‘ಈ ಹಿಂದೆ ಗ್ರಾಮಗಳಲ್ಲಿ ಕಾಯಿಲೆ ಬಂದರೆ ಗುಳೆ ಹೋಗುವ ಪರಿಸ್ಥಿತಿಯಿತ್ತು. ಕಾಯಿಲೆಯ ಹಾಗೂ ಸಕಾಲಕ್ಕೆ ಚಿಕಿತ್ಸೆ ಪಡೆಯುವ ಅರಿವಿಲ್ಲದೆ ಅನೇಕರು ಸಾಯುತ್ತಿದ್ದರು. ಆದರೆ, ಈಗ ಕಾಲ ಬದಲಾಗಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಆರೋಗ್ಯ ಸೇವೆ ಕಲ್ಪಿಸಲು ಸರ್ಕಾರಗಳು ಒತ್ತು ನೀಡುತ್ತಿವೆ. ಆರೋಗ್ಯವಂತ ಸಮಾಜ ನಿರ್ಮಾಣಕ್ಕಾಗಿ ವಿವಿಧ ಯೋಜನೆಗಳನ್ನು ರೂಪಿಸಲಾಗಿದೆ’ ಎಂದು ವಿವರಿಸಿದರು.