<p><strong>ಕೋಲಾರ</strong>: ‘ಶ್ರವಣ ದೋಷವು ಮನುಷ್ಯನಿಗೆ ಶಾಪವಲ್ಲ. ಕಿವಿಯಲ್ಲೇ ಏನೇ ಸಮಸ್ಯೆ ಕಾಣಿಸಿಕೊಂಡಾಗ ಶೀಘ್ರವೇ ಚಿಕಿತ್ಸೆ ಪಡೆದರೆ ದೋಷ ನಿವಾರಣೆ ಮಾಡಬಹುದು’ ಎಂದು ದೇವರಾಜ ಅರಸು ಉನ್ನತ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ ಉಪ ಕುಲಪತಿ ಡಾ.ಜಿ.ಪ್ರದೀಪ್ಕುಮಾರ್ ಹೇಳಿದರು.</p>.<p>ನಗರದ ದೇವರಾಜ ಅರಸು ವೈದ್ಯಕೀಯ ಕಾಲೇಜಿನ ಶ್ರವಣ ವಿಭಾಗವು ಬುಧವಾರ ಹಮ್ಮಿಕೊಂಡಿದ್ದ ವಿಶ್ವ ಶ್ರವಣ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ‘ಇತ್ತೀಚಿನ ದಿನಗಳಲ್ಲಿ ಪ್ರತಿ 10 ಮಂದಿಯಲ್ಲಿ ಒಬ್ಬರು ಶ್ರವಣ ದೋಷದಿಂದ ಬಳಲುತ್ತಿದ್ದಾರೆ’ ಎಂದರು.</p>.<p>‘ಶ್ರವಣ ದೋಷ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಸರ್ಕಾರ ಅನೇಕ ಜಾರಿಗೊಳಿಸುತ್ತಿದೆ. ಕಿವಿ ನೋವು ಕಾಣಿಸಿಕೊಂಡಾಗ ಗ್ರಾಮೀಣ ಭಾಗದ ಜನರು ಸೂಕ್ಷ್ಮ ವಸ್ತುಗಳಿಂದ ಕಿವಿ ಸ್ವಚ್ಛಗೊಳಿಸುವ ಕೆಲಸ ಮಾಡುತ್ತಾರೆ. ಇದರಿಂದ ಸಮಸ್ಯೆ ಪರಿಹಾರವಾಗುವ ಬದಲು ಗಂಭೀರವಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.</p>.<p>‘ಬಾಲ್ಯಾವಸ್ಥೆಯಲ್ಲಿ ಕಿವಿ ತಪಾಸಣೆ ಮಾಡಿಸಿಕೊಂಡರೆ ಭವಿಷ್ಯದಲ್ಲಿ ಎದುರಾಗಬಹುದಾದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹದು. ವಯಸ್ಸು ಹೆಚ್ಚಾದಂತೆ ದೃಷಿ ದೋಷ, ಶ್ರವಣ ದೋಷ ಬರುತ್ತದೆ. ಇದಕ್ಕೆ ಚಿಕಿತ್ಸೆಯೇ ಪರಿಹಾರ’ ಎಂದು ಸಲಹೆ ನೀಡಿದರು.</p>.<p>‘ವಿಶ್ವ ಆರೋಗ್ಯ ಸಂಸ್ಥೆಯು ಪ್ರತಿ ವರ್ಷ ಮಾರ್ಚ್ 3ರ ದಿನವನ್ನು ವಿಶ್ವ ಶ್ರವಣ ದಿನವಾಗಿ ಆಚರಿಸುತ್ತದೆ. ಜನರಿಗೆ ಕೇಳುವಿಕೆ ಮತ್ತು ಕೇಳುವಿಕೆಯನ್ನು ಸಂರಕ್ಷಿಸುವ ಬಗ್ಗೆ ಮಾಹಿತಿ ನೀಡುವುದು ಈ ದಿನಾಚರಣೆಯ ಮೂಲ ಉದ್ದೇಶ. ಕಿವುಡುತನ ಮತ್ತು ಅಸರಿಂದ ಉಂಟಾಗುವ ಅಂಗವೈಕಲ್ಯವನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಿ ಚಿಕಿತ್ಸೆ ಪಡೆಯಬೇಕು’ ಎಂದು ಸಂಸ್ಥೆಯ ವಾಕ್ ಮತ್ತು ಶ್ರವಣ ವಿಭಾಗದ ಮುಖ್ಯಸ್ಥ ಡಾ.ಜಯರಾಮ್ ಕಿವಿಮಾತು ಹೇಳಿದರು.</p>.<p>ಶ್ರವಣ ದಿನಾಚರಣೆ ಅಂಗವಾಗಿ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪ್ರಮಾಣಪತ್ರ ವಿತರಿಸಿ ಪುರಸ್ಕರಿಸಲಾಯಿತು. ದೇವರಾಜ ಅರಸು ಉನ್ನತ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ ಕುಲಸಚಿವ ಡಾ.ಕೆ.ಎನ್.ವಿ.ಪ್ರಸಾದ್, ಜಾಲಪ್ಪ ಆಸ್ಪತ್ರೆ ವೈದ್ಯಕೀಯ ಸೂಪರಿಂಟೆಂಡೆಂಟ್ ಡಾ.ಎಸ್.ಎಂ.