ಜಿಲ್ಲೆಯಲ್ಲಿ ಎಂದಿಗಿಂತ ಬಿಸಿಲಿನ ತಾಪ ಹೆಚ್ಚಾಗಿದ್ದು, ಇದರಿಂದಾಗಿ ಮಕ್ಕಳು ಮತ್ತು ವೃದ್ಧರು ಮನೆಯಿಂದ ಹೊರಬರಲು ಹಿಂದೇಟು ಹಾಕುತ್ತಿದ್ದಾರೆ. ಕಾರ್ಯನಿಮಿತ್ತ ಮನೆ, ಕಚೇರಿಗಳಿಂದ ಹೊರ ಬರುವ ಜನರು ರಸ್ತೆ ಬದಿ, ಬಸ್ ನಿಲ್ದಾಣ, ಸಾರ್ವಜನಿಕ ಸ್ಥಳಗಳಲ್ಲಿ ಕಲ್ಲಂಗಡಿ, ಎಳನೀರು, ಮಜ್ಜಿಗೆ, ಜ್ಯೂಸ್, ತಾಟಿನಿಂಗು, ಕಬ್ಬಿನ ಹಾಲು ಸೇವಿಸಿ ಬಾಯಾರಿಕೆ ತೀರಿಸಿಕೊಳ್ಳುತ್ತಿದ್ದಾರೆ.