<p><strong>ಕೋಲಾರ</strong>: ‘ಹಿಂದಿ ನಮ್ಮ ರಾಷ್ಟ್ರ ಭಾಷೆ. ರಾಜ್ಯ ಸರ್ಕಾರ ಈ ಭಾಷೆ ಕೈಬಿಟ್ಟರೆ ಹೋರಾಟ ಮಾಡುತ್ತೇನೆ’ ಎಂದು ಮುಳಬಾಗಿಲು ಕ್ಷೇತ್ರದ ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಹೇಳಿದ್ದಾರೆ.</p>.<p>ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ವಿರೋಧ ವ್ಯಕ್ತವಾಗಿದೆ. ಹೇಳಿಕೆ ವಿವಾದದ ಸ್ವರೂಪ ಪಡೆಯುತ್ತಲೇ ಎಚ್ಚೆತ್ತುಕೊಂಡ ಅವರು ಗುರುವಾರ ಕ್ಷಮೆ ಯಾಚಿಸಿದ್ದಾರೆ.</p>.<p>‘ನಾನೂ ಕರ್ನಾಟಕದವನು. ಕನ್ನಡಿಗ, ಕನ್ನಡ ಪ್ರೇಮಿ. ಹಿಂದಿ ಶಿಕ್ಷಕರಿಗೆ ಅನ್ಯಾಯ ಆಗಬಾರೆಂಬುದು ನನ್ನ ಕಾಳಜಿ ಆಗಿತ್ತು. ಹಿಂದೆ ಹೇರಿಕೆ ಬೆಂಬಲಿಸಿ ಈ ಹೇಳಿಕೆ ನೀಡಿಲ್ಲ. ಯಾರಿಗಾದರೂ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ’ ಎಂದು ಸ್ಪಷ್ಟನೆ ನೀಡಿದ್ದಾರೆ.</p>.<p>ಹಿನ್ನೆಲೆ: ಮುಳಬಾಗಿಲು ತಾಲ್ಲೂಕಿನ ದುಗ್ಗಸಂದ್ರದಲ್ಲಿ ಮಂಗಳವಾರ ಹೋಬಳಿ ಮಟ್ಟದ ಶಾಲಾ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು, ‘ಹಿಂದಿ ನಮ್ಮ ರಾಷ್ಟ್ರ ಭಾಷೆ. ಹಿಂದಿ ಭಾಷೆ ಕೈಬಿಟ್ಟರೆ ಹೋರಾಟ ಮಾಡುತ್ತೇನೆ‘ ಎಂದಿದ್ದರು.</p>.<p>‘ಈ ಭಾಷೆ ಕೈಬಿಟ್ಟರೆ ಮುಂದೆ ಕಷ್ಟವಾಗುತ್ತದೆ. ಬಹುತೇಕ ಸಂಸದರು ಹಿಂದಿ ಮಾತನಾಡಲು ಕಷ್ಟ ಪಡುತ್ತಾರೆ. ಹೀಗಾಗಿ, ಹಿಂದಿ ಬೇಕೇಬೇಕು’ ಎಂದು ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೋಲಾರ</strong>: ‘ಹಿಂದಿ ನಮ್ಮ ರಾಷ್ಟ್ರ ಭಾಷೆ. ರಾಜ್ಯ ಸರ್ಕಾರ ಈ ಭಾಷೆ ಕೈಬಿಟ್ಟರೆ ಹೋರಾಟ ಮಾಡುತ್ತೇನೆ’ ಎಂದು ಮುಳಬಾಗಿಲು ಕ್ಷೇತ್ರದ ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಹೇಳಿದ್ದಾರೆ.</p>.<p>ಹೇಳಿಕೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರಿ ವಿರೋಧ ವ್ಯಕ್ತವಾಗಿದೆ. ಹೇಳಿಕೆ ವಿವಾದದ ಸ್ವರೂಪ ಪಡೆಯುತ್ತಲೇ ಎಚ್ಚೆತ್ತುಕೊಂಡ ಅವರು ಗುರುವಾರ ಕ್ಷಮೆ ಯಾಚಿಸಿದ್ದಾರೆ.</p>.<p>‘ನಾನೂ ಕರ್ನಾಟಕದವನು. ಕನ್ನಡಿಗ, ಕನ್ನಡ ಪ್ರೇಮಿ. ಹಿಂದಿ ಶಿಕ್ಷಕರಿಗೆ ಅನ್ಯಾಯ ಆಗಬಾರೆಂಬುದು ನನ್ನ ಕಾಳಜಿ ಆಗಿತ್ತು. ಹಿಂದೆ ಹೇರಿಕೆ ಬೆಂಬಲಿಸಿ ಈ ಹೇಳಿಕೆ ನೀಡಿಲ್ಲ. ಯಾರಿಗಾದರೂ ನೋವಾಗಿದ್ದರೆ ಕ್ಷಮೆಯಾಚಿಸುತ್ತೇನೆ’ ಎಂದು ಸ್ಪಷ್ಟನೆ ನೀಡಿದ್ದಾರೆ.</p>.<p>ಹಿನ್ನೆಲೆ: ಮುಳಬಾಗಿಲು ತಾಲ್ಲೂಕಿನ ದುಗ್ಗಸಂದ್ರದಲ್ಲಿ ಮಂಗಳವಾರ ಹೋಬಳಿ ಮಟ್ಟದ ಶಾಲಾ ಕ್ರೀಡಾಕೂಟದ ಉದ್ಘಾಟನಾ ಕಾರ್ಯಕ್ರಮದಲ್ಲಿ ಮಾತನಾಡಿದ್ದ ಅವರು, ‘ಹಿಂದಿ ನಮ್ಮ ರಾಷ್ಟ್ರ ಭಾಷೆ. ಹಿಂದಿ ಭಾಷೆ ಕೈಬಿಟ್ಟರೆ ಹೋರಾಟ ಮಾಡುತ್ತೇನೆ‘ ಎಂದಿದ್ದರು.</p>.<p>‘ಈ ಭಾಷೆ ಕೈಬಿಟ್ಟರೆ ಮುಂದೆ ಕಷ್ಟವಾಗುತ್ತದೆ. ಬಹುತೇಕ ಸಂಸದರು ಹಿಂದಿ ಮಾತನಾಡಲು ಕಷ್ಟ ಪಡುತ್ತಾರೆ. ಹೀಗಾಗಿ, ಹಿಂದಿ ಬೇಕೇಬೇಕು’ ಎಂದು ಹೇಳಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>