ಅಜೀಂ ಮೋಹಿಯುದ್ದೀನ್ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ‘ಶ್ರವಣ ದೋಷವು ಮನುಷ್ಯನಿಗೆ ಶಾಪವಲ್ಲ. ಕಿವಿಯಲ್ಲೇ ಏನೇ ಸಮಸ್ಯೆ ಕಾಣಿಸಿಕೊಂಡಾಗ ಶೀಘ್ರವೇ ಚಿಕಿತ್ಸೆ ಪಡೆದರೆ ದೋಷ ನಿವಾರಣೆ ಮಾಡಬಹುದು’ ಎಂದು ದೇವರಾಜ ಅರಸು ಉನ್ನತ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ ಉಪ ಕುಲಪತಿ ಡಾ.ಜಿ.ಪ್ರದೀಪ್ಕುಮಾರ್ ಹೇಳಿದರು.</p>.<p>ನಗರದ ದೇವರಾಜ ಅರಸು ವೈದ್ಯಕೀಯ ಕಾಲೇಜಿನ ಶ್ರವಣ ವಿಭಾಗವು ಬುಧವಾರ ಹಮ್ಮಿಕೊಂಡಿದ್ದ ವಿಶ್ವ ಶ್ರವಣ ದಿನಾಚರಣೆ ಉದ್ಘಾಟಿಸಿ ಮಾತನಾಡಿ, ‘ಇತ್ತೀಚಿನ ದಿನಗಳಲ್ಲಿ ಪ್ರತಿ 10 ಮಂದಿಯಲ್ಲಿ ಒಬ್ಬರು ಶ್ರವಣ ದೋಷದಿಂದ ಬಳಲುತ್ತಿದ್ದಾರೆ’ ಎಂದರು.</p>.<p>‘ಶ್ರವಣ ದೋಷ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಸರ್ಕಾರ ಅನೇಕ ಜಾರಿಗೊಳಿಸುತ್ತಿದೆ. ಕಿವಿ ನೋವು ಕಾಣಿಸಿಕೊಂಡಾಗ ಗ್ರಾಮೀಣ ಭಾಗದ ಜನರು ಸೂಕ್ಷ್ಮ ವಸ್ತುಗಳಿಂದ ಕಿವಿ ಸ್ವಚ್ಛಗೊಳಿಸುವ ಕೆಲಸ ಮಾಡುತ್ತಾರೆ. ಇದರಿಂದ ಸಮಸ್ಯೆ ಪರಿಹಾರವಾಗುವ ಬದಲು ಗಂಭೀರವಾಗುತ್ತದೆ’ ಎಂದು ಎಚ್ಚರಿಕೆ ನೀಡಿದರು.</p>.<p>‘ಬಾಲ್ಯಾವಸ್ಥೆಯಲ್ಲಿ ಕಿವಿ ತಪಾಸಣೆ ಮಾಡಿಸಿಕೊಂಡರೆ ಭವಿಷ್ಯದಲ್ಲಿ ಎದುರಾಗಬಹುದಾದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬಹದು. ವಯಸ್ಸು ಹೆಚ್ಚಾದಂತೆ ದೃಷಿ ದೋಷ, ಶ್ರವಣ ದೋಷ ಬರುತ್ತದೆ. ಇದಕ್ಕೆ ಚಿಕಿತ್ಸೆಯೇ ಪರಿಹಾರ’ ಎಂದು ಸಲಹೆ ನೀಡಿದರು.</p>.<p>‘ವಿಶ್ವ ಆರೋಗ್ಯ ಸಂಸ್ಥೆಯು ಪ್ರತಿ ವರ್ಷ ಮಾರ್ಚ್ 3ರ ದಿನವನ್ನು ವಿಶ್ವ ಶ್ರವಣ ದಿನವಾಗಿ ಆಚರಿಸುತ್ತದೆ. ಜನರಿಗೆ ಕೇಳುವಿಕೆ ಮತ್ತು ಕೇಳುವಿಕೆಯನ್ನು ಸಂರಕ್ಷಿಸುವ ಬಗ್ಗೆ ಮಾಹಿತಿ ನೀಡುವುದು ಈ ದಿನಾಚರಣೆಯ ಮೂಲ ಉದ್ದೇಶ. ಕಿವುಡುತನ ಮತ್ತು ಅಸರಿಂದ ಉಂಟಾಗುವ ಅಂಗವೈಕಲ್ಯವನ್ನು ಆರಂಭಿಕ ಹಂತದಲ್ಲೇ ಪತ್ತೆ ಹಚ್ಚಿ ಚಿಕಿತ್ಸೆ ಪಡೆಯಬೇಕು’ ಎಂದು ಸಂಸ್ಥೆಯ ವಾಕ್ ಮತ್ತು ಶ್ರವಣ ವಿಭಾಗದ ಮುಖ್ಯಸ್ಥ ಡಾ.ಜಯರಾಮ್ ಕಿವಿಮಾತು ಹೇಳಿದರು.</p>.<p>ಶ್ರವಣ ದಿನಾಚರಣೆ ಅಂಗವಾಗಿ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ನಗದು ಬಹುಮಾನ ಹಾಗೂ ಪ್ರಮಾಣಪತ್ರ ವಿತರಿಸಿ ಪುರಸ್ಕರಿಸಲಾಯಿತು. ದೇವರಾಜ ಅರಸು ಉನ್ನತ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ ಕುಲಸಚಿವ ಡಾ.ಕೆ.ಎನ್.ವಿ.ಪ್ರಸಾದ್, ಜಾಲಪ್ಪ ಆಸ್ಪತ್ರೆ ವೈದ್ಯಕೀಯ ಸೂಪರಿಂಟೆಂಡೆಂಟ್ ಡಾ.ಎಸ್.ಎಂ.ಅಜೀಂ ಮೋಹಿಯುದ್ದೀನ್ ಪಾಲ್ಗೊಂಡರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>