<p><strong>ಕೋಲಾರ: </strong>‘ಸಂಘಟನೆ ಬಲಗೊಳಿಸುವ ದೃಷ್ಟಿಯಿಂದ ಹಾಗೂ ಸಂಘಕ್ಕೆ ಚೈತನ್ಯ ತುಂಬಲು 2ನೇ ಹಂತದಲ್ಲಿ ಕೆಲವರನ್ನು ನಾಮನಿರ್ದೇಶನ ಮಾಡಿಕೊಳ್ಳಲಾಗಿದೆ’ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್ಬಾಬು ತಿಳಿಸಿದರು.</p>.<p>ಇಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳನ್ನು ಸನ್ಮಾನಿಸಿ ಮಾತನಾಡಿ, ‘ಹೊಸ ಪದಾಧಿಕಾರಿಗಳು ಸಂಘವನ್ನು ಮತ್ತಷ್ಟು ಬಲಗೊಳಿಸುವ ಹಾದಿಯಲ್ಲಿ ಕೈಜೋಡಿಸಿ ಮುನ್ನಡೆಯಬೇಕು. ಸಂಘಕ್ಕೆ 5 ಎಕರೆ ಜಾಗ ಪಡೆಯಲು ಪ್ರಸ್ತಾವ ಸಲ್ಲಿಸಿದ್ದು, ಶೀಘ್ರವೇ ಜಮೀನು ಮಂಜೂರಾಗುತ್ತದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>‘ಸದ್ಯ ಇರುವ ಸಂಘದ ಕಟ್ಟಡದಲ್ಲಿ ₹ 1.75 ಕೋಟಿ ವೆಚ್ಚದಲ್ಲಿ 3 ಮಹಡಿ ನಿರ್ಮಿಸುವ ಉದ್ದೇಶವಿದೆ. ಹೊಸದಾಗಿ ಅಂಗಡಿ ಮಳಿಗೆಗಳು, ಸಭಾಂಗಣ, ಆಡಳಿತ ಕಚೇರಿ ನಿರ್ಮಿಸಲಾಗುತ್ತದೆ. ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ ಸದಸ್ಯರಿಗೆ ಆಕ್ಷೇಪವಿದ್ದರೆ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಲು ಅವಕಾಶವಿದೆ. ನೌಕರರ ಹಿತ ಕಾಯುವಷ್ಟು ದಿನ ಇಲ್ಲಿ ಕೆಲಸ ಮಾಡಬಹುದು. ಸಾಮಾಜಿಕ ಕಾಳಜಿಯಿದ್ದರೆ ಉತ್ತಮ ಕೆಲಸ ಸಾಧ್ಯ. ರಾಜ್ಯ ಸಂಘದ ನಿರ್ದೇಶನದಂತೆ ಮಹಿಳೆಯರಿಗೆ ಆದ್ಯತೆ ನೀಡಲಾಗಿದೆ’ ಎಂದರು.</p>.<p>‘ರಾಜ್ಯ ಸಂಘವೂ ಜಿಲ್ಲೆಯ ಕಾರ್ಯ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದೆ. ಕ್ರೀಡಾಕೂಟ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿದ್ದೇವೆ’ ಎಂದು ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಚೌಡಪ್ಪ ತಿಳಿಸಿದರು.</p>.<p>ಕೆಲಸ ವಿಳಂಬ: ‘ಕೆಜಿಐಡಿಯಲ್ಲಿ ಶಿಕ್ಷಕರ ಕೆಲಸಗಳು ವಿಳಂಬವಾಗುತ್ತಿವೆ. ಶಿಕ್ಷಕರು ಕೋವಿಡ್ ಸಂದರ್ಭದಲ್ಲೂ ಕಾರ್ಯ ನಿರ್ವಹಿಸುತ್ತಿದ್ದು, ಅವರ ಕೆಲಸಗಳನ್ನು ಇಲಾಖೆಗಳಲ್ಲಿ ಶೀಘ್ರವಾಗಿ ಮಾಡಿ ಕೊಡಬೇಕು’ ಎಂದು ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ವಿ.ಮುರಳಿಮೋಹನ್ ಮನವಿ ಮಾಡಿದರು.</p>.<p>‘ಕೋವಿಡ್ ಆತಂಕದ ನಡುವೆಯೂ ಸಂಘ ಉತ್ತಮವಾಗಿ ಕೆಲಸ ಮಾಡಿದೆ. ಜಂಟಿ ಸಮಾಲೋಚನಾ ಸಮಿತಿ ರಚಿಸಲಾಗಿದೆ. ನೌಕರರ ಸಮಸ್ಯೆಗಳಿದ್ದರೆ ಗಮನಕ್ಕೆ ತರಬೇಕು’ ಎಂದು ಸಂಘದ ಖಜಾಂಚಿ ವಿಜಯ್ ಕೋರಿದರು.</p>.<p>ಸಂಘಕ್ಕೆ 2ನೇ ಹಂತದಲ್ಲಿ ನಾಮನಿರ್ದೇಶನಗೊಂಡ ವಿಜಯಮ್ಮ, ವೆಂಕಟಶಿವಪ್ಪ, ಚಂದ್ರಪ್ಪ, ಎನ್.ಎಸ್.ಭಾಗ್ಯ, ಪ್ರೇಮಾ, ಕಲಾವತಿ, ಎ.ಬಿ.ನವೀನಾ, ಮಂಜುನಾಥ್, ವೆಂಕಟಾಚಲಪತಿಗೌಡ, ಎಂ.ನಾಗರಾಜ್ ಅವರನ್ನು ಸನ್ಮಾನಿಸಲಾಯಿತು.</p>.<p>ಸಂಘದ ಜಿಲ್ಲಾ ಕಾರ್ಯದರ್ಶಿ ಶಿವಕುಮಾರ್, ಗೌರವಾಧ್ಯಕ್ಷ ಎನ್.ಶ್ರೀನಿವಾಸರೆಡ್ಡಿ, ರಾಜ್ಯ ಪರಿಷತ್ ಸದಸ್ಯ ಗೌತಮ್, ಜಂಟಿ ಕಾರ್ಯದರ್ಶಿಗಳಾದ ಕದಿರಪ್ಪ, ಮಂಜುನಾಥ್, ರವಿ, ಸಂಘಟನಾ ಕಾರ್ಯದರ್ಶಿ ಅನಿಲ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ: </strong>‘ಸಂಘಟನೆ ಬಲಗೊಳಿಸುವ ದೃಷ್ಟಿಯಿಂದ ಹಾಗೂ ಸಂಘಕ್ಕೆ ಚೈತನ್ಯ ತುಂಬಲು 2ನೇ ಹಂತದಲ್ಲಿ ಕೆಲವರನ್ನು ನಾಮನಿರ್ದೇಶನ ಮಾಡಿಕೊಳ್ಳಲಾಗಿದೆ’ ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಜಿ.ಸುರೇಶ್ಬಾಬು ತಿಳಿಸಿದರು.</p>.<p>ಇಲ್ಲಿ ಮಂಗಳವಾರ ನಡೆದ ಕಾರ್ಯಕ್ರಮದಲ್ಲಿ ನೂತನ ಪದಾಧಿಕಾರಿಗಳನ್ನು ಸನ್ಮಾನಿಸಿ ಮಾತನಾಡಿ, ‘ಹೊಸ ಪದಾಧಿಕಾರಿಗಳು ಸಂಘವನ್ನು ಮತ್ತಷ್ಟು ಬಲಗೊಳಿಸುವ ಹಾದಿಯಲ್ಲಿ ಕೈಜೋಡಿಸಿ ಮುನ್ನಡೆಯಬೇಕು. ಸಂಘಕ್ಕೆ 5 ಎಕರೆ ಜಾಗ ಪಡೆಯಲು ಪ್ರಸ್ತಾವ ಸಲ್ಲಿಸಿದ್ದು, ಶೀಘ್ರವೇ ಜಮೀನು ಮಂಜೂರಾಗುತ್ತದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>‘ಸದ್ಯ ಇರುವ ಸಂಘದ ಕಟ್ಟಡದಲ್ಲಿ ₹ 1.75 ಕೋಟಿ ವೆಚ್ಚದಲ್ಲಿ 3 ಮಹಡಿ ನಿರ್ಮಿಸುವ ಉದ್ದೇಶವಿದೆ. ಹೊಸದಾಗಿ ಅಂಗಡಿ ಮಳಿಗೆಗಳು, ಸಭಾಂಗಣ, ಆಡಳಿತ ಕಚೇರಿ ನಿರ್ಮಿಸಲಾಗುತ್ತದೆ. ಸಂಘದ ಕಾರ್ಯ ಚಟುವಟಿಕೆಗಳ ಬಗ್ಗೆ ಸದಸ್ಯರಿಗೆ ಆಕ್ಷೇಪವಿದ್ದರೆ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಮಾತನಾಡಲು ಅವಕಾಶವಿದೆ. ನೌಕರರ ಹಿತ ಕಾಯುವಷ್ಟು ದಿನ ಇಲ್ಲಿ ಕೆಲಸ ಮಾಡಬಹುದು. ಸಾಮಾಜಿಕ ಕಾಳಜಿಯಿದ್ದರೆ ಉತ್ತಮ ಕೆಲಸ ಸಾಧ್ಯ. ರಾಜ್ಯ ಸಂಘದ ನಿರ್ದೇಶನದಂತೆ ಮಹಿಳೆಯರಿಗೆ ಆದ್ಯತೆ ನೀಡಲಾಗಿದೆ’ ಎಂದರು.</p>.<p>‘ರಾಜ್ಯ ಸಂಘವೂ ಜಿಲ್ಲೆಯ ಕಾರ್ಯ ಚಟುವಟಿಕೆಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದೆ. ಕ್ರೀಡಾಕೂಟ ಮತ್ತು ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಯಶಸ್ವಿಯಾಗಿ ನಡೆಸಿದ್ದೇವೆ’ ಎಂದು ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಚೌಡಪ್ಪ ತಿಳಿಸಿದರು.</p>.<p>ಕೆಲಸ ವಿಳಂಬ: ‘ಕೆಜಿಐಡಿಯಲ್ಲಿ ಶಿಕ್ಷಕರ ಕೆಲಸಗಳು ವಿಳಂಬವಾಗುತ್ತಿವೆ. ಶಿಕ್ಷಕರು ಕೋವಿಡ್ ಸಂದರ್ಭದಲ್ಲೂ ಕಾರ್ಯ ನಿರ್ವಹಿಸುತ್ತಿದ್ದು, ಅವರ ಕೆಲಸಗಳನ್ನು ಇಲಾಖೆಗಳಲ್ಲಿ ಶೀಘ್ರವಾಗಿ ಮಾಡಿ ಕೊಡಬೇಕು’ ಎಂದು ಜಿಲ್ಲಾ ದೈಹಿಕ ಶಿಕ್ಷಕರ ಸಂಘದ ಅಧ್ಯಕ್ಷ ವಿ.ಮುರಳಿಮೋಹನ್ ಮನವಿ ಮಾಡಿದರು.</p>.<p>‘ಕೋವಿಡ್ ಆತಂಕದ ನಡುವೆಯೂ ಸಂಘ ಉತ್ತಮವಾಗಿ ಕೆಲಸ ಮಾಡಿದೆ. ಜಂಟಿ ಸಮಾಲೋಚನಾ ಸಮಿತಿ ರಚಿಸಲಾಗಿದೆ. ನೌಕರರ ಸಮಸ್ಯೆಗಳಿದ್ದರೆ ಗಮನಕ್ಕೆ ತರಬೇಕು’ ಎಂದು ಸಂಘದ ಖಜಾಂಚಿ ವಿಜಯ್ ಕೋರಿದರು.</p>.<p>ಸಂಘಕ್ಕೆ 2ನೇ ಹಂತದಲ್ಲಿ ನಾಮನಿರ್ದೇಶನಗೊಂಡ ವಿಜಯಮ್ಮ, ವೆಂಕಟಶಿವಪ್ಪ, ಚಂದ್ರಪ್ಪ, ಎನ್.ಎಸ್.ಭಾಗ್ಯ, ಪ್ರೇಮಾ, ಕಲಾವತಿ, ಎ.ಬಿ.ನವೀನಾ, ಮಂಜುನಾಥ್, ವೆಂಕಟಾಚಲಪತಿಗೌಡ, ಎಂ.ನಾಗರಾಜ್ ಅವರನ್ನು ಸನ್ಮಾನಿಸಲಾಯಿತು.</p>.<p>ಸಂಘದ ಜಿಲ್ಲಾ ಕಾರ್ಯದರ್ಶಿ ಶಿವಕುಮಾರ್, ಗೌರವಾಧ್ಯಕ್ಷ ಎನ್.ಶ್ರೀನಿವಾಸರೆಡ್ಡಿ, ರಾಜ್ಯ ಪರಿಷತ್ ಸದಸ್ಯ ಗೌತಮ್, ಜಂಟಿ ಕಾರ್ಯದರ್ಶಿಗಳಾದ ಕದಿರಪ್ಪ, ಮಂಜುನಾಥ್, ರವಿ, ಸಂಘಟನಾ ಕಾರ್ಯದರ್ಶಿ ಅನಿಲ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>