<p><strong>ಮುಳಬಾಗಿಲು</strong>: ಮೆದುಳು ಜ್ವರ ಮಾರಣಾಂತಿಕವಾಗಿದ್ದು, ಈ ಜ್ವರದ ಕುರಿತು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು ಎಂದು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಸಿ. ಸುಗುಣಾ ಹೇಳಿದರು.</p>.<p>ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ತಾಲ್ಲೂಕು ಆರೋಗ್ಯ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಮೆದುಳು ಜ್ವರ ನಿಯಂತ್ರಣ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಜನತೆಗೆ ಮೆದುಳು ಜ್ವರದ ಬಗ್ಗೆ ತಿಳಿವಳಿಕೆ ಇಲ್ಲದ ಕಾರಣ ಪ್ರಾಣಾಪಾಯ ಸಂಭವಿಸುತ್ತಿವೆ. ಆದ್ದರಿಂದ ಪ್ರತಿಯೊಬ್ಬರೂ ಜ್ವರದ ಲಕ್ಷಣಗಳು ಕಂಡು ಬಂದರೆ ವೈದ್ಯರನ್ನು ಸಂಪರ್ಕಿಸಿ ರಕ್ತ ಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಹೇಳಿದರು.</p>.<p>ಸಾಮಾನ್ಯವಾಗಿ ಸೆಪ್ಟೆಂಬರ್ ತಿಂಗಳಿನಿಂದ ಡಿಸೆಂಬರ್ವರೆಗೂ ಮೆದುಳು ಜ್ವರ ಕಾಣಿಸಿಕೊಳ್ಳುವ ಕಾಲಾವಧಿಯಾಗಿದೆ. ಆದ್ದರಿಂದ ಜ್ವರ, ಕತ್ತು ಬಿಗಿಯುವುದು, ಮೈನಡುಕ ಸೇರಿದಂತೆ ಇತರೆ ಯಾವುದೇ ರೀತಿಯ ಲಕ್ಷಣಗಳು ಕಂಡು ಬಂದರೆ ಕೂಡಲೇ ವೈದ್ಯರನ್ನು ಸಂಪರ್ಕಿಸಬೇಕು ಎಂದು ಸಲಹೆ ನೀಡಿದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸರ್ವೇಶ್ ಮಾತನಾಡಿ ಮೆದುಳು ಜ್ವರಕ್ಕಾಗಿ ಸರ್ಕಾರದಿಂದ ಚಿಕಿತ್ಸೆ ನೀಡುತ್ತಿದ್ದು ಪೋಷಕರು ತಮ್ಮ ಮಕ್ಕಳಿಗೆ 9 ಮತ್ತು 12ನೇ ತಿಂಗಳಲ್ಲಿ ಮೆದುಳು ಜ್ವರ ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸಬೇಕು. ಇದಕ್ಕೆ ಜಿಲ್ಲಾ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದ್ದು ಸಾರ್ವಜನಿಕರು ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.</p>.<p>ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಡಾ.ಇ. ಸರ್ವೇಶ್, ನರೇಗಾ ಸಹಾಯಕ ನಿರ್ದೇಶಕ ರವಿಚಂದ್ರ, ಹಿರಿಯ ಪ್ರಾಥಮಿಕ ಸುರಕ್ಷಾಧಿಕಾರಿ ಆರ್.ರಾಮಲಕ್ಷ್ಮಮ್ಮ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ರೇಣುಕಾದೇವಿ, ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಚಿದಾನಂದ, ವಂಶಿಕೃಷ್ಣ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಿಲು</strong>: ಮೆದುಳು ಜ್ವರ ಮಾರಣಾಂತಿಕವಾಗಿದ್ದು, ಈ ಜ್ವರದ ಕುರಿತು ಮುನ್ನೆಚ್ಚರಿಕೆ ಕ್ರಮಗಳನ್ನು ಪಾಲಿಸಬೇಕು ಎಂದು ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಸಿ. ಸುಗುಣಾ ಹೇಳಿದರು.</p>.<p>ನಗರದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ತಾಲ್ಲೂಕು ಆರೋಗ್ಯ ಇಲಾಖೆಯ ವತಿಯಿಂದ ಹಮ್ಮಿಕೊಂಡಿದ್ದ ಮೆದುಳು ಜ್ವರ ನಿಯಂತ್ರಣ ಕುರಿತು ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.</p>.<p>ಜನತೆಗೆ ಮೆದುಳು ಜ್ವರದ ಬಗ್ಗೆ ತಿಳಿವಳಿಕೆ ಇಲ್ಲದ ಕಾರಣ ಪ್ರಾಣಾಪಾಯ ಸಂಭವಿಸುತ್ತಿವೆ. ಆದ್ದರಿಂದ ಪ್ರತಿಯೊಬ್ಬರೂ ಜ್ವರದ ಲಕ್ಷಣಗಳು ಕಂಡು ಬಂದರೆ ವೈದ್ಯರನ್ನು ಸಂಪರ್ಕಿಸಿ ರಕ್ತ ಪರೀಕ್ಷೆ ಮಾಡಿಸಿಕೊಂಡು ಸೂಕ್ತ ಚಿಕಿತ್ಸೆ ಪಡೆಯಬೇಕು ಎಂದು ಹೇಳಿದರು.</p>.<p>ಸಾಮಾನ್ಯವಾಗಿ ಸೆಪ್ಟೆಂಬರ್ ತಿಂಗಳಿನಿಂದ ಡಿಸೆಂಬರ್ವರೆಗೂ ಮೆದುಳು ಜ್ವರ ಕಾಣಿಸಿಕೊಳ್ಳುವ ಕಾಲಾವಧಿಯಾಗಿದೆ. ಆದ್ದರಿಂದ ಜ್ವರ, ಕತ್ತು ಬಿಗಿಯುವುದು, ಮೈನಡುಕ ಸೇರಿದಂತೆ ಇತರೆ ಯಾವುದೇ ರೀತಿಯ ಲಕ್ಷಣಗಳು ಕಂಡು ಬಂದರೆ ಕೂಡಲೇ ವೈದ್ಯರನ್ನು ಸಂಪರ್ಕಿಸಬೇಕು ಎಂದು ಸಲಹೆ ನೀಡಿದರು.</p>.<p>ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ. ಸರ್ವೇಶ್ ಮಾತನಾಡಿ ಮೆದುಳು ಜ್ವರಕ್ಕಾಗಿ ಸರ್ಕಾರದಿಂದ ಚಿಕಿತ್ಸೆ ನೀಡುತ್ತಿದ್ದು ಪೋಷಕರು ತಮ್ಮ ಮಕ್ಕಳಿಗೆ 9 ಮತ್ತು 12ನೇ ತಿಂಗಳಲ್ಲಿ ಮೆದುಳು ಜ್ವರ ಲಸಿಕೆಯನ್ನು ಕಡ್ಡಾಯವಾಗಿ ಹಾಕಿಸಬೇಕು. ಇದಕ್ಕೆ ಜಿಲ್ಲಾ ಕೇಂದ್ರಗಳಲ್ಲಿ ಲಸಿಕೆ ನೀಡಲಾಗುತ್ತಿದ್ದು ಸಾರ್ವಜನಿಕರು ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.</p>.<p>ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಡಾ.ಇ. ಸರ್ವೇಶ್, ನರೇಗಾ ಸಹಾಯಕ ನಿರ್ದೇಶಕ ರವಿಚಂದ್ರ, ಹಿರಿಯ ಪ್ರಾಥಮಿಕ ಸುರಕ್ಷಾಧಿಕಾರಿ ಆರ್.ರಾಮಲಕ್ಷ್ಮಮ್ಮ, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ರೇಣುಕಾದೇವಿ, ಆರೋಗ್ಯ ನಿರೀಕ್ಷಣಾಧಿಕಾರಿ ಎಂ.ಚಿದಾನಂದ, ವಂಶಿಕೃಷ್ಣ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>