<p><strong>ಕೋಲಾರ</strong>: ಹೆಲಿಕಾಪ್ಟರ್ ಘಟಕ ಉದ್ಘಾಟನೆಗೆ ಶಾಸಕ ಕೊತ್ತೂರು ಮಂಜುನಾಥ್ ಸೇರಿದಂತೆ ಎಲ್ಲರಿಗೂ ಇ–ಮೇಲ್ ಮೂಲಕ ಆಹ್ವಾನ ನೀಡಲಾಗಿದೆ. ನನಗೂ ಇಮೇಲ್ನಲ್ಲಿ ಮಾಹಿತಿ ಬಂದಿದ್ದು, ಯಾವುದೇ ಆಹ್ವಾನ ಪತ್ರಿಕೆ ನೀಡಿಲ್ಲ ಎಂದು ಸಂಸದ ಎಂ.ಮಲ್ಲೇಶ್ ಹೇಳಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಜಿಲ್ಲೆಗೆ ಹೊಸ ಕೈಗಾರಿಕೆಗಳು ಬರುವುದರಿಂದ ಉತ್ತಮ ವಾತಾವರಣ ಸೃಷ್ಟಿಯಾಗುತ್ತದೆ. ಜಮೀನು ನೀಡಿದ ರೈತರಿಗೆ ಉದ್ಯೋಗ ಸಿಗುತ್ತದೆ, ನಿರುದ್ಯೋಗ ಸಮಸ್ಯೆ ನೀಗಲು ಸಾಧ್ಯವಾಗುತ್ತದೆ. ಕೈಗಾರಿಕೆಗಳಲ್ಲಿ ಅರ್ಹತೆ ಮೇಲೆ ಉದ್ಯೋಗ ನೀಡಲಾಗುತ್ತಿದೆ’ ಎಂದರು.</p>.<p>ನರಸಾಪುರ ಕೈಗಾರಿಕಾ ವಲಯದಲ್ಲಿ ಕೊತ್ತೂರು ಮಂಜುನಾಥ್ ಅವರೇ ಬಹಳಷ್ಟು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಭೂಮಿಪೂಜೆ ಮಾಡಿದ್ದಾರೆ. ಆದರೆ, ಹೆಲಿಕಾಪ್ಟರ್ ಘಟಕದ ವಿಚಾರದಲ್ಲಿ ತಮಗೆ ಮಾಹಿತಿ ಇಲ್ಲವೆಂದು ಹೇಳಿದ್ದಾರೆ. ಈ ಬಗ್ಗೆ ಅವರನ್ನೇ ಕೇಳಬೇಕು ಎಂದು ಹೇಳಿದರು.</p>.<p>ಜಿಲ್ಲೆಯಲ್ಲಿ ಹಲವು ಕೈಗಾರಿಕೆಗಳ ಸ್ಥಾಪನೆಗೆ ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಮುಂದೆ ಬಂದಿದ್ದು, ಜಿಲ್ಲೆಯ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರದಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದರು.</p>.<p>ಮಾಜಿ ಸಂಸದ ಎಸ್.ಮುನಿಸ್ವಾಮಿ ಮಾತನಾಡಿ, ‘ವೇಮಗಲ್ನಲ್ಲಿ ನಡೆದದ್ದು ರಕ್ಷಣಾ ಇಲಾಖೆಯ ಕಾರ್ಯಕ್ರಮ. ಆದರೂ ಇ-ಮೇಲ್ ಮತ್ತು ದೂರವಾಣಿ ಕರೆ ಮಾಡಿ ಮಾಹಿತಿ ನೀಡಲಾಗಿದೆ. ಸಚಿವ ಎಂ.ಬಿ.ಪಾಟೀಲ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಆದರೆ, ಕೊತ್ತೂರು ಮಂಜುನಾಥ್ ಏಕೆ ಭಾಗವಹಿಸಿಲ್ಲ’ ಎಂದು ಪ್ರಶ್ನಿಸಿದರು.</p>.<p>ಜಿಲ್ಲೆಯ ಅಭಿವೃದ್ಧಿಗೆ ಕೈಗಾರಿಕೆಗಳು ಬಂದಿದ್ದು, ಶಾಸಕರು ಖುಷಿ ಪಡಬೇಕು, ಕೈಗಾರಿಕಾ ವ್ಯಾಪ್ತಿಯ ವಿದ್ಯುತ್ ಕಂಬಗಳಿಗೆ ಟ್ರ್ಯಾಕ್ಟರ್ನಲ್ಲಿ ಡಿಕ್ಕಿ ಹೊಡೆಸಲಾಗುವುದು ಎಂದು ರೈತರನ್ನು ಪ್ರಚೋದನೆ ಮಾಡಿದ್ದು ಸರಿಯಾದ ಕ್ರಮವಲ್ಲ ಎಂದರು.</p>.