<p><strong>ಕೋಲಾರ:</strong> ‘ಗಡಿ ಜಿಲ್ಲೆಯಲ್ಲಿ ಕನ್ನಡದ ಕಂಪು ಹೆಚ್ಚಿಸಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿಗೆ ಭವ್ಯ ಭವನ ನಿರ್ಮಿಸುವ ಗುರಿಯೊಂದಿಗೆ ಚುನಾವಣೆಗೆ ಸ್ಪರ್ಧಿಸಿರುವ ಗೋಪಾಲಗೌಡ ಅವರನ್ನು ಮತದಾರರು ಬೆಂಬಲಿಸಬೇಕು’ ಎಂದು ರಾಜ್ಯ ದೈಹಿಕ ಶಿಕ್ಷಕರ ಸಂಘದ ನಿಟಕಪೂರ್ವ ಅಧ್ಯಕ್ಷ ಇ.ಶ್ರೀನಿವಾಸಗೌಡ ಮನವಿ ಮಾಡಿದರು.</p>.<p>ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ ಸೋಮವಾರ ಶಿಕ್ಷಕರ ಮತ ಯಾಚಿಸಿ ಮಾತನಾಡಿ, ‘ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಗೋಪಾಲಗೌಡರಿಗೆ ಮತ ನೀಡಿ ಗಡಿ ಜಿಲ್ಲೆಯಲ್ಲಿ ಕನ್ನಡಪರ ಕಾರ್ಯಕ್ರಮಗಳು ಹೆಚ್ಚು ನಡೆಯಲು ಅವಕಾಶ ಕಲ್ಪಿಸಬೇಕು’ ಎಂದರು.</p>.<p>‘ಗೋಪಾಲಗೌಡರಿಗೆ ಕೋಲಾರ ಜಿಲ್ಲೆಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಆಶಯವಿದೆ. ಗಡಿ ಜಿಲ್ಲೆಯಲ್ಲಿ ಕನ್ನಡ ಭಾಷೆ, ನೆಲ, ಜಲದ ಸಮಸ್ಯೆಗಳಿಗೆ ಸ್ಪಂದನೆ ನೀಡುವ ಧ್ಯೇಯದೊಂದಿಗೆ ಕಣಕ್ಕಿಳಿದಿದ್ದಾರೆ’ ಎಂದು ಹೇಳಿದರು.</p>.<p>‘ಗೋಪಾಲಗೌಡರು ಅಧ್ಯಕ್ಷರಾದರೆ ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಅಭಿರುಚಿಯಿರುವ ಯುವಕರನ್ನು ಪ್ರೋತ್ಸಾಹಿಸಲು ಹಲವು ಕಾರ್ಯಕ್ರಮ ರೂಪಿಸುತ್ತಾರೆ. ಅವರಿಗೆ ಜಿಲ್ಲೆಯ ಸಾಹಿತ್ಯ ಚರಿತ್ರೆಯ ಸಂಪುಟ ಬಿಡುಗಡೆ ಮಾಡುವ ಕನಸಿದೆ. ಸಾಹಿತ್ಯ ಪ್ರೇಮಿಗಳು ಅವರಿಗೆ ನಾಡು ನುಡಿ ಸೇವೆಗೆ ಅವಕಾಶ ಮಾಡಿ ಕೊಡಬೇಕು’ ಎಂದು ಕೋರಿದರು.</p>.<p>‘ಕನ್ನಡ ಸಾಹಿತ್ಯ ಪರಿಷತ್ತಿನ ಅಜೀವ ಸದಸ್ಯತ್ವ ಶುಲ್ಕ ಕಡಿಮೆ ಮಾಡಿಸುವ ಮೂಲಕ ಜಿಲ್ಲೆಯ ಪ್ರತಿ ಸುಶಿಕ್ಷಿತರನ್ನು ಸದಸ್ಯರಾಗಿಸುವ ಆಶಯವಿದೆ. ಕನ್ನಡ ನಾಡು, ನುಡಿಗಾಗಿ ನಡೆಯುವ ಎಲ್ಲಾ ಹೋರಾಟಗಳಲ್ಲೂ ಕಸಾಪವನ್ನು ಮುಂಚೂಣಿಗೆ ತರುವ ಗೋಪಾಲಗೌಡರ ಧ್ಯೇಯಕ್ಕೆ ಬೆಂಬಲ ನೀಡಬೇಕು’ ಎಂದು ತಿಳಿಸಿದರು.</p>.<p>ಅರಾಭಿಕೊತ್ತನೂರು ಪ್ರೌಢ ಶಾಲೆ ಪ್ರಭಾರ ಮುಖ್ಯ ಶಿಕ್ಷಕ ವೆಂಕಟರೆಡ್ಡಿ, ಶಿಕ್ಷಕರಾದ ಎಸ್.ಅನಂತಪದ್ಮನಾಭ್, ಭವಾನಿ, ಶ್ವೇತಾ, ಫರೀದಾ, ಶ್ರೀನಿವಾಸಲು, ಡಿ.