<p><strong>ಮುಳಬಾಗಿಲು</strong>: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಹಾಗೂ ಇತ್ತೀಚೆಗೆ ನಡೆದ ದೀಪುದಾಸ್ ಅವರ ಕೊಲೆ ಖಂಡಿಸಿ ಹಿಂದೂಪರ ಸಂಘಟನೆಗಳು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.</p>.<p>ನೆರೆಯ ಬಾಂಗ್ಲಾದೇಶದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ದೌರ್ಜನ್ಯ ಹಾಗೂ ದೀಪೂದಾಸ್ ಎಂಬುವವರನ್ನು ಹಲ್ಲೆ ನಡೆಸಿ ಕೊಲೆ ಮಾಡಿ, ನಂತರ ಮರಕ್ಕೆ ನೇಣು ಹಾಕಿ ಶವಕ್ಕೂ ಚಿತ್ರಹಿಂಸೆ ನೀಡಿದ್ದಾರೆ. ಈ ರೀತಿ ಅಮಾನುಷವಾಗಿ ಹಿಂದೂಗಳ ಮೇಲೆ ಮೃಗೀಯ ವರ್ತನೆ ತೋರುತ್ತಿರುವ ಬಾಂಗ್ಲಾಗಳ ಮೇಲೆ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.</p>.<p>ನಗರದ ವಿಠಲೇಶ್ವರ ನಗರ, ಬಜಾರು ರಸ್ತೆ, ಡಿವಿಜಿ ವೃತ್ತ, ಕೆಇಬಿ ವೃತ್ತ, ಬಸ್ ನಿಲ್ದಾಣ ರಸ್ತೆ, ಡಿವಿಜಿ ವೃತ್ತ ಮತ್ತಿತರರ ಬೀದಿಗಳಲ್ಲಿ ಬಾಂಗ್ಲಾದೇಶದ ವಿರುದ್ಧ ಹಾಗೂ ಹಲ್ಲೆಕೋರರ ವಿರುದ್ಧ ಧಿಕ್ಕಾರ ಕೂಗುತ್ತಾ ಮೆರವಣಿಗೆಯಲ್ಲಿ ಸಾಗಿದರು.</p>.<p>ನಂತರ ತಾಲ್ಲೂಕು ಕಚೇರಿಯ ಮುಂದೆ ನೂರಾರು ಮಂದಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ದೀಪ್ದಾಸ್ ಕಗ್ಗೊಲೆಗೆ ಕಾರಣರಾದವರ ಮೇಲೆ ವಿಶ್ವಸಂಸ್ಥೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.</p>.<p>ನಂತರ ಹಿಂದೂಪರ ಸಂಘಟನೆಗಳ ಮುಖಂಡ ಶಂಕರ್ ಕೇಸರಿ ಮಾತನಾಡಿ, ಪ್ರಪಂಚದಲ್ಲಿ ಮನುಷ್ಯರೆಲ್ಲರೂ ಒಂದೇ. ಆದರೆ, ಬಾಂಗ್ಲಾದೇಶದಲ್ಲಿ ಮುಸಲ್ಮಾನರು ಹಿಂದೂಗಳ ಮೇಲೆ ನರಮೇಧ ನಡೆಸುತ್ತಿರುವುದು ಹೇಯಕೃತ್ಯ. ಹಾಗಾಗಿ ದೀಪ್ದಾಸ್ ಮೇಲೆ ಹಲ್ಲೆ ನಡೆಸಿ ಕೊಲೆ ನಡೆಸಿರುವರನ್ನು ಗಲ್ಲಿಗೇರಿಸಬೇಕು. ಹಿಂದೂಗಳಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದರು.</p>.<p>ನಂತರ ಪ್ರತಿಭಟನಾಕಾರರು ತಹಶೀಲ್ದಾರ್ ವಿ.ಗೀತಾ ಅವರ ಮೂಲಕ ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ತಹಶೀಲ್ದಾರ್ ಜಿಲ್ಲಾಧಿಕಾರಿಗಳ ಮೂಲಕ ಮನವಿಯನ್ನು ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ಹಸ್ತಾಂತರಿಸಲಾಗುವುದು ಎಂದರು.</p>.