<p><strong>ಬಂಗಾರಪೇಟೆ:</strong> ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರ ನಡುವೆ ಸಮನ್ವಯತೆ ಸಾಧಿಸಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ‘ಮನೆ ಮನೆಗೆ ಪೊಲೀಸ್‘ ಎಂಬ ವಿನೂತನ ಅಭಿಯಾನ ಜಾರಿಗೆ ತರಲಾಗಿದೆ ಎಂದು ಪೊಲೀಸ್ ಇನ್ ಸ್ಪೆಕ್ಟರ್ ಆರ್.ದಯಾನಂದ್ ತಿಳಿಸಿದರು.</p>.<p>ಪಟ್ಟಣದ ವಿಜಯನಗರ ಬಡಾವಣೆ ಒಳಗೊಂಡಂತೆ ಇತರ ಪ್ರದೇಶಗಳಲ್ಲಿ ಸರ್ಕಾರದ ಆದೇಶದಂತೆ ‘ಮನೆ ಮನೆಗೆ ಪೊಲೀಸ್’ ಯೋಜನೆ ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ಶನಿವಾರ ಕರಪತ್ರ ಹಂಚಿಕೆ ಮಾಡಿ ಅರಿವು ಮೂಡಿಸಲಾಗಿದೆ ಎಂದರು.</p>.<p>ಪೊಲೀಸ್ ಇಲಾಖೆ ಮೇಲೆ ಜನರಿಗೆ ಇರುವ ಅಭಿಪ್ರಾಯ ದೂರಮಾಡಿ ಸಮಾಜದ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕರೊಂದಿಗೆ ಸಮನ್ವಯತೆ ಸಾಧಿಸಿ ಅಪರಾಧ ಮುಕ್ತ ಸಮಾಜ ನಿರ್ಮಾಣ ಮಾಡಲು ಸಹಕಾರಿಯಾಗಿದೆ ಎಂದರು.</p>.<p>ದೇಶದಲ್ಲೇ ಮೊಟ್ಟಮೊದಲ ಬಾರಿಗೆ ‘ಮನೆ ಮನೆಗೆ ಪೊಲೀಸ್’ ಎಂಬ ಕಾರ್ಯಕ್ರಮ ರೂಪಿಸಿರುವುದರಿಂದ ಎಲ್ಲರಿಗೂ ಅನುಕೂಲವಾಗಿದೆ. ಪೊಲೀಸ್ ವ್ಯವಸ್ಥೆಯಲ್ಲಿ ಸಾರ್ವಜನಿಕ ಸಹಭಾಗಿತ್ವಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದೆ. ತುರ್ತು ಸಂದರ್ಭಗಳಲ್ಲಿ ಟೋಲ್ ಫ್ರೀ ಸಂಖ್ಯೆಗೆ 112 ಕರೆ ಮಾಡುವಂತೆ ತಿಳಿಸಿದರು. </p>.<p>ಪೊಲೀಸ್ ಸಬ್ ಇನ್ಸ್ಪೆಕ್ಟರ್ ರಾಜಣ್ಣ, ಎನ್.ಪಿ ಸಿಂಗ್, ಸಿಬ್ಬಂದಿ ಮಂಜುನಾಥ್, ಹರೀಶ್, ಅಮೃತಾ, ರಜನಿ, ವಿಜಯಲಕ್ಷ್ಮಿ, ಸುರೇಶ್, ಮಧು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬಂಗಾರಪೇಟೆ:</strong> ಪೊಲೀಸ್ ಇಲಾಖೆ ಹಾಗೂ ಸಾರ್ವಜನಿಕರ ನಡುವೆ ಸಮನ್ವಯತೆ ಸಾಧಿಸಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಸರ್ಕಾರ ‘ಮನೆ ಮನೆಗೆ ಪೊಲೀಸ್‘ ಎಂಬ ವಿನೂತನ ಅಭಿಯಾನ ಜಾರಿಗೆ ತರಲಾಗಿದೆ ಎಂದು ಪೊಲೀಸ್ ಇನ್ ಸ್ಪೆಕ್ಟರ್ ಆರ್.ದಯಾನಂದ್ ತಿಳಿಸಿದರು.</p>.<p>ಪಟ್ಟಣದ ವಿಜಯನಗರ ಬಡಾವಣೆ ಒಳಗೊಂಡಂತೆ ಇತರ ಪ್ರದೇಶಗಳಲ್ಲಿ ಸರ್ಕಾರದ ಆದೇಶದಂತೆ ‘ಮನೆ ಮನೆಗೆ ಪೊಲೀಸ್’ ಯೋಜನೆ ಕಾರ್ಯಗತಗೊಳಿಸುವ ನಿಟ್ಟಿನಲ್ಲಿ ಶನಿವಾರ ಕರಪತ್ರ ಹಂಚಿಕೆ ಮಾಡಿ ಅರಿವು ಮೂಡಿಸಲಾಗಿದೆ ಎಂದರು.</p>.<p>ಪೊಲೀಸ್ ಇಲಾಖೆ ಮೇಲೆ ಜನರಿಗೆ ಇರುವ ಅಭಿಪ್ರಾಯ ದೂರಮಾಡಿ ಸಮಾಜದ ಸ್ವಾಸ್ಥ್ಯ ಕಾಪಾಡುವ ನಿಟ್ಟಿನಲ್ಲಿ ಸಾರ್ವಜನಿಕರೊಂದಿಗೆ ಸಮನ್ವಯತೆ ಸಾಧಿಸಿ ಅಪರಾಧ ಮುಕ್ತ ಸಮಾಜ ನಿರ್ಮಾಣ ಮಾಡಲು ಸಹಕಾರಿಯಾಗಿದೆ ಎಂದರು.</p>.<p>ದೇಶದಲ್ಲೇ ಮೊಟ್ಟಮೊದಲ ಬಾರಿಗೆ ‘ಮನೆ ಮನೆಗೆ ಪೊಲೀಸ್’ ಎಂಬ ಕಾರ್ಯಕ್ರಮ ರೂಪಿಸಿರುವುದರಿಂದ ಎಲ್ಲರಿಗೂ ಅನುಕೂಲವಾಗಿದೆ. ಪೊಲೀಸ್ ವ್ಯವಸ್ಥೆಯಲ್ಲಿ ಸಾರ್ವಜನಿಕ ಸಹಭಾಗಿತ್ವಕ್ಕೆ ಹೆಚ್ಚಿನ ಮಹತ್ವ ನೀಡಲಾಗಿದೆ. ತುರ್ತು ಸಂದರ್ಭಗಳಲ್ಲಿ ಟೋಲ್ ಫ್ರೀ ಸಂಖ್ಯೆಗೆ 112 ಕರೆ ಮಾಡುವಂತೆ ತಿಳಿಸಿದರು. </p>.<p>ಪೊಲೀಸ್ ಸಬ್ ಇನ್ಸ್ಪೆಕ್ಟರ್ ರಾಜಣ್ಣ, ಎನ್.ಪಿ ಸಿಂಗ್, ಸಿಬ್ಬಂದಿ ಮಂಜುನಾಥ್, ಹರೀಶ್, ಅಮೃತಾ, ರಜನಿ, ವಿಜಯಲಕ್ಷ್ಮಿ, ಸುರೇಶ್, ಮಧು ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>