ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೊರೊನಾ ಸೋಂಕಿನ ಓಟಕ್ಕೆ ಬೆಚ್ಚಿದ ಆರೋಗ್ಯ ಇಲಾಖೆ

Last Updated 6 ಮೇ 2021, 15:16 IST
ಅಕ್ಷರ ಗಾತ್ರ

ಕೋಲಾರ: ಜಿಲ್ಲೆಯಲ್ಲಿ ಕೋವಿಡ್‌ 2ನೇ ಅಲೆಯ ಆರ್ಭಟ ಮುಂದುವರಿದಿದ್ದು, ಸೋಂಕಿನ ಓಟಕ್ಕೆ ಆರೋಗ್ಯ ಇಲಾಖೆ ಬೆಚ್ಚಿಬಿದ್ದಿದೆ.

ಕೊರೊನಾ ಸೋಂಕಿತರ ಸಂಖ್ಯೆ ಏರು ಗತಿಯಲ್ಲೇ ಸಾಗಿದ್ದು, ಜಿಲ್ಲೆಯ ಜನರು ಸೋಂಕಿನ ರುದ್ರನರ್ತನಕ್ಕೆ ಆತಂಕಗೊಂಡಿದ್ದಾರೆ. ಹೊಸದಾಗಿ 756 ಮಂದಿಗೆ ಸೋಂಕು ಹರಡಿರುವುದು ಗುರುವಾರ ಖಚಿತವಾಗಿದ್ದು, ಸಕ್ರಿಯ ಸೋಂಕಿತರ ಸಂಖ್ಯೆ 4 ಸಾವಿರದ ಗಡಿ ದಾಟಿದೆ.

ಕೋಲಾರ ತಾಲ್ಲೂಕಿನಲ್ಲಿ ಅತಿ ಹೆಚ್ಚು 276 ಮಂದಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಉಳಿದಂತೆ ಮಾಲೂರು ತಾಲ್ಲೂಕಿನ 139 ಮಂದಿಗೆ, ಬಂಗಾರಪೇಟೆ ತಾಲ್ಲೂಕಿನ 113 ಮಂದಿಗೆ, ಕೆಜಿಎಫ್‌ ತಾಲ್ಲೂಕಿನ 119 ಮಂದಿಗೆ, ಮುಳಬಾಗಿಲು ತಾಲ್ಲೂಕಿನ 71 ಮಂದಿಗೆ ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 38 ಮಂದಿಗೆ ಸೋಂಕು ತಗುಲಿದೆ.

ಈ ಸೋಂಕಿತರ ಮನೆ ಹಾಗೂ ಸುತ್ತಮುತ್ತಲ ಪ್ರದೇಶದಲ್ಲಿ ಸೋಂಕು ನಿವಾರಕ ದ್ರಾವಣ ಸಿಂಪಡಿಸಲಾಯಿತು. ಸೋಂಕಿತರ ಸಂಪರ್ಕಕ್ಕೆ ಬಂದ ವ್ಯಕ್ತಿಗಳನ್ನು ಪತ್ತೆ ಹಚ್ಚಿ ಕ್ವಾರಂಟೈನ್‌ ಮಾಡಲಾಗಿದೆ. 4ಕ್ಕಿಂತ ಹೆಚ್ಚು ಸೋಂಕಿತರಿರುವ ಗ್ರಾಮ ಹಾಗೂ ಬಡಾವಣೆಗಳನ್ನು ಆರೋಗ್ಯ ಇಲಾಖೆಯು ಸೀಲ್‌ಡೌನ್‌ ಮಾಡಿದೆ.

ಕೊಂಚ ಏರಿಕೆ: ಕಳೆದ ನಾಲ್ಕೈದು ದಿನಗಳಿಗೆ ಹೋಲಿಸಿದರೆ ಗುಣಮುಖವಾಗುತ್ತಿರುವ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದೆ. ಜಿಲ್ಲೆಯ ಕೋವಿಡ್‌ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸೋಂಕಿತರ ಪೈಕಿ 741 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಮನೆಗೆ ಮರಳಿದರು.

ಕೋಲಾರ ತಾಲ್ಲೂಕಿನ 395 ಮಂದಿ, ಮಾಲೂರು ತಾಲ್ಲೂಕಿನ 140, ಬಂಗಾರಪೇಟೆ ತಾಲ್ಲೂಕಿನ 49, ಕೆಜಿಎಫ್‌ ತಾಲ್ಲೂಕಿನ 69, ಮುಳಬಾಗಿಲು ತಾಲ್ಲೂಕಿನ 35 ಹಾಗೂ ಶ್ರೀನಿವಾಸಪುರ ತಾಲ್ಲೂಕಿನ 53 ಮಂದಿಯನ್ನು ಆಸ್ಪತ್ರೆಯಿಂದ ಮನೆಗೆ ಕಳುಹಿಸಲಾಯಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT