ಕೀಳು ಭಾವನೆ: ‘ಏಡ್ಸ್ ಮಾರಕ ರೋಗವಾಗಿದ್ದು, ಸಮಾಜದಲ್ಲಿ ಇದನ್ನು ನಿಯಂತ್ರಿಸದಿದ್ದರೆ ಸಂಕಷ್ಟ ಎದುರಾಗುತ್ತದೆ. ಎಚ್ಐವಿ ಸೋಂಕು ಪೀಡಿತರ ಬಗ್ಗೆ ಸಮಾಜದಲ್ಲಿ ಕೀಳು ಭಾವನೆಯಿದೆ. ಅಲ್ಲದೇ, ಅವರನ್ನು ಸಮಾಜದ ಮುಖ್ಯ ವಾಹಿನಿಯಿಂದ ದೂರವಿಡುವ ಪ್ರಯತ್ನ ನಡೆಯುತ್ತಿದೆ’ ಎಂದು ಜಿಲ್ಲಾ ಏಡ್ಸ್ ನಿಯಂತ್ರಣಾಧಿಕಾರಿ ಡಾ.ಎಂ.ಜಗದೀಶ್ ಬೇಸರ ವ್ಯಕ್ತಪಡಿಸಿದರು.