<p>ಕೋಲಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಮಾಜ ಸೇವೆಗಾಗಿ ಕೋಲಾರದ ಶ್ರೀ ದೇವರಾಜ ಅರಸು ಉನ್ನತ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯು ಗೌರವ ಡಾಕ್ಟರೇಟ್ ಪದವಿ ಘೋಷಿಸಿದೆ.</p>.<p>ನಗರ ಹೊರವಲಯದ ಟಮಕದಲ್ಲಿರುವ ಆರ್.ಎಲ್.ಜಾಲಪ್ಪ ರಜತ ಮಹೋತ್ಸವ ಸಭಾಂಗಣದಲ್ಲಿ ಗುರುವಾರ ನಡೆದ ಸಂಸ್ಥೆಯ 15ನೇ ವಾರ್ಷಿಕ ಘಟಿಕೋತ್ಸವದಲ್ಲಿ ಸಂಸ್ಥೆಯ ಕುಲಾಧಿಪತಿ ಜಿ.ಎಚ್.ನಾಗರಾಜ್ ಈ ಘೋಷಣೆ ಮಾಡಿದರು.</p>.<p>'ಸಂಸ್ಥೆಯ ಕಾರ್ಯಕಾರಿ ಮತ್ತು ಶೈಕ್ಷಣಿಕ ಮಂಡಳಿಯು ಒಮ್ಮತದಿಂದ ಈ ತೀರ್ಮಾನ ಕೈಗೊಂಡಿದೆ. ಸಿದ್ದರಾಮಯ್ಯ ಎರಡು ಬಾರಿ ಮುಖ್ಯಮಂತ್ರಿಯಾಗಿ 16 ಬಾರಿ ಬಜೆಟ್ ಮಂಡಿಸಿದ್ದಾರೆ. ಎಲ್ಲಾ ಸಮುದಾಯಗಳಿಗೆ ಐದು ಗ್ಯಾರಂಟಿ ಯೋಜನೆ ಜಾರಿ ಮೂಲಕ ಹೊಸ ಭಾಷ್ಯ ಬರೆದಿದ್ದಾರೆ. ಯಾವುದೇ ಸರ್ಕಾರದಿಂದ ಇಂಥ ಕೆಲಸ ಆಗಿರಲಿಲ್ಲ. ಅವರಿಗೆ ಬಹಳ ಹಿಂದೆಯೇ ಈ ಗೌರವ ಸಲ್ಲಿಸಬೇಕಿತ್ತು. ಈಗ ನಿರ್ಧಾರ ಕೈಗೊಂಡಿದ್ದು, ಇನ್ನೂ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿಲ್ಲ. ವಿಚಾರ ತಿಳಿಸಿ ಕೋಲಾರಕ್ಕೆ ಕಾರ್ಯಕ್ರಮಕ್ಕೆ ಬಂದಾಗ ಪ್ರದಾನ ಮಾಡಲಾಗುವುದು' ಎಂದರು.</p>.<p>ಘಟಿಕೋತ್ಸವದಲ್ಲಿ 377 ವಿದ್ಯಾರ್ಥಿಗಳಿಗೆ ಪದವಿ ಹಾಗೂ 23 ಮಂದಿಗೆ ಚಿನ್ನದ ಪದಕ ಪ್ರದಾನ ಮಾಡಲಾಯಿತು. ಬೆಂಗಳೂರಿನ ಕಿದ್ವಾಯಿ ಸಂಸ್ಥೆಯ ಮಾಜಿ ನಿರ್ದೇಶಕಿ ಡಾ.ದೇಶಮಾನೆ ವಿಜಯಲಕ್ಷ್ಮಿ ಹಾಗೂ ಶ್ರೀ ದೇವರಾಜ ಅರಸು ಶೈಕ್ಷಣಿಕ ಟ್ರಸ್ಟ್ ಉಪಾಧ್ಯಕ್ಷ ಜೆ.