p>.<p>‘ದೇವೇಗೌಡರು ರೈತರಿಗೆ ಏನು ಅನ್ಯಾಯ ಮಾಡಿದ್ದಾರೆ? ಎಂದು ಪ್ರಶ್ನಿಸಿದ ಕುಮಾರಸ್ವಾಮಿ,‘ಅವರೇನೂ ರೈತರಿಗೆ ವಿಷ ಕೊಟ್ಟಿಲ್ಲ’ ಎಂದು ಹೇಳಿದರು.</p>.<p><strong>ರೈತ ವಿರೋಧಿ ಹಣೆಪಟ್ಟಿ ಕಟ್ಟಲು ಪಿತೂರಿ:</strong>ಕೆಲ ಸಂಘಟನೆಗಳು ಮತ್ತು ವ್ಯಕ್ತಿಗಳು ಜೆಡಿಎಸ್ ಪಕ್ಷಕ್ಕೆ ರೈತ ವಿರೋಧಿ ಎಂಬ ಪಟ್ಟ ಕಟ್ಟಲು ಹೊರಟಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ನಾನು ಮುಖ್ಯಮಂತ್ರಿಯಾಗಿದ್ದಾಗ ಪ್ರತಿ ತಿಂಗಳು ರೈತ ಮುಖಂಡರ ಸಭೆ ನಡೆಸಿ ಸಮಸ್ಯೆಗೆ ಸ್ಪಂದಿಸಿದ್ದೇನೆ. 14 ತಿಂಗಳಲ್ಲಿ ರೈತರ ₹ 25 ಸಾವಿರ ಕೋಟಿ ಸಾಲ ಮನ್ನಾ ಮಾಡಿದೆ. ಆಗ ಯಾವೊಬ್ಬ ರೈತ ಮುಖಂಡನೂ ನನ್ನ ಪರವಾಗಿ ಮಾತನಾಡಲಿಲ್ಲ. ಆದರೆ, ಈಗ ಜೆಡಿಎಸ್ ಪಕ್ಷ ರೈತರಿಗೆ ದ್ರೋಹ ಮಾಡಿದೆ ಎಂದು ಆರೋಪಿಸಲಾಗುತ್ತಿದೆ’ ಎಂದು ಹರಿಹಾಯ್ದರು.</p>.<p>ಜೆಡಿಎಸ್ ರೈತರ ಪರವಾಗಿರುವ ಪಕ್ಷ. ರೈತ ಮುಖಂಡರು ಬೆಂಬಲ ಕೊಡದಿದ್ದರೂ ರೈತರ ಪರವಾಗಿ ಹೋರಾಟ ಮಾಡಿದೆ. ಪಕ್ಷ ಮುಂದೆಯೂ ರೈತರ ಪರವಾಗಿ ಇರುತ್ತದೆ. ಈ ವಿಚಾರವಾಗಿ ರೈತ ಮುಖಂಡರು ಬಹಿರಂಗ ಚರ್ಚೆಗೆ ಬರಲಿ ಎಂದು ಕುಮಾರಸ್ವಾಮಿ ಸವಾಲು ಹಾಕಿದರು.</p>.<p><strong>ಕಾಂಗ್ರೆಸ್ ಶಾಲಿಗೆ ಬೆಲೆಯಿಲ್ಲ</strong></p>.<p>‘ಕಾಂಗ್ರೆಸ್ ಮುಖಂಡರಂತೆ ನಾನು ಡಬಲ್ ಗೇಮ್ ರಾಜಕೀಯ ಮಾಡಲ್ಲ. ಮುಖ್ಯಮಂತ್ರಿ ಯಡಿಯೂರಪ್ಪರನ್ನು ಅವರ ಅಧಿಕೃತ ಕಚೇರಿಯಲ್ಲಿ ಭೇಟಿಯಾಗಿದ್ದೇನೆ. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರಂತೆ ಮಧ್ಯ ರಾತ್ರಿ ಗುಟ್ಟಿನಲ್ಲಿ ಭೇಟಿಯಾಗಿಲ್ಲ’ ಎಂದು ಎಚ್.ಡಿ. ಕುಮಾರಸ್ವಾಮಿ ಕುಟುಕಿದ್ದಾರೆ.</p>.<p>‘ಕಾಂಗ್ರೆಸ್ ಶಾಲಿಗೆ ಈಗ ಬೆಲೆಯಿಲ್ಲ. ಹೀಗಾಗಿ ಕಾಂಗ್ರೆಸ್ ಮುಖಂಡರು ಪಕ್ಷದ ಶಾಲು ತೆಗೆದಿಟ್ಟು ರೈತರ ಹಸಿರು ಶಾಲು ಹಾಕಿಕೊಂಡಿದ್ದಾರೆ. ಜೆಡಿಎಸ್ ಯಾವುದೇ ಪಕ್ಷದ ಜತೆ ಹೊಂದಾಣಿಕೆ ಮಾಡಿಕೊಂಡಿಲ್ಲ. ಹೊಂದಾಣಿಕೆ ರಾಜಕೀಯದ ಅಗತ್ಯವೂ ಇಲ್ಲ’ ಎಂದು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>