<p>ಈ ವಿಚಾರದಲ್ಲಿ ದೇಶದ ವಿರೋಧಿಗಳನ್ನು ಮೆಚ್ಚಿಸುವ ರೀತಿ ಮಾತನಾಡಿದ್ದಾರೆ ಎಂದು ಕಿಡಿಕಾರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ಹೆಲಿಕಾಪ್ಟರ್ ಘಟಕ ಉದ್ಘಾಟನೆಗೆ ಶಾಸಕ ಕೊತ್ತೂರು ಮಂಜುನಾಥ್ ಸೇರಿದಂತೆ ಎಲ್ಲರಿಗೂ ಇ–ಮೇಲ್ ಮೂಲಕ ಆಹ್ವಾನ ನೀಡಲಾಗಿದೆ. ನನಗೂ ಇಮೇಲ್ನಲ್ಲಿ ಮಾಹಿತಿ ಬಂದಿದ್ದು, ಯಾವುದೇ ಆಹ್ವಾನ ಪತ್ರಿಕೆ ನೀಡಿಲ್ಲ ಎಂದು ಸಂಸದ ಎಂ.ಮಲ್ಲೇಶ್ ಹೇಳಿದರು.</p>.<p>ನಗರದಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಜಿಲ್ಲೆಗೆ ಹೊಸ ಕೈಗಾರಿಕೆಗಳು ಬರುವುದರಿಂದ ಉತ್ತಮ ವಾತಾವರಣ ಸೃಷ್ಟಿಯಾಗುತ್ತದೆ. ಜಮೀನು ನೀಡಿದ ರೈತರಿಗೆ ಉದ್ಯೋಗ ಸಿಗುತ್ತದೆ, ನಿರುದ್ಯೋಗ ಸಮಸ್ಯೆ ನೀಗಲು ಸಾಧ್ಯವಾಗುತ್ತದೆ. ಕೈಗಾರಿಕೆಗಳಲ್ಲಿ ಅರ್ಹತೆ ಮೇಲೆ ಉದ್ಯೋಗ ನೀಡಲಾಗುತ್ತಿದೆ’ ಎಂದರು.</p>.<p>ನರಸಾಪುರ ಕೈಗಾರಿಕಾ ವಲಯದಲ್ಲಿ ಕೊತ್ತೂರು ಮಂಜುನಾಥ್ ಅವರೇ ಬಹಳಷ್ಟು ಅಭಿವೃದ್ಧಿ ಕಾರ್ಯಕ್ರಮಗಳಿಗೆ ಭೂಮಿಪೂಜೆ ಮಾಡಿದ್ದಾರೆ. ಆದರೆ, ಹೆಲಿಕಾಪ್ಟರ್ ಘಟಕದ ವಿಚಾರದಲ್ಲಿ ತಮಗೆ ಮಾಹಿತಿ ಇಲ್ಲವೆಂದು ಹೇಳಿದ್ದಾರೆ. ಈ ಬಗ್ಗೆ ಅವರನ್ನೇ ಕೇಳಬೇಕು ಎಂದು ಹೇಳಿದರು.</p>.<p>ಜಿಲ್ಲೆಯಲ್ಲಿ ಹಲವು ಕೈಗಾರಿಕೆಗಳ ಸ್ಥಾಪನೆಗೆ ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಮುಂದೆ ಬಂದಿದ್ದು, ಜಿಲ್ಲೆಯ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರದಿಂದ ಅಗತ್ಯ ಸಹಕಾರ ನೀಡಲಾಗುವುದು ಎಂದರು.</p>.<p>ಮಾಜಿ ಸಂಸದ ಎಸ್.ಮುನಿಸ್ವಾಮಿ ಮಾತನಾಡಿ, ‘ವೇಮಗಲ್ನಲ್ಲಿ ನಡೆದದ್ದು ರಕ್ಷಣಾ ಇಲಾಖೆಯ ಕಾರ್ಯಕ್ರಮ. ಆದರೂ ಇ-ಮೇಲ್ ಮತ್ತು ದೂರವಾಣಿ ಕರೆ ಮಾಡಿ ಮಾಹಿತಿ ನೀಡಲಾಗಿದೆ. ಸಚಿವ ಎಂ.ಬಿ.ಪಾಟೀಲ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಆದರೆ, ಕೊತ್ತೂರು ಮಂಜುನಾಥ್ ಏಕೆ ಭಾಗವಹಿಸಿಲ್ಲ’ ಎಂದು ಪ್ರಶ್ನಿಸಿದರು.</p>.<p>ಜಿಲ್ಲೆಯ ಅಭಿವೃದ್ಧಿಗೆ ಕೈಗಾರಿಕೆಗಳು ಬಂದಿದ್ದು, ಶಾಸಕರು ಖುಷಿ ಪಡಬೇಕು, ಕೈಗಾರಿಕಾ ವ್ಯಾಪ್ತಿಯ ವಿದ್ಯುತ್ ಕಂಬಗಳಿಗೆ ಟ್ರ್ಯಾಕ್ಟರ್ನಲ್ಲಿ ಡಿಕ್ಕಿ ಹೊಡೆಸಲಾಗುವುದು ಎಂದು ರೈತರನ್ನು ಪ್ರಚೋದನೆ ಮಾಡಿದ್ದು ಸರಿಯಾದ ಕ್ರಮವಲ್ಲ ಎಂದರು.</p>.<p>ಈ ವಿಚಾರದಲ್ಲಿ ದೇಶದ ವಿರೋಧಿಗಳನ್ನು ಮೆಚ್ಚಿಸುವ ರೀತಿ ಮಾತನಾಡಿದ್ದಾರೆ ಎಂದು ಕಿಡಿಕಾರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>