ರಾಜೇಂದ್ರ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಕೋಲಾರ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಮಾಜ ಸೇವೆಗಾಗಿ ಕೋಲಾರದ ಶ್ರೀ ದೇವರಾಜ ಅರಸು ಉನ್ನತ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆಯು ಗೌರವ ಡಾಕ್ಟರೇಟ್ ಪದವಿ ಘೋಷಿಸಿದೆ.</p>.<p>ನಗರ ಹೊರವಲಯದ ಟಮಕದಲ್ಲಿರುವ ಆರ್.ಎಲ್.ಜಾಲಪ್ಪ ರಜತ ಮಹೋತ್ಸವ ಸಭಾಂಗಣದಲ್ಲಿ ಗುರುವಾರ ನಡೆದ ಸಂಸ್ಥೆಯ 15ನೇ ವಾರ್ಷಿಕ ಘಟಿಕೋತ್ಸವದಲ್ಲಿ ಸಂಸ್ಥೆಯ ಕುಲಾಧಿಪತಿ ಜಿ.ಎಚ್.ನಾಗರಾಜ್ ಈ ಘೋಷಣೆ ಮಾಡಿದರು.</p>.<p>'ಸಂಸ್ಥೆಯ ಕಾರ್ಯಕಾರಿ ಮತ್ತು ಶೈಕ್ಷಣಿಕ ಮಂಡಳಿಯು ಒಮ್ಮತದಿಂದ ಈ ತೀರ್ಮಾನ ಕೈಗೊಂಡಿದೆ. ಸಿದ್ದರಾಮಯ್ಯ ಎರಡು ಬಾರಿ ಮುಖ್ಯಮಂತ್ರಿಯಾಗಿ 16 ಬಾರಿ ಬಜೆಟ್ ಮಂಡಿಸಿದ್ದಾರೆ. ಎಲ್ಲಾ ಸಮುದಾಯಗಳಿಗೆ ಐದು ಗ್ಯಾರಂಟಿ ಯೋಜನೆ ಜಾರಿ ಮೂಲಕ ಹೊಸ ಭಾಷ್ಯ ಬರೆದಿದ್ದಾರೆ. ಯಾವುದೇ ಸರ್ಕಾರದಿಂದ ಇಂಥ ಕೆಲಸ ಆಗಿರಲಿಲ್ಲ. ಅವರಿಗೆ ಬಹಳ ಹಿಂದೆಯೇ ಈ ಗೌರವ ಸಲ್ಲಿಸಬೇಕಿತ್ತು. ಈಗ ನಿರ್ಧಾರ ಕೈಗೊಂಡಿದ್ದು, ಇನ್ನೂ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿಲ್ಲ. ವಿಚಾರ ತಿಳಿಸಿ ಕೋಲಾರಕ್ಕೆ ಕಾರ್ಯಕ್ರಮಕ್ಕೆ ಬಂದಾಗ ಪ್ರದಾನ ಮಾಡಲಾಗುವುದು' ಎಂದರು.</p>.<p>ಘಟಿಕೋತ್ಸವದಲ್ಲಿ 377 ವಿದ್ಯಾರ್ಥಿಗಳಿಗೆ ಪದವಿ ಹಾಗೂ 23 ಮಂದಿಗೆ ಚಿನ್ನದ ಪದಕ ಪ್ರದಾನ ಮಾಡಲಾಯಿತು. ಬೆಂಗಳೂರಿನ ಕಿದ್ವಾಯಿ ಸಂಸ್ಥೆಯ ಮಾಜಿ ನಿರ್ದೇಶಕಿ ಡಾ.ದೇಶಮಾನೆ ವಿಜಯಲಕ್ಷ್ಮಿ ಹಾಗೂ ಶ್ರೀ ದೇವರಾಜ ಅರಸು ಶೈಕ್ಷಣಿಕ ಟ್ರಸ್ಟ್ ಉಪಾಧ್ಯಕ್ಷ ಜೆ.ರಾಜೇಂದ್ರ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>