ಚಂದ್ರಶೇಖರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ:</strong> ‘ಗಡಿ ಜಿಲ್ಲೆಯಲ್ಲಿ ಕನ್ನಡದ ಕಂಪು ಹೆಚ್ಚಿಸಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿಗೆ ಭವ್ಯ ಭವನ ನಿರ್ಮಿಸುವ ಗುರಿಯೊಂದಿಗೆ ಚುನಾವಣೆಗೆ ಸ್ಪರ್ಧಿಸಿರುವ ಗೋಪಾಲಗೌಡ ಅವರನ್ನು ಮತದಾರರು ಬೆಂಬಲಿಸಬೇಕು’ ಎಂದು ರಾಜ್ಯ ದೈಹಿಕ ಶಿಕ್ಷಕರ ಸಂಘದ ನಿಟಕಪೂರ್ವ ಅಧ್ಯಕ್ಷ ಇ.ಶ್ರೀನಿವಾಸಗೌಡ ಮನವಿ ಮಾಡಿದರು.</p>.<p>ತಾಲ್ಲೂಕಿನ ಅರಾಭಿಕೊತ್ತನೂರು ಸರ್ಕಾರಿ ಪ್ರೌಢ ಶಾಲೆಯಲ್ಲಿ ಸೋಮವಾರ ಶಿಕ್ಷಕರ ಮತ ಯಾಚಿಸಿ ಮಾತನಾಡಿ, ‘ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿರುವ ಗೋಪಾಲಗೌಡರಿಗೆ ಮತ ನೀಡಿ ಗಡಿ ಜಿಲ್ಲೆಯಲ್ಲಿ ಕನ್ನಡಪರ ಕಾರ್ಯಕ್ರಮಗಳು ಹೆಚ್ಚು ನಡೆಯಲು ಅವಕಾಶ ಕಲ್ಪಿಸಬೇಕು’ ಎಂದರು.</p>.<p>‘ಗೋಪಾಲಗೌಡರಿಗೆ ಕೋಲಾರ ಜಿಲ್ಲೆಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸುವ ಆಶಯವಿದೆ. ಗಡಿ ಜಿಲ್ಲೆಯಲ್ಲಿ ಕನ್ನಡ ಭಾಷೆ, ನೆಲ, ಜಲದ ಸಮಸ್ಯೆಗಳಿಗೆ ಸ್ಪಂದನೆ ನೀಡುವ ಧ್ಯೇಯದೊಂದಿಗೆ ಕಣಕ್ಕಿಳಿದಿದ್ದಾರೆ’ ಎಂದು ಹೇಳಿದರು.</p>.<p>‘ಗೋಪಾಲಗೌಡರು ಅಧ್ಯಕ್ಷರಾದರೆ ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಅಭಿರುಚಿಯಿರುವ ಯುವಕರನ್ನು ಪ್ರೋತ್ಸಾಹಿಸಲು ಹಲವು ಕಾರ್ಯಕ್ರಮ ರೂಪಿಸುತ್ತಾರೆ. ಅವರಿಗೆ ಜಿಲ್ಲೆಯ ಸಾಹಿತ್ಯ ಚರಿತ್ರೆಯ ಸಂಪುಟ ಬಿಡುಗಡೆ ಮಾಡುವ ಕನಸಿದೆ. ಸಾಹಿತ್ಯ ಪ್ರೇಮಿಗಳು ಅವರಿಗೆ ನಾಡು ನುಡಿ ಸೇವೆಗೆ ಅವಕಾಶ ಮಾಡಿ ಕೊಡಬೇಕು’ ಎಂದು ಕೋರಿದರು.</p>.<p>‘ಕನ್ನಡ ಸಾಹಿತ್ಯ ಪರಿಷತ್ತಿನ ಅಜೀವ ಸದಸ್ಯತ್ವ ಶುಲ್ಕ ಕಡಿಮೆ ಮಾಡಿಸುವ ಮೂಲಕ ಜಿಲ್ಲೆಯ ಪ್ರತಿ ಸುಶಿಕ್ಷಿತರನ್ನು ಸದಸ್ಯರಾಗಿಸುವ ಆಶಯವಿದೆ. ಕನ್ನಡ ನಾಡು, ನುಡಿಗಾಗಿ ನಡೆಯುವ ಎಲ್ಲಾ ಹೋರಾಟಗಳಲ್ಲೂ ಕಸಾಪವನ್ನು ಮುಂಚೂಣಿಗೆ ತರುವ ಗೋಪಾಲಗೌಡರ ಧ್ಯೇಯಕ್ಕೆ ಬೆಂಬಲ ನೀಡಬೇಕು’ ಎಂದು ತಿಳಿಸಿದರು.</p>.<p>ಅರಾಭಿಕೊತ್ತನೂರು ಪ್ರೌಢ ಶಾಲೆ ಪ್ರಭಾರ ಮುಖ್ಯ ಶಿಕ್ಷಕ ವೆಂಕಟರೆಡ್ಡಿ, ಶಿಕ್ಷಕರಾದ ಎಸ್.ಅನಂತಪದ್ಮನಾಭ್, ಭವಾನಿ, ಶ್ವೇತಾ, ಫರೀದಾ, ಶ್ರೀನಿವಾಸಲು, ಡಿ.ಚಂದ್ರಶೇಖರ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>