<p>ಸತೀಶ್ ಕುಮಾರ್, ಶಕ್ತಿಪ್ರಸಾದ್, ಮೈಸೂರು ಸುರೇಶ್ ರಾಜು, ನಂದಕಿಶೋರ್, ಮೈಕ್ಶಂಕರ್, ವೆಂಕಟೇಶಪ್ಪ, ನಂಗಲಿ ವಿಶ್ವನಾಥ ರೆಡ್ಡಿ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮುಳಬಾಗಿಲು</strong>: ಬಾಂಗ್ಲಾದೇಶದಲ್ಲಿ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯ ಹಾಗೂ ಇತ್ತೀಚೆಗೆ ನಡೆದ ದೀಪುದಾಸ್ ಅವರ ಕೊಲೆ ಖಂಡಿಸಿ ಹಿಂದೂಪರ ಸಂಘಟನೆಗಳು ನಗರದಲ್ಲಿ ಶುಕ್ರವಾರ ಪ್ರತಿಭಟನೆ ನಡೆಸಿ, ತಹಶೀಲ್ದಾರ್ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.</p>.<p>ನೆರೆಯ ಬಾಂಗ್ಲಾದೇಶದಲ್ಲಿ ದಿನೇ ದಿನೇ ಹೆಚ್ಚುತ್ತಿರುವ ದೌರ್ಜನ್ಯ ಹಾಗೂ ದೀಪೂದಾಸ್ ಎಂಬುವವರನ್ನು ಹಲ್ಲೆ ನಡೆಸಿ ಕೊಲೆ ಮಾಡಿ, ನಂತರ ಮರಕ್ಕೆ ನೇಣು ಹಾಕಿ ಶವಕ್ಕೂ ಚಿತ್ರಹಿಂಸೆ ನೀಡಿದ್ದಾರೆ. ಈ ರೀತಿ ಅಮಾನುಷವಾಗಿ ಹಿಂದೂಗಳ ಮೇಲೆ ಮೃಗೀಯ ವರ್ತನೆ ತೋರುತ್ತಿರುವ ಬಾಂಗ್ಲಾಗಳ ಮೇಲೆ ಕೂಡಲೇ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.</p>.<p>ನಗರದ ವಿಠಲೇಶ್ವರ ನಗರ, ಬಜಾರು ರಸ್ತೆ, ಡಿವಿಜಿ ವೃತ್ತ, ಕೆಇಬಿ ವೃತ್ತ, ಬಸ್ ನಿಲ್ದಾಣ ರಸ್ತೆ, ಡಿವಿಜಿ ವೃತ್ತ ಮತ್ತಿತರರ ಬೀದಿಗಳಲ್ಲಿ ಬಾಂಗ್ಲಾದೇಶದ ವಿರುದ್ಧ ಹಾಗೂ ಹಲ್ಲೆಕೋರರ ವಿರುದ್ಧ ಧಿಕ್ಕಾರ ಕೂಗುತ್ತಾ ಮೆರವಣಿಗೆಯಲ್ಲಿ ಸಾಗಿದರು.</p>.<p>ನಂತರ ತಾಲ್ಲೂಕು ಕಚೇರಿಯ ಮುಂದೆ ನೂರಾರು ಮಂದಿ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ದೀಪ್ದಾಸ್ ಕಗ್ಗೊಲೆಗೆ ಕಾರಣರಾದವರ ಮೇಲೆ ವಿಶ್ವಸಂಸ್ಥೆ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.</p>.<p>ನಂತರ ಹಿಂದೂಪರ ಸಂಘಟನೆಗಳ ಮುಖಂಡ ಶಂಕರ್ ಕೇಸರಿ ಮಾತನಾಡಿ, ಪ್ರಪಂಚದಲ್ಲಿ ಮನುಷ್ಯರೆಲ್ಲರೂ ಒಂದೇ. ಆದರೆ, ಬಾಂಗ್ಲಾದೇಶದಲ್ಲಿ ಮುಸಲ್ಮಾನರು ಹಿಂದೂಗಳ ಮೇಲೆ ನರಮೇಧ ನಡೆಸುತ್ತಿರುವುದು ಹೇಯಕೃತ್ಯ. ಹಾಗಾಗಿ ದೀಪ್ದಾಸ್ ಮೇಲೆ ಹಲ್ಲೆ ನಡೆಸಿ ಕೊಲೆ ನಡೆಸಿರುವರನ್ನು ಗಲ್ಲಿಗೇರಿಸಬೇಕು. ಹಿಂದೂಗಳಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿದರು.</p>.<p>ನಂತರ ಪ್ರತಿಭಟನಾಕಾರರು ತಹಶೀಲ್ದಾರ್ ವಿ.ಗೀತಾ ಅವರ ಮೂಲಕ ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು. ಮನವಿ ಸ್ವೀಕರಿಸಿದ ತಹಶೀಲ್ದಾರ್ ಜಿಲ್ಲಾಧಿಕಾರಿಗಳ ಮೂಲಕ ಮನವಿಯನ್ನು ರಾಷ್ಟ್ರಪತಿ ಹಾಗೂ ರಾಜ್ಯಪಾಲರಿಗೆ ಹಸ್ತಾಂತರಿಸಲಾಗುವುದು ಎಂದರು.</p>.<p>ಸತೀಶ್ ಕುಮಾರ್, ಶಕ್ತಿಪ್ರಸಾದ್, ಮೈಸೂರು ಸುರೇಶ್ ರಾಜು, ನಂದಕಿಶೋರ್, ಮೈಕ್ಶಂಕರ್, ವೆಂಕಟೇಶಪ್ಪ, ನಂಗಲಿ ವಿಶ್ವನಾಥ ರೆಡ್ಡಿ ಮತ್ತಿತರರು ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>